AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೀಕಾಂತ್​ ತಿವಾರಿಯಂತೆ ದೈಹಿಕ ಅಂತರ ಕಾಯ್ದುಕೊಳ್ಳಿ’- ಕೊವಿಡ್​ ನಿಯಂತ್ರಣಕ್ಕೆ ‘ದಿ ಫ್ಯಾಮಿಲಿ ಮ್ಯಾನ್​ 2’ ಪೋಸ್ಟ್​ ಹಂಚಿಕೊಂಡ ಕೇಂದ್ರ ಸರ್ಕಾರ

ಇತ್ತೀಚೆಗೆ ಹಂಚಿಕೊಂಡ ಪೋಸ್ಟ್​ವೊಂದರಲ್ಲಿ, ಎರಡೂ ಡೋಸ್​ ಲಸಿಕೆ ಪಡೆದ ಬಳಿಕವೂ ಕೊವಿಡ್​ ಕುರಿತಾಗಿ ನಿರ್ಲಕ್ಷ್ಯ ಬೇಡ.​​ ನಿಯಂತ್ರಣಕ್ಕೆ ಜಾರಿಗೆ ತಂದ ಕೆಲವು ನಿರ್ಬಂಧಗಳನ್ನು ಪಾಲಿಸಲೇ ಬೇಕು ಎಂಬ ಎಚ್ಚರಿಕೆಯ ಮಾತಿನ ಸಾರ ದೃಶ್ಯದಲ್ಲಿ ಕಾಣಿಸುತ್ತಿದೆ.

‘ಶ್ರೀಕಾಂತ್​ ತಿವಾರಿಯಂತೆ ದೈಹಿಕ ಅಂತರ ಕಾಯ್ದುಕೊಳ್ಳಿ’- ಕೊವಿಡ್​ ನಿಯಂತ್ರಣಕ್ಕೆ 'ದಿ ಫ್ಯಾಮಿಲಿ ಮ್ಯಾನ್​ 2' ಪೋಸ್ಟ್​ ಹಂಚಿಕೊಂಡ ಕೇಂದ್ರ ಸರ್ಕಾರ
TV9 Web
| Edited By: |

Updated on:Jun 16, 2021 | 12:30 PM

Share

ಕೊವಿಡ್​ ನಿಯಂತ್ರಣದ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸುವ ಅದೆಷ್ಟೋ ಪ್ರಯತ್ನಗಳು ನಡೆಯುತ್ತಿವೆ. ದೇಶಾದ್ಯಂತ ಪೊಲೀಸ್​ ಇಲಾಖೆ ಸೇರಿ ಸರ್ಕಾರಿ ಇಲಾಖೆಗಳೆಲ್ಲವೂ ಕೂಡಾ ವಿವಿಧ ಆಲೋಚನೆಗಳೊಂದಿಗೆ ಜನರಿಗೆ ಕೊವಿಡ್​ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುತ್ತಲೇ ಬಂದಿದೆ. ಕೊವಿಡ್​-19 ನಿಯಂತ್ರಣಕ್ಕಾಗಿ, ಜನಪ್ರಿಯತೆ ಗಳಿಸಿಕೊಳ್ಳುತ್ತಿರುವ ‘ಫ್ಯಾಮಿನ್​ ಮ್ಯಾನ್​ 2’ ದೃಶ್ಯವೊಂದು ಇದೀಗ ಭಾರೀ ಸುದ್ದಿಯಲ್ಲಿದೆ. ಈ ಚಿತ್ರದಲ್ಲಿ ಅಭಿನಯಿಸಿದ ಮನೋಜ್​ ಬಾಜ್​ಪಾಯಿ ಅವರ ಶ್ರೀಕಾಂತ್​ ತಿವಾರಿ ಎಂಬ ಪಾತ್ರದ ದೃಶ್ಯವನ್ನು ಕೇಂದ್ರ ಸರ್ಕಾರ ಹಂಚಿಕೊಂಡಿದ್ದು, ಕೊವಿಡ್​-19 ಕುರಿತಾಗಿ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದೆ.

ಸಾಮಾಜಿಕ ಜಾಲತಾಣದ ಮೂಲಕ ಕೊವಿಡ್​ ನಿಯಂತ್ರಣಕ್ಕೆ ಕುರಿತಂತೆ ಜನರಿಗೆ ತಿಳಿಹೇಳುವ ಕುರಿತಾಗಿ ಕೇಂದ್ರ ಸರ್ಕಾರ ಟ್ವೀಟ್​ ಮಾಡಿದೆ. ಇತ್ತೀಚೆಗೆ ಹಂಚಿಕೊಂಡ ಪೋಸ್ಟ್​ವೊಂದರಲ್ಲಿ, ಎರಡೂ ಡೋಸ್​ ಲಸಿಕೆ ಪಡೆದ ಬಳಿಕವೂ ಕೊವಿಡ್​ ಕುರಿತಾಗಿ ನಿರ್ಲಕ್ಷ್ಯ ಬೇಡ.​​ ನಿಯಂತ್ರಣಕ್ಕೆ ಜಾರಿಗೆ ತಂದ ಕೆಲವು ನಿರ್ಬಂಧಗಳನ್ನು ಪಾಲಿಸಲೇ ಬೇಕು ಎಂಬ ಎಚ್ಚರಿಕೆಯ ಮಾತಿನ ಸಾರ ದೃಶ್ಯದಲ್ಲಿ ಕಾಣಿಸುತ್ತಿದೆ.

‘ಎರಡೂ ಡೋಸ್​ ಲಸಿಕೆ ಪಡೆದ ಬಳಿಕವೂ ಶ್ರೀಕಾಂತ್​ ತಿವಾರಿ ಮುಖಗವಸನ್ನು ಧರಿಸಿದ್ದಾರೆ ಮತ್ತು ದೈಹಿಕ ಅಂತರವನ್ನು ಕಾಯ್ದುಕೊಳ್ಳುತ್ತಿದ್ದಾರೆ’ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್​ ಹಂಚಿಕೊಳ್ಳಲಾಗಿದೆ. ಲಸಿಕ ಪಡೆದ ಬಳಿಕವೂ ಪ್ರತಿಕ್ರಿಯೆ ಹೀಗಿರಲಿ ಎಂದು ದೃಶ್ಯ ಹೇಳುತ್ತಿದೆ.

ಮೈಕ್ರೋಬ್ಲಾಗಿಂಗ್​ ವೆಬ್​ಸೈಟ್​ನಲ್ಲಿ ಸಚಿವಾಲಯ ಹಂಚಿಕೊಂಡ ಪೋಸ್ಟ್​ ನೋಡಿದ ನೆಟ್ಟಿಗರು ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊವಿಡ್​-19 ಸೋಂಕಿನ ಕುರಿತಾಗಿ ಜಾಗರೂಕರಾಗಿರಲು ಜನರನ್ನು ಪ್ರೋತ್ಸಾಹಿಸಿದ ಈ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

Samantha Akkineni: ‘ದಿ ಫ್ಯಾಮಿಲಿ ಮ್ಯಾನ್ 2’ಗಾಗಿ ಸಮಂತಾ, ಮನೋಜ್ ಬಾಜಪೇಯಿ ಪಡೆದ ಸಂಭಾವನೆ ಎಷ್ಟು?

‘ದಿ ಫ್ಯಾಮಿಲಿ ಮ್ಯಾನ್​ 3’ ಕಥೆ ಬಹಿರಂಗ; ನಿರ್ದೇಶಕರು ಬಾಯ್ಬಿಟ್ಟ ಸೀಕ್ರೆಟ್​ ಇಲ್ಲಿದೆ

Published On - 12:26 pm, Wed, 16 June 21

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು