AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳಚೆ ನೀರಿನಲ್ಲಿ ಯುವಕರಿಬ್ಬರ ಭಾರೀ ಫೈಟ್;‌ ವೈರಲ್‌ ಆಯ್ತು ವಿಡಿಯೋ

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುವ ಕೆಲವೊಂದು ವಿಡಿಯೋಗಳು ನೋಡುಗರನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಸದ್ಯ ಅಂತಹದ್ದೊಂದು ವಿಡಿಯೋ ಇದೀಗ ವೈರಲ್‌ ಆಗಿದ್ದು, ಹುಡುಗರಿಬ್ಬರು ಚರಂಡಿಯಲ್ಲಿ ಬಿದ್ದು, ಹೊರಳಾಡಿ ಅದೇ ಕೊಚ್ಚೆ ನೀರಿನಲ್ಲಿ ಹಂದಿಗಳಂತೆ ಜಗಳವಾಡಿದ್ದಾರೆ. ಈ ದೃಶ್ಯವನ್ನು ಕಂಡು ಇದೆಂಥಾ ಅವಸ್ಥೆ ಮಾರ್ರೆ ಎಂದು ನೆಟ್ಟಿಗರು ತಲೆ ಚಚ್ಚಿಕೊಂಡಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on: Oct 27, 2024 | 2:09 PM

Share

ಈ ಸಮಾಜದಲ್ಲಿ ಜಗಳಗಳಿಗೆ ಕೊರತೆಯೇ ಇಲ್ಲ ಬಿಡಿ. ಪ್ರತಿನಿತ್ಯ ಒಂದಲ್ಲಾ ಒಂದು ವಿಷಯಗಳಿಗೆ ಜಗಳಗಳು ನಡೆಯುತ್ತಲೇ ಇರುತ್ತವೆ. ಮಹಿಳಾ ಮಣಿಗಳ ನಡುವೆ ನೀರಿನ ವಿಚಾರವಾಗಿ ಬಿಂದಿಗೆ ಜಗಳ ನಡೆದರೆ, ಕೆಲ ಪುರುಷರ ನಡುವೆ ಹಣ, ಆಸ್ತಿ ವಿಚಾರವಾಗಿ ಜಗಳಗಳು ನಡೆಯುತ್ತವೆ. ಈ ಗುದ್ದಾಟ, ಜಗಳಗಳ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದರಲ್ಲಿ ಕೆಲವು ಸೀರಿಯಸ್‌ ಫೈಟಿಂಗ್‌ ಸೀನ್‌ಗಳು ಕೂಡಾ ತಮಾಷೆಯ ರೀತಿಯಲ್ಲಿ ಕಾಣುತ್ತದೆ. ಸದ್ಯ ಅಂತಹದ್ದೊಂದು ವಿಡಿಯೋ ಇದೀಗ ವೈರಲ್‌ ಆಗಿದ್ದು, ಹುಡುಗರಿಬ್ಬರು ಚರಂಡಿಯಲ್ಲಿ ಬಿದ್ದು, ಹೊರಳಾಡಿ ಅದೇ ಕೊಚ್ಚೆ ನೀರಿನಲ್ಲಿ ಹಂದಿಗಳಂತೆ ಜಗಳವಾಡಿದ್ದಾರೆ. ಈ ದೃಶ್ಯವನ್ನು ಕಂಡು ಇದೆಂಥಾ ಅವಸ್ಥೆ ಮಾರ್ರೆ ಎಂದು ನೆಟ್ಟಿಗರು ತಲೆ ಚಚ್ಚಿಕೊಂಡಿದ್ದಾರೆ.

ಈ ಕುರಿತ ವಿಡಿಯೋವನ್ನು gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಹಂದಿಗಳು ಕೊಚ್ಚೆ ನೀರಿನಲ್ಲಿ ಬಿದ್ದು ಹೊರಳಾಡುವಂತೆ ಹುಡುಗರಿಬ್ಬರು ಚರಂಡಿ ನೀರಲ್ಲಿ ಬಿದ್ದು, ಹೊರಳಾಡಿ ಜಗಳವಾಡುವಂತಹ ದೃಶ್ಯವನ್ನು ಕಾಣಬಹುದು. ರಸ್ತೆ ಬದಿಯಲ್ಲಿನ ಚರಂಡಿಯೊಳಗೆ ಬಿದ್ದು, ಅಲ್ಲಿಂದ ಹೊರ ಬಾರದೇ ಅದೇ ಕೊಳಚೆ ನೀರಲ್ಲಿ ಹುಡುಗರಿಬ್ಬರು ಜಗಳವಾಡಿದ್ದಾರೆ. ಆ ಸಂದರ್ಭದಲ್ಲಿ ಅಲ್ಲಗೆ ಬಂದ ವ್ಯಕ್ತಿಯೊಬ್ಬರು ದೊಣ್ಣೆಯಲ್ಲಿ ಇಬ್ಬರಿಗೂ ಒಂದೇಟು ಕೊಟ್ಟು ಅಲ್ಲಿಂದ ಓಡಿಸಿದ್ದಾರೆ.

ಇದನ್ನೂ ಓದಿ: ಅಂಗವೈಕಲ್ಯತೆಯನ್ನು ಮೆಟ್ಟಿ ನಿಂತು ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿ, ವಿಡಿಯೋ ವೈರಲ್

ಅಕ್ಟೋಬರ್‌ 24 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಛೀ ಛೀ… ಆ ಗಲೀಜು ನೀರಲ್ಲಿ ಅದ್‌ ಹೆಂಗೆ ಕಾದಾಡಿದ್ರೋʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಬಹುಶಃ ಆ ಇಬ್ಬರು ಮಾದಕ ವ್ಯಸನಿಗಳಾಗಿರಬೇಕು, ಅದೇ ಅಮಲಿನಲ್ಲಿಯೇ ಚರಂಡಿಯಲ್ಲಿ ಬಿದ್ದು ಜಗಳ ಕಾಯ್ದಿದ್ದಾರೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಆ ಕೊಚ್ಚೆ ನೀರಲ್ಲೂ ಅದು ಹೇಗೆ ಜಗಳವಾಡಲು ಮನಸ್ಸು ಬಂತೋʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!