AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೌಮ್ಯ ಸ್ವಭಾವದವರು ಹೀಗೆ ಘೀಳಿಡುತ್ತಾ ಕಾದಾಟಕ್ಕಿಳಿದಿದ್ದೇಕೆ?

Elephant : ಆನೆಗಳು ಬಲವಾಗಿ ಬಾಲವನ್ನು ಅಲ್ಲಾಡಿಸುತ್ತಿವೆ ಎಂದರೆ ಅವುಗಳ ನಡುವಿನ ಸಂಘರ್ಷ ಅತ್ಯಂತ ಪ್ರಬಲವಾಗಿದೆ. ಇತರೇ ಆನೆಗಳು ಅವುಗಳ ಬಳಿ ಸುಳಿಯಬಾರದು ಎಂದು. ಅಷ್ಟಕ್ಕೂ ಯಾಕೆ ಇಷ್ಟೊಂದು ಭಯಂಕರ ಕಾದಾಟ?

Viral Video: ಸೌಮ್ಯ ಸ್ವಭಾವದವರು ಹೀಗೆ ಘೀಳಿಡುತ್ತಾ ಕಾದಾಟಕ್ಕಿಳಿದಿದ್ದೇಕೆ?
ಆನೆಗಳ ಕಾದಾಟ
TV9 Web
| Updated By: ಶ್ರೀದೇವಿ ಕಳಸದ|

Updated on:May 17, 2023 | 12:36 PM

Share

Elephants : ಈ ದೈತ್ಯದೇಹಿ ಎಷ್ಟು ಸೌಮ್ಯ ಮತ್ತು ಸೂಕ್ಷ್ಮವೋ ಅಷ್ಟೇ ಬಲಶಾಲಿಯೂ. ಕಾದಾಟಕ್ಕೆ ನಿಂತರೆ  ಅಷ್ಟೇ! ಈ ಎರಡೂ ಆನೆಗಳಿಗೆ ಅದ್ಯಾಕೆ ಕೋಪ ಬಂದಿದೆಯೋ, ಹೀಗೆ ಸೊಂಡಲಿನೊಳಗೆ ಸೊಂಡಿಲು ಬೆಸೆದು ಘೀಳಿಡುತ್ತ ಗುದ್ದಾಡುವುದಕ್ಕೆ ಕಾರಣವೇನೋ ತಿಳಿಯದು. ದಟ್ಟಕಾಡಿನ ಮಧ್ಯೆ ಸೀಳಿಕೊಂಡು ಹೋಗಿರುವ ರಸ್ತೆಯ ಮೇಲೆ ಇವೆರಡೂ ಹೀಗೆ ಜಗಳಕ್ಕಿಳಿದಿವೆ. ಈ ವಿಡಿಯೋ ಅನ್ನು ಐಎಫ್​ಎಸ್ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋ ಅನ್ನು ಎಲ್ಲಿ ಚಿತ್ರೀಕರಿಸಲಾಗಿದೆ ಎಂದು ತಿಳಿದುಬಂದಿಲ್ಲ. ಆದರೆ ಈ ಎರಡೂ ಆನೆಗಳು ಹೀಗೆ ಇಷ್ಟೊಂದು ಆಕ್ರೋಶದಿಂದ ಗುದುಮುರಿಗೆ ಹಾಕುತ್ತಿರುವುದು ಯಾಕೋ? ನೆಟ್ಟಿಗರು ಅಚ್ಚರಿಯಿಂದ ಈ ವಿಡಿಯೋ ನೋಡುತ್ತಿದ್ದಾರೆ. ಇವು ಘೀಳಿಡುವ ರೀತಿ ಯಾರನ್ನೂ ಬೆಚ್ಚಿಬೀಳಿಸುವಂತಿದೆ. ಈ ವಿಡಿಯೋ ಅನ್ನು ಈತನಕ ಸುಮಾರು 37,000 ಜನರು ನೋಡಿದ್ದಾರೆ.

ಇದನ್ನೂ ಓದಿ : Viral Video: ಶಾರ್ಕ್ ಆಕ್ರಮಿಸಿದಾಗ! ಮುಂದೇನಾಯಿತು ನೋಡಿ ಈ ವಿಡಿಯೋ

ಈ ಭಯಂಕರ ವಿಡಿಯೋ ನೋಡಿದ ನೆಟ್ಟಿಗರು ಅನೇಕ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಇವರು ಅತ್ಯಂತ ಮೃದು ಮತ್ತು ಸೌಮ್ಯ ಸ್ವಭಾವದವರು ಎಂದುಕೊಂಡಿದ್ದೆ. ಆದರೆ ಇವರೂ ಹೀಗೆ ಕಾಳಗಕ್ಕಿಳಿಯುತ್ತಾರೆಂದರೆ ಕಾರಣ ಇದ್ದಿರಲೇಬೇಕು ಎಂದು ಒಬ್ಬರು ಹೇಳಿದ್ದಾರೆ. ಅಬ್ಬಾ ಇವರಿಬ್ಬರ ಈ ಸಂಘರ್ಷ ನೋಡಿ ಮೈನವಿರೆದ್ದಿತು ಎಂದು ಮತ್ತೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ : ಆನೆಗಳು ಭಯಂಕರ ಕಾದಾಟಕ್ಕಿಳಿದಿವೆ, ನೆಟ್ಟಿಗರು ಮಾತ್ರ ಇದು ಪ್ರೀತಿಯ ಆಟ ಎನ್ನುತ್ತಿದ್ದಾರೆ

ಎಷ್ಟೊಂದು ಬಲವಾಗಿ ಬಾಲವನ್ನು ಅಲ್ಲಾಡಿಸುತ್ತಿವೆ ನೋಡಿ. ಬಾಲವನ್ನು ತಿರುಗಿಸುತ್ತವೆ ಎಂದರೆ ಅವು ತಮ್ಮ ಪ್ರಾಬಲ್ಯವನ್ನು ಮೆರೆಯುವ ಸೂಚನೆ. ತಮ್ಮಿಂದ ಇತರೇ ಆನೆಗಳಿಗೆ ದೂರ ಇರುವಂತೆ ಅವು ಎಚ್ಚರಿಕೆ ನೀಡುತ್ತಿವೆ ಎಂದರ್ಥ ಎಂದು ಮಗದೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:34 pm, Wed, 17 May 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ