Viral Video: ಸೌಮ್ಯ ಸ್ವಭಾವದವರು ಹೀಗೆ ಘೀಳಿಡುತ್ತಾ ಕಾದಾಟಕ್ಕಿಳಿದಿದ್ದೇಕೆ?

Elephant : ಆನೆಗಳು ಬಲವಾಗಿ ಬಾಲವನ್ನು ಅಲ್ಲಾಡಿಸುತ್ತಿವೆ ಎಂದರೆ ಅವುಗಳ ನಡುವಿನ ಸಂಘರ್ಷ ಅತ್ಯಂತ ಪ್ರಬಲವಾಗಿದೆ. ಇತರೇ ಆನೆಗಳು ಅವುಗಳ ಬಳಿ ಸುಳಿಯಬಾರದು ಎಂದು. ಅಷ್ಟಕ್ಕೂ ಯಾಕೆ ಇಷ್ಟೊಂದು ಭಯಂಕರ ಕಾದಾಟ?

Viral Video: ಸೌಮ್ಯ ಸ್ವಭಾವದವರು ಹೀಗೆ ಘೀಳಿಡುತ್ತಾ ಕಾದಾಟಕ್ಕಿಳಿದಿದ್ದೇಕೆ?
ಆನೆಗಳ ಕಾದಾಟ
Follow us
| Updated By: ಶ್ರೀದೇವಿ ಕಳಸದ

Updated on:May 17, 2023 | 12:36 PM

Elephants : ಈ ದೈತ್ಯದೇಹಿ ಎಷ್ಟು ಸೌಮ್ಯ ಮತ್ತು ಸೂಕ್ಷ್ಮವೋ ಅಷ್ಟೇ ಬಲಶಾಲಿಯೂ. ಕಾದಾಟಕ್ಕೆ ನಿಂತರೆ  ಅಷ್ಟೇ! ಈ ಎರಡೂ ಆನೆಗಳಿಗೆ ಅದ್ಯಾಕೆ ಕೋಪ ಬಂದಿದೆಯೋ, ಹೀಗೆ ಸೊಂಡಲಿನೊಳಗೆ ಸೊಂಡಿಲು ಬೆಸೆದು ಘೀಳಿಡುತ್ತ ಗುದ್ದಾಡುವುದಕ್ಕೆ ಕಾರಣವೇನೋ ತಿಳಿಯದು. ದಟ್ಟಕಾಡಿನ ಮಧ್ಯೆ ಸೀಳಿಕೊಂಡು ಹೋಗಿರುವ ರಸ್ತೆಯ ಮೇಲೆ ಇವೆರಡೂ ಹೀಗೆ ಜಗಳಕ್ಕಿಳಿದಿವೆ. ಈ ವಿಡಿಯೋ ಅನ್ನು ಐಎಫ್​ಎಸ್ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋ ಅನ್ನು ಎಲ್ಲಿ ಚಿತ್ರೀಕರಿಸಲಾಗಿದೆ ಎಂದು ತಿಳಿದುಬಂದಿಲ್ಲ. ಆದರೆ ಈ ಎರಡೂ ಆನೆಗಳು ಹೀಗೆ ಇಷ್ಟೊಂದು ಆಕ್ರೋಶದಿಂದ ಗುದುಮುರಿಗೆ ಹಾಕುತ್ತಿರುವುದು ಯಾಕೋ? ನೆಟ್ಟಿಗರು ಅಚ್ಚರಿಯಿಂದ ಈ ವಿಡಿಯೋ ನೋಡುತ್ತಿದ್ದಾರೆ. ಇವು ಘೀಳಿಡುವ ರೀತಿ ಯಾರನ್ನೂ ಬೆಚ್ಚಿಬೀಳಿಸುವಂತಿದೆ. ಈ ವಿಡಿಯೋ ಅನ್ನು ಈತನಕ ಸುಮಾರು 37,000 ಜನರು ನೋಡಿದ್ದಾರೆ.

ಇದನ್ನೂ ಓದಿ : Viral Video: ಶಾರ್ಕ್ ಆಕ್ರಮಿಸಿದಾಗ! ಮುಂದೇನಾಯಿತು ನೋಡಿ ಈ ವಿಡಿಯೋ

ಈ ಭಯಂಕರ ವಿಡಿಯೋ ನೋಡಿದ ನೆಟ್ಟಿಗರು ಅನೇಕ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಇವರು ಅತ್ಯಂತ ಮೃದು ಮತ್ತು ಸೌಮ್ಯ ಸ್ವಭಾವದವರು ಎಂದುಕೊಂಡಿದ್ದೆ. ಆದರೆ ಇವರೂ ಹೀಗೆ ಕಾಳಗಕ್ಕಿಳಿಯುತ್ತಾರೆಂದರೆ ಕಾರಣ ಇದ್ದಿರಲೇಬೇಕು ಎಂದು ಒಬ್ಬರು ಹೇಳಿದ್ದಾರೆ. ಅಬ್ಬಾ ಇವರಿಬ್ಬರ ಈ ಸಂಘರ್ಷ ನೋಡಿ ಮೈನವಿರೆದ್ದಿತು ಎಂದು ಮತ್ತೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ : ಆನೆಗಳು ಭಯಂಕರ ಕಾದಾಟಕ್ಕಿಳಿದಿವೆ, ನೆಟ್ಟಿಗರು ಮಾತ್ರ ಇದು ಪ್ರೀತಿಯ ಆಟ ಎನ್ನುತ್ತಿದ್ದಾರೆ

ಎಷ್ಟೊಂದು ಬಲವಾಗಿ ಬಾಲವನ್ನು ಅಲ್ಲಾಡಿಸುತ್ತಿವೆ ನೋಡಿ. ಬಾಲವನ್ನು ತಿರುಗಿಸುತ್ತವೆ ಎಂದರೆ ಅವು ತಮ್ಮ ಪ್ರಾಬಲ್ಯವನ್ನು ಮೆರೆಯುವ ಸೂಚನೆ. ತಮ್ಮಿಂದ ಇತರೇ ಆನೆಗಳಿಗೆ ದೂರ ಇರುವಂತೆ ಅವು ಎಚ್ಚರಿಕೆ ನೀಡುತ್ತಿವೆ ಎಂದರ್ಥ ಎಂದು ಮಗದೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:34 pm, Wed, 17 May 23

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ