AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Story: ಇಂಜಿನಿಯರಿಂಗ್​ ಓದಿ ಕಂಪನಿ ಉದ್ಯೋಗ ಬಿಟ್ಟು ಬಿರಿಯಾನಿ​ ಅಂಗಡಿ ತೆರೆದ​ ಯುವಕರು

ಇಂಜಿನೀಯರಿಂಗ್​​ ಓದಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಇಬ್ಬರು ಯುವಕರು ಕೆಲಸ ಬಿಟ್ಟು ಬೀದಿ ಬದಿಯಲ್ಲಿ ಬಿರಿಯಾನಿ ಅಂಗಡಿ ತೆರೆದಿದ್ದಾರೆ. ಹರಿಯಾಣಾದ ಸೋನಿಪತ್​ನಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವಿಚಾರ ಎಲ್ಲೆಡೆ ವೈರಲ್​ ಆಗಿದೆ.

Viral Story: ಇಂಜಿನಿಯರಿಂಗ್​ ಓದಿ ಕಂಪನಿ ಉದ್ಯೋಗ ಬಿಟ್ಟು ಬಿರಿಯಾನಿ​ ಅಂಗಡಿ ತೆರೆದ​ ಯುವಕರು
ಬಿರಿಯಾನಿ ಅಂಗಡಿ
TV9 Web
| Updated By: Pavitra Bhat Jigalemane|

Updated on:Mar 12, 2022 | 9:48 AM

Share

ಉದ್ಯೋಗ (Job) ಎಲ್ಲರಿಗೂ ಬೇಕು. ಪ್ರತಿದಿನ  9 ಗಂಟೆಯಿಂದ 5 ಗಂಟೆಯವರೆಗೆ ಕೆಲಸ ಮಾಡಿ ಸಂಜೆ ಮನೆಗೆ ಹೋಗುವಷ್ಟರಲ್ಲಿ ಬಸವಳಿದು ಹೋಗುವವರೇ ಹೆಚ್ಚು.  ಮನೆಯ ಸಂಕಷ್ಟ, ಸಾಲ ಹೀಗೆ ನಾನಾ ಕಾರಣಗಳಿಂದ ಒಲ್ಲದ ಮನಸ್ಸಿನಿಂದ ದುಡಿಯುವ ಸಾಕಷ್ಟು ಜನರನ್ನು ಕಾಣಬಹುದು. ಆದರೆ ಕೆಲಸ ಬಿಟ್ಟು  ಸ್ವಂತ ಉದ್ಯೋಗ ಮಾಡುವಷ್ಟು ಧೈರ್ಯ ಎಲ್ಲರಲ್ಲಿಯೂ ಇರುವುದಿಲ್ಲ. ಹಣ ಹೂಡಿಕೆ  ಮಾಡಿ ಕೈಸುಟ್ಟುಕೊಂಡರೆ ಎನ್ನುವ ಭಯವೇ ಹೆಚ್ಚು. ಹೀಗಿದ್ದಾಗ ಇಂಜಿನೀಯರಿಂಗ್​​ ಓದಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಇಬ್ಬರು ಯುವಕರು ಕೆಲಸ ಬಿಟ್ಟು ಬೀದಿ ಬದಿಯಲ್ಲಿ ಬಿರಿಯಾನಿ ಅಂಗಡಿ (Biriyani Stall) ತೆರೆದಿದ್ದಾರೆ. ಹರಿಯಾಣಾದ ಸೋನಿಪತ್​ನಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವಿಚಾರ ಎಲ್ಲೆಡೆ ವೈರಲ್​ ಆಗಿದೆ.

9 ರಿಂದ 5 ಗಂಟೆಯವರೆಗೆ ದುಡಿಯುವ ಬದಲು ರೋಹಿತ್​ ಮತ್ತು ಸಚಿನ್​ ಎನ್ನುವ ಯುವಕರು ವೆಜ್​ ಬಿರಿಯಾನ್​ ಅಂಗಡಿಯನ್ನು ತೆರೆದಿದ್ದಾರೆ. ಎಣ್ಣೆರಹಿತ ಬಿರಿಯಾನಿಗೆ 50 ರೂ ಹಾಗೂ ಎಣ್ಣೆಹಾಕಿದ ವೆಜ್​ ಬಿರಿಯಾನಿಗೆ ಒಂದು ಪ್ಲೇಟ್​ಗೆ 70ರೂ ತೆಗೆದುಕೊಳ್ಳುತ್ತಾರಂತೆ ಉತ್ತಮ ಗುಣಮಟ್ಟದ ಅಕ್ಕಿಯನ್ನು ಬಳಸಿ ಬಿರಿಯಾನಿಯನ್ನು ತಯಾರಿಸಿ ಗ್ರಾಹಕರಿಗೆ ನೀಡುತ್ತಾರೆ. ಇವರ ವೆಜ್​ ಬಿರಿಯಾನಿ ಅಂಗಡಿಗೆ ಇಂಜಿನಿಯರ್​ ವೆಜ್​ ಬಿರಿಯಾನಿ ಸ್ಟಾಲ್​ ಎಂದು ಹೆಸರಿಟ್ಟಿದ್ದಾರೆ.

ಸಚಿನ್​ ಮತ್ತು ರೋಹಿತ್​ ಇಬ್ಬರೂ ಐದು ವರ್ಷಗಳ ಕಾಲ ಎಂಜಿನಿಯರಿಂಗ್ ಓದಿದ್ದಾರೆ. ರೋಹಿತ್ ಪಾಲಿಟೆಕ್ನಿಕ್ ವಿದ್ಯಾರ್ಥಿಯಾಗಿದ್ದಾಗ, ಸಚಿನ್ ಬಿ.ಟೆಕ್ ಓದಿದ್ದರು. ಆದರೆ, ಕೆಲಸದಲ್ಲಿ ತೃಪ್ತರಾಗದ ಹಿನ್ನೆಲೆಯಲ್ಲಿ ಬಿರಿಯಾನಿ ಮಾರಾಟ ಮಾಡಲು ನಿರ್ಧರಿಸಿದ್ದಾರೆ. ಕಂಪನಿಯಲ್ಲಿ ದಿನವಿಡೀ ದುಡಿಯುವುದಕ್ಕಿಂತ ಬಿರಿಯಾನಿ ಉದ್ಯೋಗ ಖುಷಿ ನೀಡಿದೆ ಎನ್ನುವ ಅವರು ಮುಂದಿನ ದಿನಗಳಲ್ಲಿ ವ್ಯವಹಾರವನ್ನು ದೊಡ್ಡ ಮಟ್ಟದಲ್ಲಿ ಬೆಳೆಸಲು ಯೋಜನೆ ರೂಪಿಸಿದ್ದಾರೆ ಈ ಕುರಿತು ಇಂಡಿಯಾ ಟುಡೆ ವರದಿ ತಿಳಿಸಿದೆ.

ಇದನ್ನೂ ಓದಿ:

ಗ್ರ್ಯಾಂಡ್​ ಲುಕ್​ನಲ್ಲಿ ಬಂದ ವಧುವನ್ನು ನೋಡಿ ಭಾವುಕನಾದ ವರ : ವಿಡಿಯೋ ವೈರಲ್​

Published On - 9:46 am, Sat, 12 March 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ