AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡ ಶ್ವಾನಕ್ಕೆ ಚಿಕಿತ್ಸೆ ಕೊಡಿಸಲು ತಳ್ಳುಗಾಡಿಯಲ್ಲಿ ಆಸ್ಪತ್ರೆಗೆ ಕರೆದ್ಯೊಯ್ದ ಪುಟಾಣಿಗಳು, ವಿಡಿಯೋ ವೈರಲ್

ಇಂದಿನ ಕಾಲದಲ್ಲಿ ಮಾನವೀಯತೆ ಎನ್ನುವ ಪದಕ್ಕೆ ಬೆಲೆಯೇ ಇಲ್ಲ. ಎಲ್ಲರೂ ಕೂಡ ಸ್ವಾರ್ಥಿಗಳಾಗಿದ್ದು ಬೇರೆಯವರ ಕಷ್ಟ, ನೋವಿಗೆ ಸ್ಪಂದಿಸುವುದನ್ನು ಕಾಣುವುದೇ ಕಡಿಮೆ ಎನ್ನಬಹುದು. ಆದರೆ ಇದೀಗ ಇಬ್ಬರೂ ಪುಟಾಣಿ ಗಳು ಕೂಡ ಗಾಯಗೊಂಡಿರುವ ಶ್ವಾನಕ್ಕೆ ಚಿಕಿತ್ಸೆ ಕೊಡಿಸಲು ಮುಂದಾಗಿದ್ದು, ಕೈಗಾಡಿಯಲ್ಲಿ ಶ್ವಾನವನ್ನು ಕೂರಿಸಿಕೊಂಡು ತಳ್ಳಿಕೊಂಡು ಹೋಗುತ್ತಿರುವ ಹೃದಯಸ್ಪರ್ಶಿ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಬಳಕೆದಾರರ ಹೃದಯ ಗೆದ್ದುಕೊಂಡಿದೆ.

ಗಾಯಗೊಂಡ ಶ್ವಾನಕ್ಕೆ ಚಿಕಿತ್ಸೆ ಕೊಡಿಸಲು ತಳ್ಳುಗಾಡಿಯಲ್ಲಿ ಆಸ್ಪತ್ರೆಗೆ ಕರೆದ್ಯೊಯ್ದ ಪುಟಾಣಿಗಳು, ವಿಡಿಯೋ ವೈರಲ್
ವೈರಲ್​ ವಿಡಿಯೋ
ಸಾಯಿನಂದಾ
| Edited By: |

Updated on: May 19, 2025 | 11:09 AM

Share

ಇತ್ತೀಚಿನ ದಿನಗಳಲ್ಲಿ ಮನುಷ್ಯನಲ್ಲಿ ಮಾನವೀಯತೆ (humanity) ಎಂಬುದು ಮರೆಯಾಗುತ್ತಿದೆ ಎನ್ನುವ ಮಾತು ಆಗಾಗ ಕೇಳಿಬರುತ್ತದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡದೇ, ಮೃಗೀಯ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅದರಲ್ಲಿಯೂ ಮೂಕ ಪ್ರಾಣಿಗಳ ಜೊತೆಗೆ ಮೃಗೀಯ ವರ್ತನೆ ತೋರುವುದನ್ನು ನೀವು ನೋಡಿರಬಹುದು. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ತದ್ವಿರುದ್ಧ ದೃಶ್ಯವನ್ನು ನೋಡಬಹುದು. ಇಬ್ಬರೂ ಬಾಲಕರು ಗಾಯಗೊಂಡ ನಾಯಿ (dog) ಯನ್ನು ಕೈಗಾಡಿಯಲ್ಲಿ ತಳ್ಳಿ ಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಳಕೆದಾರರಿಂದ ಮೆಚ್ಚುಗೆಗೆ ಪಾತ್ರವಾಗಿದೆ.

janwar.nhi.jaan ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ದಾರಿಹೋಕರೊಬ್ಬರು ಈ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋದಲ್ಲಿ ತಾತ್ಕಾಲಿಕ ಕೈಗಾಡಿಯಲ್ಲಿ ಶ್ವಾನವನ್ನು ಕೂರಿಸಿರುವುದನ್ನು ನೋಡಬಹುದು. ಗಾಯಗೊಂಡಿರುವ ಈ ಶ್ವಾನಕ್ಕೆ ಚಿಕಿತ್ಸೆಕೊಡಿಸಲೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವುದನ್ನು ನೀವಿಲ್ಲಿ ನೋಡಬಹುದು. ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿಯುತ್ತಿದ್ದ ಈ ಬಗ್ಗೆ ಹುಡುಗರಲ್ಲಿ ವಿಚಾರಿಸಿದ್ದಾರೆ. ಈ ಬಾಲಕರ ಬಳಿ ಏನಾಯಿತು ಎಂದು ಕೇಳಿದ್ದು, ಒಬ್ಬನು, ನಾವು ನಾಯಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ. ಅದು ಗಾಯಗೊಂಡಿದೆ ಎಂದು ಉತ್ತರಿಸಿದ್ದಾನೆ. ಪುಟಾಣಿ ಮಕ್ಕಳ ಈ ಕೆಲಸಕ್ಕೆ ವ್ಯಕ್ತಿಯೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
ಆನೆ ನೋಡೋಕೆ ಮಾತ್ರ ದೊಡ್ಡದು, ಇದ್ರ ಕಿವಿ ಎಷ್ಟು ಚಿಕ್ಕದಿದೆ ನೋಡಿ
Image
ಈ ಕಂಪನಿಯಲ್ಲಿ ಉಚಿತ ಶೌಚಾಲಯ, ಉಚಿತ ಲಿಫ್ಟ್, ನೈಟ್ ಸ್ನಾಕ್ಸ್
Image
ಖರ್ಚು ಮಾಡಿದ ದುಡ್ಡನ್ನೆಲ್ಲಾ ವಾಪಸ್ಸು ಕೊಡು ಎಂದ ಮಾಜಿ ಪ್ರಿಯಕರ
Image
ಪ್ಲೀಸ್ ನಾನು ನೀನು ಅಣ್ಣ ತಂಗಿಯಂತೆ ಇರೋಣ, ಮದುವೆ ಬೇಡ ಶಾಕ್ ಆದ ವರ

ಇದನ್ನೂ ಓದಿ : ಅಬ್ಬಬ್ಬಾ! ಆನೆ ನೋಡೋಕೆ ಮಾತ್ರ ದೊಡ್ಡದು, ಇದ್ರ ಕಿವಿ ಎಷ್ಟು ಚಿಕ್ಕದಿದೆ ನೋಡಿ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋವೊಂದು ಒಂದು ಲಕ್ಷ ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರು ಈ ಮಕ್ಕಳ ಕೆಲಸಕ್ಕೆ ಮೆಚ್ಚಿಕೊಂಡಿದ್ದು, ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಬಳಕೆದಾರರು, ‘ಪ್ರೀತಿ ಅಂದರೆ ಹೀಗೆಯೇ, ಮೂಕ ಪ್ರಾಣಿಗಳ ನೋವಿಗೆ ಸ್ಪಂದಿಸುವ ರೀತಿ ಇದು, ಈ ಮಕ್ಕಳ ಕೆಲಸವೇ ನಮಗೆಲ್ಲರಿಗೂ ಸ್ಫೂರ್ತಿ ‘ ಎಂದಿದ್ದಾರೆ. ಇನ್ನೊಬ್ಬರು, ಶಿಕ್ಷಣ ಪಡೆದು ದೊಡ್ಡ ದೊಡ್ಡ ಹುದ್ದೆಯಲ್ಲಿರುವ ಮಾನವೀಯತೆಯಿಲ್ಲದ ವ್ಯಕ್ತಿಗಳು ಈ ಮಕ್ಕಳನ್ನು ನೋಡಿ ಕಲಿಯಬೇಕು ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಮತ್ತೊಬ್ಬರು, ನಮ್ಮ ಮುದ್ದಾದ ಪುಟಾಣಿ ಹೀರೋಗಳಿವರು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು