AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಟ್ಯಾಂಕ್​ ಏರಿ ಆತ್ಮಹತ್ಯೆ ಬೆದರಿಕೆ ಒಡ್ಡಿದ ಪಂಜಾಬಿನ ದೈಹಿಕ ತರಬೇತಿ ಶಿಕ್ಷಕಿಯರು

Suicide Threat : ಕೆಲಸವನ್ನು ಕಾಯಂಗೊಳಿಸದಿದ್ದರೆ ಇಲ್ಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಈ ಶಿಕ್ಷಕಿಯರು ಬೆದರಿಸಿದರು. ಇವರನ್ನು ಬೆಂಬಲಿಸಿ ಕೆಲವರು ಪ್ರತಿಭಟನೆಯನ್ನೂ ಮಾಡಿದರು. ಈ ವಿಡಿಯೋ ಈಗ ವೈರಲ್.

ನೀರಿನ ಟ್ಯಾಂಕ್​ ಏರಿ ಆತ್ಮಹತ್ಯೆ ಬೆದರಿಕೆ ಒಡ್ಡಿದ ಪಂಜಾಬಿನ ದೈಹಿಕ ತರಬೇತಿ ಶಿಕ್ಷಕಿಯರು
‘ಉದ್ಯೋಗ ಖಾತ್ರಿಗೊಳಿಸದಿದ್ದರೆ ಆತ್ಮಹತ್ಯೆಗೆ ಶರಣಾಗುತ್ತೇವೆ’
TV9 Web
| Edited By: |

Updated on:Oct 07, 2022 | 4:19 PM

Share

Viral Video : ಪಂಜಾಬ್​ನ ಮೊಹಾಲಿಯ ಸೊಹಾನಾದಲ್ಲಿರುವ ಸಿಂಗ್ ಶಾಹೀದನ್​ ಗುರುದ್ವಾರದ ಬಳಿ ಇಬ್ಬರು ದೈಹಕ ತರಬೇತಿ ಶಿಕ್ಷಕಿಯರು ನೀರಿನ ಟ್ಯಾಂಕ್​ ಏರಿ ಆತ್ಮಹತ್ಯೆಯ ಮಾಡಿಕೊಳ್ಳುವುದಾಗಿ ಬೆದರಿಸಿದ್ದಾರೆ. ಈ ಘಟನೆ ಬುಧವಾರದ ಮಧ್ಯಾಹ್ನದಂದು ನಡೆದಿದೆ. ಸರ್ಕಾರಿ ಶಾಲೆಗಳಲ್ಲಿ ದೈಹಿಕ ತರಬೇತಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿ ಇವರು ಈ ನಿರ್ಧಾರ ತಳೆದು ಪ್ರತಿಭಟಿಸಿರುವುದಾಗಿ ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಹಿಂದಿನ ‘ಪಂಜಾಬ್ ಸರ್ಕಾರವು ಉದ್ಯೋಗ ಕಾಯಂಗೊಳಿಸುವುದಾಗಿ ಭರವಸೆ ನೀಡಿತ್ತು. ಆದರೆ ಅದೂ ಹುಸಿಯಾಯಿತು. ನಂತರ ಆಮ್ ಆದ್ಮಿ ಪಕ್ಷ ಕೂಡ ಏಳು ತಿಂಗಳಾದರೂ ಸುಳ್ಳು ಭರವಸೆ ನೀಡುತ್ತಲೇ ಬರುತ್ತಿದೆ’ ಎಂದು ದೈಹಿಕ ತರಬೇತಿ ಶಿಕ್ಷಕಿ ಸಿಪ್ಪಿ ಶರ್ಮಾ ಆರೋಪಿಸಿದ್ದಾರೆ.

ಸಿಪ್ಪಿ ಶರ್ಮಾ ಮತ್ತು ವೀರಪಾಲ್ ಕೌರ್ ಈ ಇಬ್ಬರೂ ಶಿಕ್ಷಕಿಯರು ಹೀಗೆ ಆತ್ಮಾಹುತಿ ಬೆದರಿಕೆ ಹಾಕಿದ್ದಕ್ಕೆ, ಅವರ ಬೆಂಬಲಿಗರು ವಿಮಾನ ನಿಲ್ದಾಣ ರಸ್ತೆಗುಂಟ ಪ್ರತಿಭಟನೆಗಿಳಿದ ಘಟನೆಯೂ ಆ ದಿನವೇ ನಡೆದಿದೆ.

ಯಾವ ಸರ್ಕಾರ ಬಂದರೂ ಸಮಸ್ಯೆಗಳು ಮಾತ್ರ ಹೆಚ್ಚುತ್ತಲೇ ಇವೆ. ಮನನೊಂದವರು ಉಪಾಯಗಾಣದೆ ಇನ್ನೇನು ಮಾಡಲು ಸಾಧ್ಯ? ಆದಷ್ಟು ಬೇಗ ಇಂಥ ಲಕ್ಷಾಂತರ ಮಂದಿಯ ಅಳಲು ಸರ್ಕಾರಕ್ಕೆ ತಲುಪಲಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:12 pm, Fri, 7 October 22

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ