AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಕಲ್ ಏರಿ ರಾಮನ ದರ್ಶನಕ್ಕಾಗಿ ಮಾಲ್ಡಾ ನಗರದಿಂದ  ಅಯೋಧ್ಯೆಗೆ ಹೊರಟ ಇಬ್ಬರು ಯುವಕರು

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ  ಭವ್ಯ ಶ್ರೀರಾಮ ಮಂದಿರದ ಉದ್ಘಾಟನೆಗೆ ಇನ್ನೂ ಕೆಲವು ದಿನಗಳು ಮಾತ್ರ ಉಳಿದಿವೆ.  ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಹಾಗೂ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ನೆರವೇರಲಿದೆ. ಈ ಮಧ್ಯೆ  ಪಶ್ಚಿಮ ಬಂಗಾಳದ ಮಾಲ್ಡಾ ನಗರದ ರಾಮ ಭಕ್ತರಿಬ್ಬರು  ಜನವರಿ 22 ರಂದು ನಡೆಯುವ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಸೈಕಲ್ ಏರಿ ಅಯೋಧ್ಯೆಗೆ ಹೊರಟಿದ್ದಾರೆ. 

ಸೈಕಲ್ ಏರಿ ರಾಮನ ದರ್ಶನಕ್ಕಾಗಿ ಮಾಲ್ಡಾ ನಗರದಿಂದ  ಅಯೋಧ್ಯೆಗೆ ಹೊರಟ ಇಬ್ಬರು ಯುವಕರು
ಮಾಲಾಶ್ರೀ ಅಂಚನ್​
| Edited By: |

Updated on: Jan 03, 2024 | 6:44 PM

Share

ಉತ್ತರ ಪ್ರದೇಶದ ಆಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ  ರಾಮ ಮಂದಿರ ಉದ್ಘಾಟನೆಗೆ ಇನ್ನೂ ಕೆಲವು ದಿನಗಳು ಮಾತ್ರ ಬಾಕಿ ಉಳಿದಿವೆ. ಜನವರಿ 22 ರಂದು ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಹಾಗೂ ರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಈ ಒಂದು ದಿನಕ್ಕಾಗಿ ಕೋಟ್ಯಾಂತರ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಇನ್ನೂ ಹೆಚ್ಚಿನ   ಭಕ್ತರು ಜನವರಿ 22 ರಂದು  ರಾಮ ಮಂದಿರಕ್ಕೆ ಭೇಟಿ ನೀಡುವ ಯೋಜನೆಯನ್ನು ಸಹ ರೂಪಿಸಿದ್ದಾರೆ. ಅದೇ ರೀತಿ ಪಶ್ಚಿಮ ಬಂಗಾಳದ ಮಾಲ್ಡಾ ನಗರದ ರಾಮ ಭಕ್ತರಿಬ್ಬರು ಜನವರಿ 22 ರಂದು ನಡೆಯುವ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಸೈಕಲ್ ಏರಿ ಅಯೋಧ್ಯೆಯ ಕಡೆಗೆ ಪ್ರಯಾಣ ಬೆಳೆಸಿದ್ದಾರೆ.

ಪಶ್ಚಿಮ ಬಂಗಾಳದ ಮಾಲ್ಡಾ ನಗರದ ರವಿ ವಿಶ್ವಕರ್ಮ (30) ಮತ್ತು ಅಭಿಜಿತ್ ಬಾಸ್ಫೂರ್ (22) ಎಂಬವರು  ಮಂಗಳವಾರದಂದು ಮಾಲ್ಡಾದಿಂದ ಅಯೋಧ್ಯೆಗೆ  ರಾಮನ ದರ್ಶನಕ್ಕಾಗಿ ಸೈಕಲ್  ಮೂಲಕ ತೆರಳಿದ್ದಾರೆ.   ಮಾಲ್ಡಾದಿಂದ ಅಯೋಧ್ಯೆಗೆ  ಬರೋಬ್ಬರಿ 800 ಕಿಮೀ ಗಿಂತಲೂ ಹೆಚ್ಚು ದೂರವಿದ್ದು, ಇಬ್ಬರೂ ಸೈಕಲ್ ಮೂಲಕವೇ ಸುಮಾರು 800 ಕಿ.ಮೀ ಕ್ರಮಿಸಿ ಜನವರಿ 20 ರೊಳಗೆ ಆಯೋಧ್ಯೆ ತಲುಪುವ ಗುರಿಯನ್ನು ಇಟ್ಟುಕೊಂಡಿದ್ದಾರೆ.  ಅವರು ಒಂದು ದಿನಕ್ಕೆ ಸರಾಸರಿ 30 ರಿಂದ 50 ಕಿಲೋಮೀಟರ್ ಗಳಷ್ಟು ಸೈಕ್ಲಿಂಗ್  ಮಾಡಲು ನಿರ್ಧರಿಸಿದ್ದಾರೆ.

ಮಂಗಳವಾರದಂದು ಬೆಳಗ್ಗೆ ಇಬ್ಬರೂ ಮಾಲ್ಡಾದ ಪ್ರಸಿದ್ಧ ಮಂಸ್ಕಮಾನ ದೇವಾಲಯದಲ್ಲಿ ಪೂಜೆ ಸಲ್ಲಿಸಿ,  ನಂತರ ಅಯೋಧ್ಯೆಯ ಕಡೆಗೆ ಪಯಾಣ ಬೆಳೆಸಿದ್ದಾರೆ.  ಮಾಲ್ಡಾದಿಂದ ದಲ್ಖೋಲಾ, ಬಿಹಾರದ ಪೂರ್ಣಿಯಾ, ದಂಡಭಾಂಗಾ, ಉತ್ತರ ಪ್ರದೇಶದ ಗೋರಖ್ಪುರದ ಮೂಲಕ ಜನವರಿ 20 ರೊಳಗೆ  ಅಯೋಧ್ಯೆಗೆ  ತಲುಪಲಿದ್ದಾರೆ.

ಇದನ್ನೂ ಓದಿ: ಬಹುಶಃ ಹೋಮ್ ಡೆಲಿವರಿ ಅಂದ್ರೆ ಇದೇ ಇರ್ಬೇಕು ನೋಡಿ…

ʼಕೋಟ್ಯಾಂತರ ಭಕ್ತರ ರಾಮಮಂದಿರ ಸ್ಥಾಪನೆಯ ಬಹುದಿನದ ಕನಸು ಈಗ ನೆರವೇರುತ್ತಿದೆ. ಈ  ಪವಿತ್ರ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಾವು ಸೈಕಲ್ ಮೂಲಕವೇ  ಅಯೋಧ್ಯೆಗೆ ತೆರಳಬೇಕೆಂದು ನಿರ್ಧರಿಸಿದ್ದೇವೆ.  ಅಲ್ಲದೆ ಈ ಹಾದಿಯಲ್ಲಿ ಮಾದಕ ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಸಹ ಮಾಡಲಿದ್ದೇವೆʼ ಎಂದು ಆ ಇಬ್ಬರು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?