AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಪೊಲೀಸ್​​​ ಜೀಪ್​​​ ಬಳಸಿ ರೀಲ್ಸ್​​​​ ಮಾಡಿದ ಯುವಕರು; ವಿಡಿಯೋ ವೈರಲ್​​

ಪೊಲೀಸ್ ಜೀಪ್​​ ಮೇಲೆ ಯುವಕರು ಗುಂಪೊಂದು ರೀಲ್ಸ್​​​​ ಮಾಡಿದ್ದು, ಇದೀಗಾ ಈ ಘಟನೆ ವೈರಲ್​ ಆಗುತ್ತಿದ್ದಂತೆ ಪೊಲೀಸರು ಯುವಕರ ಹುಡುಕಾಟದಲ್ಲಿ ತೊಡಗಿಸಿಕೊಂಡಿದ್ದಾರೆ.ಆದ್ರೆ ಈ ಹುಡುಗರಿಗೆ ಅಷ್ಟು ಸಲಿಸಾಗಿ ರೀಲ್ಸ್​​ ಮಾಡಲು ಜೀಪ್​​ ಎಲ್ಲಿಂದ ಸಿಕ್ಕಿತು ಎಂಬುದೇ ಇಂಟರೆಸ್ಟಿಂಗ್​​​ ಸ್ಟೋರಿ.

Viral News: ಪೊಲೀಸ್​​​ ಜೀಪ್​​​ ಬಳಸಿ ರೀಲ್ಸ್​​​​ ಮಾಡಿದ ಯುವಕರು; ವಿಡಿಯೋ ವೈರಲ್​​
ಪೊಲೀಸ್​​​ ಜೀಪ್​​​ ಬಳಸಿ ರೀಲ್ಸ್​​​​ ಮಾಡಿದ ಯುವಕರುImage Credit source: Twitter
ಅಕ್ಷತಾ ವರ್ಕಾಡಿ
|

Updated on:May 20, 2023 | 11:48 AM

Share

ಇತ್ತೀಚಿನ ದಿನಗಳಲ್ಲಿ ಸೋಶಿಯಲ್​​ ಮೀಡಿಯಾಗಳಲ್ಲಿ ಕೇವಲ 15 ಸೆಕೆಂಡುಗಳ ರೀಲ್ಸ್​​ ಮಾಡಿ ಸೋಶಿಯಲ್​​ ಮೀಡಿಯಾ ಸ್ಟಾರ್​​ ಆಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅಷ್ಟರ ಮಟ್ಟಿಗೆ ರೀಲ್ಸ್​​​ ಯುವಪೀಳಿಗೆಯಲ್ಲಿ ಕ್ರೇಜ್​​ ಹುಟ್ಟು ಹಾಕಿದೆ. ಆದರೆ ಇಲ್ಲೊಂದು ಯುವಕರ ಗುಂಪು ಪೊಲೀಸ್​​ ಜೀಪ್​​ ಬಳಸಿ ರೀಲ್ಸ್​​ ಮಾಡಿದ್ದು, ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ. ಆದ್ರೆ ಈ ಹುಡುಗರಿಗೆ ಅಷ್ಟು ಸಲಿಸಾಗಿ ರೀಲ್ಸ್​​ ಮಾಡಲು ಪೊಲೀಸ್​​ ಜೀಪ್​​ ಎಲ್ಲಿಂದ ಸಿಕ್ಕಿತು ಎಂಬುದೇ ಇಂಟರೆಸ್ಟಿಂಗ್​​​ ಸ್ಟೋರಿ.

ಉತ್ತರ ಪ್ರದೇಶದ ಕಾನ್ಪುರದ ಬಜಾರಿಯಾ ಪೊಲೀಸ್ ಠಾಣೆ ಪೋಲೀಸ್​​ ಜೀಪ್​​ ಮೇಲೆ ಯುವಕರು ಗುಂಪೊಂದು ರೀಲ್ಸ್​​​​ ಮಾಡಿದ್ದು, ಇದೀಗಾ ಈ ಘಟನೆ ವೈರಲ್​ ಆಗುತ್ತಿದ್ದಂತೆ ಪೊಲೀಸರು ಯುವಕರ ಹುಡುಕಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕ್ಯಾನ್ಸರ್​​ ಗೆದ್ದು ಬಂದ ಪೊಲೀಸ್​​​ ಇಲಾಖೆಯ ಶ್ವಾನ ಸಿಮ್ಮಿ

ಎಸಿಪಿ ಸಿಸಾಮೌ ಶಿಖರ್ ಪ್ರಕಾರ , ಜೀಪನ್ನು ಸರ್ವೀಸ್​​​ಗಾಗಿ ಗ್ಯಾಜೇರಿನಲ್ಲಿ ಇಡಲಾಗಿದೆ. ಈ ಸಮಯದಲ್ಲಿ ಯುವಕರು ಪೊಲೀಸ್​​ ಜೀಪನ್ನು ಬಳಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಒಬ್ಬ ಯುವಕನ ಹೆಸರು ಫೈಸಲ್ ಮತ್ತು ಇನ್ನೊಬ್ಬ ಯುವಕನ ಗುರುತು ಪತ್ತೆ ಹಚ್ಚಲಾಗುತ್ತಿದೆ. ಯುವಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸಿಪಿ ತಿಳಿಸಿದ್ದಾರೆ. ವಿಡಿಯೋದಲ್ಲಿ ಹುಡುಗರು ಬಬ್ಬೊಬ್ಬರಾಗಿ ಹೋಗಿ ಜೀಪ್​ ಮೇಲೆ ಕುಳಿತುಕೊಂಡು ಕಾಲಮೇಲೆ ಕಾಲು ಹಾಕಿ ಫೋಟೋಗೆ ಪೋಸ್​​​ ಕೊಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 11:47 am, Sat, 20 May 23

Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?