AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನನ್ನು ಅಣ್ಣ, ಅಂಕಲ್ ಎಂದು ಕರೆಯಬೇಡಿ’ ಉಬರ್ ಡ್ರೈವರ್ ವಿನಂತಿ

Uber Driver : ಈ ಪೋಸ್ಟ್​ಗೆ ಉಬರ್ ಕಂಪೆನಿ ಪ್ರತಿಕ್ರಿಯಿಸಿದೆ. ಜೊತೆಗೆ, ‘ವ್ಯಕ್ತಿಯ ವೃತ್ತಿ, ಸ್ಥಾನಮಾನದ ಬಗ್ಗೆ ತಾರತಮ್ಯ ಮಾಡದೆ ಪ್ರತಿಯೊಬ್ಬರನ್ನೂ ಸಮಾನವಾಗಿ ಗೌರವಿಸುವುದು ಮಾನವೀಯತೆಯ ಗುರಿಯಾಗಬೇಕು’ ಎಂದಿದ್ದಾರೆ ನೆಟ್ಟಿಗರೊಬ್ಬರು.

‘ನನ್ನನ್ನು ಅಣ್ಣ, ಅಂಕಲ್ ಎಂದು ಕರೆಯಬೇಡಿ’ ಉಬರ್ ಡ್ರೈವರ್ ವಿನಂತಿ
‘ನನ್ನನ್ನು ಅಣ್ಣ ಅಥವಾ ಅಂಕಲ್ ಎಂದು ಕರೆಯಬೇಡಿ’
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Sep 30, 2022 | 2:41 PM

Share

Viral  : ಸೀಟಿನ ಹೆಡ್​ರೆಸ್ಟ್​ನ ಮೇಲೆ ಉಬರ್ ಚಾಲಕರೊಬ್ಬರು, ‘ನನ್ನನ್ನು ಅಣ್ಣ, ಅಂಕಲ್​ ಎಂದು ಕರೆಯಬೇಡಿ’ ಎಂದು ನೋಟ್ ಬರೆದಿರುವ ಪೋಸ್ಟ್​ ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ನೆಟ್ಟಿಗರು ಈ ಪೋಸ್ಟ್ ಹಂಚಿಕೊಂಡು  ಮಜವಾಗಿರುವ ನೋಟ್​ ಅನ್ನು ಓದಿ ಓದಿ ನಗುತ್ತಿದ್ದಾರೆ ಜೊತೆಗೆ ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಬಿಝಿನೆಸ್​ ಜರ್ನಲಿಸ್ಟ್ ಸೋಹಿನಿ ಎಂ. ಸೆ.27ರಂದು ಉಬರ್ ಇಂಡಿಯಾಗೆ ಟ್ಯಾಗ್​ ಮಾಡಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಉಬರ್​ ಕಂಪೆನಿಯೇ ಈ ಪೋಸ್ಟ್​ಗೆ ಖುದ್ದಾಗಿ ಪ್ರತಿಕ್ರಿಯಿಸಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

‘ಈ ನೋಟ್​ನ ಪ್ರಕಾರ, ಇಂಥ ಸಂದರ್ಭವನ್ನು ತಪ್ಪಿಸಲು ಪರ್ಯಾಯ ಮಾರ್ಗವನ್ನು ಗ್ರಾಹಕರು ಕಂಡುಕೊಳ್ಳಬೇಕು. ಡ್ರೈವರ್ ಹೆಸರಿನ ಬಗ್ಗೆ ಅನುಮಾನ ಉಂಟಾದಲ್ಲಿ, ಉಬರ್ ಆ್ಯಪ್​ ಮೂಲಕ ಹೆಸರನ್ನು ಖಚಿತಪಡಿಸಿಕೊಂಡು ಸಂಬೋಧಿಸುವುದು ಒಳ್ಳೆಯದು’ ಎಂದು ಉಬರ್ ಪ್ರತಿಕ್ರಿಯಿಸಿದೆ.

ಈ ಪೋಸ್ಟ್ 3,000 ಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. 200ಕ್ಕಿಂತಲೂ ಹೆಚ್ಚು ಜನರು ರೀಟ್ವೀಟ್ ಮಾಡಿದ್ದಾರೆ. ‘ವ್ಯಕ್ತಿಯ ವೃತ್ತಿ, ಸ್ಥಾನಮಾನದ ಬಗ್ಗೆ ತಾರತಮ್ಯ ಮಾಡದೆ ಪ್ರತಿಯೊಬ್ಬರನ್ನೂ ಸಮಾನವಾಗಿ ಗೌರವಿಸುವುದು ಮಾನವೀಯತೆಯ ಗುರಿಯಾಗಬೇಕು’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ.

‘ನಾನು ಸಾಮಾನ್ಯವಾಗಿ ಡ್ರೈವರ್​ಗಳ ಹೆಸರಿನ ಮುಂದೆ ಜೀ ಸೇರಿಸಿ ಸಂಬೋಧಿಸುತ್ತೇನೆ’ ಎಂದು ಮತ್ತೊಬ್ಬರು ಹೇಳಿದ್ದಾರೆ. ಮಗದೊಬ್ಬರು, ‘ನಾನು ಯಾವಾಗಲೂ ಕಾರ್ ಸಾರ್​’ ಎಂದೇ ಕರೆಯುತ್ತೇನೆ ಎಂದಿದ್ದಾರೆ.

ನೀವು ಏನೆಂದು ಕರೆಯುತ್ತೀರಿ? ಪ್ರತಿಯೊಬ್ಬರಿಗೂ ಅವರು ಮಾಡುವ ಕೆಲಸಗಳಿಗೂ ಘನತೆ ಇದೆಯಲ್ಲವೆ? ಪರಸ್ಪರ ಘನತೆಯಿಂದ ಬದುಕುವುದೇ ಮಾನವೀಯತೆಯ ಉದ್ದೇಶ ಅಲ್ಲವೆ?

ಮತ್ತಷ್ಟು ವೈರಲ್ ವಿಡಿಯೋ ಕ್ಲಿಕ್ ಮಾಡಿ

Published On - 2:38 pm, Fri, 30 September 22

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ