Viral Video: ಯಕ್ಷಗಾನ ವೇಷಧಾರಿಗಳೊಂದಿಗೆ ಮದುವೆ ಮಂಟಪಕ್ಕೆ ಉಡುಪಿ ವಧುವಿನ ಸ್ಪೆಷಲ್ ಎಂಟ್ರಿ 

ಇತ್ತೀಚಿನ ದಿನಗಳಲ್ಲಿ ವಧುವರರು ಮದುವೆ ಮಂಟಪಕ್ಕೆ ವಿಶೇಷವಾಗಿ ಎಂಟ್ರಿ ಕೊಡುವಂತಹ ಟ್ರೆಂಡ್ ಹೆಚ್ಚಾಗಿದೆ. ಅದೇ ರೀತಿ ಇಲ್ಲೊಂದು ವಧು ಯಕ್ಷಗಾನ ವೇಷಧಾರಿಗಳೊಂದಿಗೆ ಮದುವೆ ಮಂಟಪಕ್ಕೆ ವಿಶೇಷವಾಗಿ ಎಂಟ್ರಿ ಕೊಟ್ಟಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ. 

Viral Video: ಯಕ್ಷಗಾನ ವೇಷಧಾರಿಗಳೊಂದಿಗೆ ಮದುವೆ ಮಂಟಪಕ್ಕೆ ಉಡುಪಿ ವಧುವಿನ ಸ್ಪೆಷಲ್ ಎಂಟ್ರಿ 
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 09, 2024 | 6:03 PM

ಸ್ವಲ್ಪ ವರ್ಷಗಳ ಹಿಂದೆ ಮದುವೆ ಮಂಟಪಕ್ಕೆ ವಧು-ವರರು ಮಾಮೂಲಿಯಾಗಿ ದಿಬ್ಬಣದ ಮೂಲಕ ಬರುವ ಸಂಪ್ರದಾಯವಿತ್ತು. ಆದರೆ ಈಗ ಕಾಲ ಬದಲಾಗಿದೆ. ಕಾಲಕ್ಕೆ ತಕ್ಕ ಹಾಗೆ ಟ್ರೆಂಡ್ ಕೂಡಾ ಬದಲಾಗಿದ್ದು, ವಧು-ವರರು ಡಾನ್ಸ್ ಮಾಡುತ್ತಾ ಮಂಟಪಕ್ಕೆ ಎಂಟ್ರಿ ಕೊಡುವಂತಹ, ವಿಶಿಷ್ಟವಾದ ದಿಬ್ಬಣದ ಮೂಲಕ ವಧು-ವರರನ್ನು ಮದುವೆ ಮಂಟಪಕ್ಕೆ ಕರೆ ತರುವಂತಹ ಟ್ರೆಂಡ್ ಹೆಚ್ಚಾಗಿದೆ. ಇಂತಹ ವಿಶಿಷ್ಟ ಮದುವೆಗಳ  ಹಲವಾರು ವಿಡಿಯೋಗಳನ್ನು ನೀವು ಕೂಡಾ ನೋಡಿರುತ್ತೀರಿ ಅಲ್ವಾ. ಅದೇ ರೀತಿ ಇಲ್ಲೊಂದು ವಿಡಿಯೋ ವೈರಲ್ ಆಗಿದ್ದು, ನವ ವಧು ಯಕ್ಷಗಾನ ವೇಷಧಾರಿಗಳೊಂದಿಗೆ ಹೆಜ್ಜೆ ಹಾಕುತ್ತಾ ಮದುವೆ ಮಂಟಪಕ್ಕೆ ಬಂದಿದ್ದಾರೆ.

ಉಡುಪಿಯ ಎರ್ಮಾಲ್ ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ವಧು ಯಕ್ಷಗಾನ ವೇಷಧಾರಿಗಳೊಂದಿಗೆ ವಿಶಿಷ್ಟವಾಗಿ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದು, ಈ ಕುರಿತ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಕುರಿತ ವಿಡಿಯೋವನ್ನು @sakathkaravali ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, “ಮದುವೆ ಮನೆಯಲ್ಲಿ ಮಧು ವರರ ಈ ಸ್ಪೆಷಲ್ ಎಂಟ್ರಿಯನ್ನೊಮ್ಮೆ ನೋಡಿ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್ ವಿಡಿಯೋದಲ್ಲಿ  ಯಕ್ಷಗಾನ ವೇಷಧಾರಿಗಳೊಂದಿಗೆ ನವ ವಧು ಹಾಗೂ ಆಕೆಯ ಮನೆಯವರು ಹೆಜ್ಜೆ ಹಾಕುತ್ತಾ ಮದುವೆ ಮಂಟಪಕ್ಕೆ ಎಂಟ್ರಿ ಕೊಡುವಂತಹ  ಸುಂದರ ದೃಶ್ಯವನ್ನು ಕಾಣಬಹುದು.

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 13 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಸುಂದರ ವಿಡಿಯೋ ಇದೀಗ ನೆಟ್ಟಿಗರ ಮನ ಗೆದ್ದಿದೆ.

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ