AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಯಕ್ಷಗಾನ ವೇಷಧಾರಿಗಳೊಂದಿಗೆ ಮದುವೆ ಮಂಟಪಕ್ಕೆ ಉಡುಪಿ ವಧುವಿನ ಸ್ಪೆಷಲ್ ಎಂಟ್ರಿ 

ಇತ್ತೀಚಿನ ದಿನಗಳಲ್ಲಿ ವಧುವರರು ಮದುವೆ ಮಂಟಪಕ್ಕೆ ವಿಶೇಷವಾಗಿ ಎಂಟ್ರಿ ಕೊಡುವಂತಹ ಟ್ರೆಂಡ್ ಹೆಚ್ಚಾಗಿದೆ. ಅದೇ ರೀತಿ ಇಲ್ಲೊಂದು ವಧು ಯಕ್ಷಗಾನ ವೇಷಧಾರಿಗಳೊಂದಿಗೆ ಮದುವೆ ಮಂಟಪಕ್ಕೆ ವಿಶೇಷವಾಗಿ ಎಂಟ್ರಿ ಕೊಟ್ಟಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ. 

Viral Video: ಯಕ್ಷಗಾನ ವೇಷಧಾರಿಗಳೊಂದಿಗೆ ಮದುವೆ ಮಂಟಪಕ್ಕೆ ಉಡುಪಿ ವಧುವಿನ ಸ್ಪೆಷಲ್ ಎಂಟ್ರಿ 
ಮಾಲಾಶ್ರೀ ಅಂಚನ್​
| Edited By: |

Updated on: Apr 09, 2024 | 6:03 PM

Share

ಸ್ವಲ್ಪ ವರ್ಷಗಳ ಹಿಂದೆ ಮದುವೆ ಮಂಟಪಕ್ಕೆ ವಧು-ವರರು ಮಾಮೂಲಿಯಾಗಿ ದಿಬ್ಬಣದ ಮೂಲಕ ಬರುವ ಸಂಪ್ರದಾಯವಿತ್ತು. ಆದರೆ ಈಗ ಕಾಲ ಬದಲಾಗಿದೆ. ಕಾಲಕ್ಕೆ ತಕ್ಕ ಹಾಗೆ ಟ್ರೆಂಡ್ ಕೂಡಾ ಬದಲಾಗಿದ್ದು, ವಧು-ವರರು ಡಾನ್ಸ್ ಮಾಡುತ್ತಾ ಮಂಟಪಕ್ಕೆ ಎಂಟ್ರಿ ಕೊಡುವಂತಹ, ವಿಶಿಷ್ಟವಾದ ದಿಬ್ಬಣದ ಮೂಲಕ ವಧು-ವರರನ್ನು ಮದುವೆ ಮಂಟಪಕ್ಕೆ ಕರೆ ತರುವಂತಹ ಟ್ರೆಂಡ್ ಹೆಚ್ಚಾಗಿದೆ. ಇಂತಹ ವಿಶಿಷ್ಟ ಮದುವೆಗಳ  ಹಲವಾರು ವಿಡಿಯೋಗಳನ್ನು ನೀವು ಕೂಡಾ ನೋಡಿರುತ್ತೀರಿ ಅಲ್ವಾ. ಅದೇ ರೀತಿ ಇಲ್ಲೊಂದು ವಿಡಿಯೋ ವೈರಲ್ ಆಗಿದ್ದು, ನವ ವಧು ಯಕ್ಷಗಾನ ವೇಷಧಾರಿಗಳೊಂದಿಗೆ ಹೆಜ್ಜೆ ಹಾಕುತ್ತಾ ಮದುವೆ ಮಂಟಪಕ್ಕೆ ಬಂದಿದ್ದಾರೆ.

ಉಡುಪಿಯ ಎರ್ಮಾಲ್ ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ವಧು ಯಕ್ಷಗಾನ ವೇಷಧಾರಿಗಳೊಂದಿಗೆ ವಿಶಿಷ್ಟವಾಗಿ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದು, ಈ ಕುರಿತ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಕುರಿತ ವಿಡಿಯೋವನ್ನು @sakathkaravali ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, “ಮದುವೆ ಮನೆಯಲ್ಲಿ ಮಧು ವರರ ಈ ಸ್ಪೆಷಲ್ ಎಂಟ್ರಿಯನ್ನೊಮ್ಮೆ ನೋಡಿ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್ ವಿಡಿಯೋದಲ್ಲಿ  ಯಕ್ಷಗಾನ ವೇಷಧಾರಿಗಳೊಂದಿಗೆ ನವ ವಧು ಹಾಗೂ ಆಕೆಯ ಮನೆಯವರು ಹೆಜ್ಜೆ ಹಾಕುತ್ತಾ ಮದುವೆ ಮಂಟಪಕ್ಕೆ ಎಂಟ್ರಿ ಕೊಡುವಂತಹ  ಸುಂದರ ದೃಶ್ಯವನ್ನು ಕಾಣಬಹುದು.

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 13 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಸುಂದರ ವಿಡಿಯೋ ಇದೀಗ ನೆಟ್ಟಿಗರ ಮನ ಗೆದ್ದಿದೆ.

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ