AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಯಕ್ಷಗಾನ ವೇಷಧಾರಿಗಳೊಂದಿಗೆ ಮದುವೆ ಮಂಟಪಕ್ಕೆ ಉಡುಪಿ ವಧುವಿನ ಸ್ಪೆಷಲ್ ಎಂಟ್ರಿ 

ಇತ್ತೀಚಿನ ದಿನಗಳಲ್ಲಿ ವಧುವರರು ಮದುವೆ ಮಂಟಪಕ್ಕೆ ವಿಶೇಷವಾಗಿ ಎಂಟ್ರಿ ಕೊಡುವಂತಹ ಟ್ರೆಂಡ್ ಹೆಚ್ಚಾಗಿದೆ. ಅದೇ ರೀತಿ ಇಲ್ಲೊಂದು ವಧು ಯಕ್ಷಗಾನ ವೇಷಧಾರಿಗಳೊಂದಿಗೆ ಮದುವೆ ಮಂಟಪಕ್ಕೆ ವಿಶೇಷವಾಗಿ ಎಂಟ್ರಿ ಕೊಟ್ಟಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ. 

Viral Video: ಯಕ್ಷಗಾನ ವೇಷಧಾರಿಗಳೊಂದಿಗೆ ಮದುವೆ ಮಂಟಪಕ್ಕೆ ಉಡುಪಿ ವಧುವಿನ ಸ್ಪೆಷಲ್ ಎಂಟ್ರಿ 
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 09, 2024 | 6:03 PM

ಸ್ವಲ್ಪ ವರ್ಷಗಳ ಹಿಂದೆ ಮದುವೆ ಮಂಟಪಕ್ಕೆ ವಧು-ವರರು ಮಾಮೂಲಿಯಾಗಿ ದಿಬ್ಬಣದ ಮೂಲಕ ಬರುವ ಸಂಪ್ರದಾಯವಿತ್ತು. ಆದರೆ ಈಗ ಕಾಲ ಬದಲಾಗಿದೆ. ಕಾಲಕ್ಕೆ ತಕ್ಕ ಹಾಗೆ ಟ್ರೆಂಡ್ ಕೂಡಾ ಬದಲಾಗಿದ್ದು, ವಧು-ವರರು ಡಾನ್ಸ್ ಮಾಡುತ್ತಾ ಮಂಟಪಕ್ಕೆ ಎಂಟ್ರಿ ಕೊಡುವಂತಹ, ವಿಶಿಷ್ಟವಾದ ದಿಬ್ಬಣದ ಮೂಲಕ ವಧು-ವರರನ್ನು ಮದುವೆ ಮಂಟಪಕ್ಕೆ ಕರೆ ತರುವಂತಹ ಟ್ರೆಂಡ್ ಹೆಚ್ಚಾಗಿದೆ. ಇಂತಹ ವಿಶಿಷ್ಟ ಮದುವೆಗಳ  ಹಲವಾರು ವಿಡಿಯೋಗಳನ್ನು ನೀವು ಕೂಡಾ ನೋಡಿರುತ್ತೀರಿ ಅಲ್ವಾ. ಅದೇ ರೀತಿ ಇಲ್ಲೊಂದು ವಿಡಿಯೋ ವೈರಲ್ ಆಗಿದ್ದು, ನವ ವಧು ಯಕ್ಷಗಾನ ವೇಷಧಾರಿಗಳೊಂದಿಗೆ ಹೆಜ್ಜೆ ಹಾಕುತ್ತಾ ಮದುವೆ ಮಂಟಪಕ್ಕೆ ಬಂದಿದ್ದಾರೆ.

ಉಡುಪಿಯ ಎರ್ಮಾಲ್ ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ವಧು ಯಕ್ಷಗಾನ ವೇಷಧಾರಿಗಳೊಂದಿಗೆ ವಿಶಿಷ್ಟವಾಗಿ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದು, ಈ ಕುರಿತ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಕುರಿತ ವಿಡಿಯೋವನ್ನು @sakathkaravali ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, “ಮದುವೆ ಮನೆಯಲ್ಲಿ ಮಧು ವರರ ಈ ಸ್ಪೆಷಲ್ ಎಂಟ್ರಿಯನ್ನೊಮ್ಮೆ ನೋಡಿ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್ ವಿಡಿಯೋದಲ್ಲಿ  ಯಕ್ಷಗಾನ ವೇಷಧಾರಿಗಳೊಂದಿಗೆ ನವ ವಧು ಹಾಗೂ ಆಕೆಯ ಮನೆಯವರು ಹೆಜ್ಜೆ ಹಾಕುತ್ತಾ ಮದುವೆ ಮಂಟಪಕ್ಕೆ ಎಂಟ್ರಿ ಕೊಡುವಂತಹ  ಸುಂದರ ದೃಶ್ಯವನ್ನು ಕಾಣಬಹುದು.

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 13 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಸುಂದರ ವಿಡಿಯೋ ಇದೀಗ ನೆಟ್ಟಿಗರ ಮನ ಗೆದ್ದಿದೆ.

ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ