AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇಂಟರ್ನ್‌ಶಿಪ್‌ಗೆಂದು ಬಂದು ಉಡುಪಿ ಶಾಲಾ ವಿದ್ಯಾರ್ಥಿಗಳಿಗೆ ಶೌಚಾಲಯ ಕಟ್ಟಿದ ವಿದೇಶಿಗರು

ಭಾರತಕ್ಕೆ ಬಂದ ವಿದೇಶಿಗರು ತಮ್ಮ ಒಳ್ಳೆಯ ನಡೆ ನುಡಿಯಿಂದಲೇ ಸುದ್ದಿಯಾಗುತ್ತಾರೆ. ಆದರೆ ಇದೀಗ ದೂರದ ಊರಿಂದ ಇಂಟರ್ನ್‌ಶಿಪ್‌ಗಾಗಿ ಬಂದ ವಿದೇಶಿಗರು ಶಾಲಾವಿದ್ಯಾರ್ಥಿಗಳ ಜೊತೆಗೆ ಬೆರೆದು ಅವರ ಅಗತ್ಯಕ್ಕೆ ಸ್ಪಂದಿಸಿ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ. ಹಾಗಾದ್ರೆ ಈ ವಿದೇಶಿಗರು ಮಾಡಿದ ಕೆಲಸವೇನು? ಈ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

Video: ಇಂಟರ್ನ್‌ಶಿಪ್‌ಗೆಂದು ಬಂದು ಉಡುಪಿ ಶಾಲಾ ವಿದ್ಯಾರ್ಥಿಗಳಿಗೆ  ಶೌಚಾಲಯ ಕಟ್ಟಿದ ವಿದೇಶಿಗರು
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:Aug 15, 2025 | 10:47 AM

Share

ಉಡುಪಿ, ಆಗಸ್ಟ್‌ 15: ವಿದೇಶಿಗರು (foreigners) ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಇಲ್ಲಿನ ರುಚಿಕರ ಆಹಾರಗಳನ್ನು ಸವಿಯುವುದನ್ನು ನೋಡಿರುತ್ತೀರಿ. ಕೆಲವರು ಇಲ್ಲಿಯೇ ನೆಲೆಸುವ ಮೂಲಕ ಭಾರತವನ್ನು ತನ್ನದೇ ದೇಶ ಎನ್ನುವ ಮನೋಭಾವ ಬೆಳೆಸಿಕೊಂಡಿರುತ್ತಾರೆ. ಹೀಗೆ ವಿದೇಶದಿಂದ ಬಂದ ಜನರು ಒಳ್ಳೆಯ ಕೆಲಸ ಮಾಡುವ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಭಾರತೀಯರಿಗೆ ಸ್ವಚ್ಛತೆಯ ಪಾಠ ಸೇರಿದಂತೆ ತಪ್ಪು ಮಾಡಿದರೆ ತಿದ್ದಿ ಬುದ್ಧಿ ಹೇಳುವ ಕೆಲಸಗಳನ್ನು ಮಾಡುತ್ತಿರುತ್ತಾರೆ. ಆದರೆ ಇದೀಗ ವಿದೇಶಿಗರು ಇಂಟರ್ನ್‌ಶಿಪ್‌ಗೆಂದು ಉಡುಪಿಯ ಬೈಂದೂರು ವಲಯದ ಕನ್ಯಾನ ಗ್ರಾಮದ ಕೂಡ್ಲು (Kudlu of Kanyana village in Byndoor zone of Udupi) ಸರಕಾರಿ ಶಾಲೆಗೆ ಬಂದಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುವ ಮೂಲಕ ಎರಡು ತಿಂಗಳುಗಳ ಕಾಲ ಇಲ್ಲಿ ಕಳೆದಿದ್ದಾರೆ. ಕೊನೆಗೆ ಇಲ್ಲಿಂದ ತೆರಳುವಾಗ ಶಾಲಾ ಮಕ್ಕಳಿಗೆ ಅಗತ್ಯವಾಗಿರುವ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು elkaani ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದ ಶೀರ್ಷಿಕೆಯಲ್ಲಿ ಇವರು ದೂರದ ಊರಿನಿಂದ ಇಂಟರ್ನ್‌ಶಿಪ್‌ಗಾಗಿ ನಮ್ಮ ಊರಿಗೆ ಬಂದವರು. ಸುಮಾರು ಎರಡು ತಿಂಗಳುಗಳ ಕಾಲ ಬೈಂದೂರು ವಲಯದ ಗ್ರಾಮೀಣ ಪ್ರದೇಶದ ಹಳ್ಳಿಗಾಡಿನ ಕನ್ಯಾನ ಗ್ರಾಮದ ಕೂಡ್ಲು ಸರಕಾರಿ ಶಾಲಾವಿದ್ಯಾರ್ಥಿಗಳ ಜೊತೆ ಆಟಪಾಠದಲ್ಲಿ ಭಾಗಿಯಾದ ಅವರು ಕೊನೆಯಲ್ಲಿ ವಿದ್ಯಾರ್ಥಿಗಳ ಅಗತ್ಯಕ್ಕೆ ಸ್ಪಂದಿಸಿದ್ದಾರೆ. ಮಕ್ಕಳಿಗೆ ಪಾಠ ಪ್ರವಚನ ಮಾಡಿದ ಈ ಫ್ರಾನ್ಸ್ ದೇಶದ ನಾಗರೀಕರು ಇಲ್ಲಿನ ಮಕ್ಕಳಿಗೆ ಅತೀ ಅಗತ್ಯವಾಗಿ ಬೇಕಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ.

ಇದನ್ನೂ ಓದಿ
Image
1 ತಿಂಗಳ ಕಸವನ್ನು 15 ಸೆಕೆಂಡುಗಳಲ್ಲಿ ಸ್ವಚ್ಛಗೊಳಿಸಿದ ವಿದೇಶಿಗ
Image
ಭಾರತಕ್ಕೆ ಹೋಲಿಸಿದ್ರೆ ಕೆನಡಾದಲ್ಲಿ ದಿನಸಿ ವಸ್ತುಗಳು ದುಬಾರಿ
Image
ಭಾರತೀಯನನ್ನು ಮದುವೆಯಾಗಿದ್ದು ಇದೇ ಕಾರಣಕ್ಕೆ ಎಂದ ರಷ್ಯಾದ ಮಹಿಳೆ
Image
ಬೆಂಗಳೂರು ಟ್ರಿಪ್ ಮುಗಿಸಿ ಹೋಗುವಾಗ ಭಾವುಕಳಾದ ವಿದೇಶಿ ಮಹಿಳೆ

ವೈರಲ್ ವಿಡಿಯೋ ಇಲ್ಲಿದೆ ನೋಡಿ

View this post on Instagram

A post shared by Ell Kaani (@ellkaani)

ಹಾಗಂತ ಹಣ ಕೊಟ್ಟು ಕೆಲಸ ಮಾಡಿಸದೇ ಇವರು ಸ್ವತಃ ಶೌಚಾಲಯದ ಗುಂಡಿ ತೆಗೆಯುವುದರಿಂದ ಹಿಡಿದು ಶೌಚಗೃಹದ ಮೇಲ್ಪಾಡು ನಿರ್ಮಾಣವನ್ನು ಮಾಡುವ ಮೂಲಕ ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇಂಟರ್ನ್‌ಗಾಗಿ  ವಿದೇಶದಿಂದ ಬಂದವರು ಶಾಲಾ ಮಕ್ಕಳ ಜೊತೆಗೆ ಬೆರೆಯುತ್ತಿರುವುದನ್ನು ಕಾಣಬಹುದು. ಈ ಶಾಲಾ ಮಕ್ಕಳಿಗೆ ಅಗತ್ಯವಿರುವ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದು, ತಾವೇ ಈ ಶೌಚಾಲಯ ನಿರ್ಮಾಣದ ಕೆಲಸ ಮಾಡುತ್ತಿರುವುದನ್ನು ನೋಡಬಹುದು.

ಇದನ್ನೂ ಓದಿ: Viral: ಭಾರತದ ಜನರ ಮನೋಭಾವ ಬದಲಾಗಬೇಕು, 1 ತಿಂಗಳ ಕಸವನ್ನು 15 ಸೆಕೆಂಡುಗಳಲ್ಲಿ ಸ್ವಚ್ಛಗೊಳಿಸಿದ ವಿದೇಶಿಗ

ಈ ವಿಡಿಯೋ ಹತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಬಳಕೆದಾರರೊಬ್ಬರು, ಸಿವಿಲ್ ಇಂಜಿನಿಯರಿಂಗ್ ಎಂದು ಹೇಳಿದ್ದಾರೆ. ಇನ್ನೊಬ್ಬರು ನಿಮ್ಮ ಕೆಲಸಕ್ಕೆ ನನ್ನದೊಂದು ಮೆಚ್ಚುಗೆ ಇರಲಿ, ಅದ್ಭುತ ಎಂದಿದ್ದಾರೆ. ನಿಜಕ್ಕೂ ವಿದೇಶಿಗರು ನಮಗೆಲ್ಲರಿಗೂ ಮಾದರಿ ಎಂದು ಮತ್ತೊಬ್ಬರು ಹೇಳಿದ್ದಾರೆ. ಇನ್ನು ಕೆಲವರು ಚಪ್ಪಾಳೆ ತಟ್ಟುವ ಸಿಂಬಲ್ ಕಳುಹಿಸುವ ಮೂಲಕ ವಿದೇಶಿಗರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:46 am, Fri, 15 August 25

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ