Video: ವಿಟ್ಲಪಿಂಡಿ ಉತ್ಸವಕ್ಕೆ ಬಂದು ಉಡುಪಿಯಲ್ಲಿ ರಸ್ತೆಯ ಸ್ಥಿತಿಗತಿಗಳನ್ನು ಪರಿಶೀಲಿಸಿದ ಯಮರಾಜ

ಪ್ರತಿ ವರ್ಷ ನಡೆಯುವಂತೆ ನಿನ್ನೆಯೂ ಕೂಡಾ ಕೃಷ್ಣನೂರು ಉಡುಪಿಯಲ್ಲಿ ವಿಟ್ಲಪಿಂಡಿ ಉತ್ಸವ ಬಹಳ ವಿಜೃಂಭಣೆಯಿಂದ ನಡೆದಿದೆ. ಹುಲಿ ಸೇರಿದಂತೆ ವಿವಿಧ ವೇಷಧಾರಿಗಳು ಈ ಉತ್ಸವದ ಪ್ರಮುಖ ಆಕರ್ಷಣೆ ಅಂತಾನೇ ಹೇಳಬಹುದು. ಇದೀಗ ಇಲ್ಲಿನ ಉತ್ಸವದಲ್ಲಿ ಚಿತ್ರಗುಪ್ತ ಮತ್ತು ಯಮರಾಜ ವೇಷಧಾರಿಗಳ ವಿಡಿಯೋವೊಂದು ವೈರಲ್‌ ಆಗಿದ್ದು, ಹೊಂಡ ಬಿದ್ದ ರಸ್ತೆಯಲ್ಲಿ ಪ್ರೇತ ವೇಷಧಾರಿಗಳಿಗೆ ಯಮರಾಜ ಮತ್ತು ಚಿತ್ರಗುಪ್ತರು ಲಾಂಗ್‌ ಜಂಪ್‌ ಸ್ಪರ್ಧೆ ಏರ್ಪಡಿಸುವ ಮೂಲಕ ಇಲ್ಲಿನ ರಸ್ತೆಯ ಸ್ಥಿತಿಗತಿಗಳು ಹೇಗಾಗಿದೆ ಎಂಬುದರ ಬಗ್ಗೆ ಅಲ್ಲಿನ ಶಾಸಕರಿಗೆ ಬಿಸಿ ಮುಟ್ಟಿಸಿದ್ದಾರೆ.

Video: ವಿಟ್ಲಪಿಂಡಿ ಉತ್ಸವಕ್ಕೆ ಬಂದು ಉಡುಪಿಯಲ್ಲಿ ರಸ್ತೆಯ ಸ್ಥಿತಿಗತಿಗಳನ್ನು ಪರಿಶೀಲಿಸಿದ ಯಮರಾಜ
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 28, 2024 | 12:48 PM

ಎಲ್ಲಿ ನೋದಿಡ್ರೂ ಈ ಹೊಂಡ ಬಿದ್ದ ರಸ್ತೆಗಳದ್ದೇ ಸಮಸ್ಯೆ. ಕಳಪೆ ಮಟ್ಟದ ಕಾಮಗಾರಿಯ ಕಾರಣದಿಂದಾಗಿ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಗ್ರಾಮೀಣ ರಸ್ತೆಗಳು ಸೇರಿದಂತೆ ಬಹುತೇಕ ಎಲ್ಲಾ ರಸ್ತೆಗಳಲ್ಲೂ ಹೊಂಡಗಳು ಕಾಣಿಸಿಕೊಳ್ಳುತ್ತಿವೆ. ರಸ್ತೆ ಗುಂಡಿಗಳ ಕಾರಣದಿಂದಾಗಿ ಅದೆಷ್ಟೋ ವಾಹನ ಸವಾರರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಹೀಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳಾಗಿರಬಹುದು ಅಥವಾ ರಾಜಕಾರಣಿಗಳಾಗಿರಬಹುದು ಇದ್ರ ಬಗ್ಗೆ ತಲೆಯೇ ಕೆಡಿಸಿಕೊಳ್ಳುತ್ತಿಲ್ಲ. ಇಂತಹವರಿಗೆ ಬಿಸಿ ಮುಟ್ಟಿಸಲೆಂದೇ ನಿನ್ನೆ ಉಡುಪಿಯಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ಸಂದರ್ಭದಲ್ಲಿ ಹೊಂಡ-ಗುಂಡಿಗಳಿಂದ ತುಂಬಿದ್ದ ರಸ್ತೆ ಮಧ್ಯೆ ನಿಂತು ಪ್ರೇತ ವೇಷಧಾರಿಗಳಿಗೆ ಯಮರಾಜ ಮತ್ತು ಚಿತ್ರಗುಪ್ತ ವೇಷಧಾರಿಗಳು ಲಾಂಗ್‌ ಜಂಪ್‌ ಸ್ಪರ್ಧೆಯನ್ನು ಏರ್ಪಡಿಸುವ ಮೂಲಕ ರಸ್ತೆಗಳ ಸ್ಥಿತಿಗತಿಗಳ ಬಗ್ಗೆ ವಿವರಿಸಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು ನೆಟ್ಟಿಗರಿಂದ ಭಾರೀ ಮೆಚ್ಚುಗೆ ಪಡೆದಿದೆ.

ಈ ಕುರಿತ ಪೋಸ್ಟ್‌ ಒಂದನ್ನು ಕಾರ್ತಿಕ್‌ ರೆಡ್ಡಿ (Karthik Reddy) ಎಂಬವರು ಸೋಷಿಯಲ್‌ ಮೀಡಿಯಾ ಪ್ಲಾರ್ಟ್‌ಫಾರ್ಮ್‌ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, “ಕರ್ನಾಟಕದ ಉಡುಪಿಯಲ್ಲಿ ಪ್ರೇತಗಳಿಗೆ ಲಾಂಗ್‌ ಜಂಪ್‌ ಸ್ಪರ್ಧೆ ಏರ್ಪಡಿಸಿದ ಯಮರಾಜ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಹೊಂಡ ಬಿದ್ದ ರಸ್ತೆಯಲ್ಲಿ ನಿಂತು ಯಮರಾಜ ಮತ್ತು ಚಿತ್ರಗುಪ್ತ ವೇಷಧಾರಿಗಳು ಪ್ರೇತ ವೇಷಧಾರಿಗಳಿಗೆ ಲಾಂಗ್‌ ಜಂಪ್‌ ಏರ್ಪಡಿಸಿದ ತಮಾಷೆಯ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ ಗೇಮ್‌ ಆರಂಭ: ಅದ್ಭುತ ಡೂಡಲ್‌ ಹಂಚಿಕೊಂಡ ಗೂಗಲ್‌

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಆಗಸ್ಟ್‌ 27 ರಂದು ಹಂಚಿಕೊಳ್ಳಲಾದ ಈ ವಿಡಿಯೋ 47 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಉಡುಪಿಯ ಕಾರ್ಪೋರೇಟರ್‌ಗಳು, ಶಾಸಕರು ಮತ್ತು ಸಂಸದರು ಈ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ಏಕೆ ತರಲಿಲ್ಲʼ ಎಂದು ಪ್ರಶ್ನಿಸಿದ್ದಾರೆ. ಮತ್ತೊಬ್ಬ ಬಳಕೆದಾರರು ಮತ್ತೊಬ್ಬ ಬಳಕೆದಾರರು ʼತಮಾಷೆಯ ವಿಡಿಯೋ ಮೂಲಕವೇ ಅದ್ಭುತವಾಗಿ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ