AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಖಾಲಿ ಬಿಯರ್ ಬಾಟಲಿಯಿಂದಲೇ ಲಕ್ಷಾಧಿಪತಿಯಾದ ವ್ಯಕ್ತಿ

ಇಲ್ಲೊಬ್ಬ ವ್ಯಕ್ತಿ ತಾನು ಕುಡಿದ ಬಿಸಾಕಿದ ಖಾಲಿ ಬಿಯರ್​ ಬಾಟಲಿಗಳಿಂದಲೇ ಲಕ್ಷಾಧಿಪತಿಯಾಗಿದ್ದಾನೆ. ಇದು ನಿಮಗೆ ಸ್ವಲ್ಪ ವಿಚಿತ್ರವೆನಿಸಬಹುದು, ಆದರೆ ಇದು ಸಂಪೂರ್ಣವಾಗಿ ನಿಜ. ಮೊದಲ 6000 ಕ್ಯಾನ್‌ಗಳನ್ನು ಮಾರಾಟ ಮಾಡಿ, $13500 (ರೂ 14 ಲಕ್ಷ) ಗಳಿಸಿದ್ದಾನೆ.

Viral News: ಖಾಲಿ ಬಿಯರ್ ಬಾಟಲಿಯಿಂದಲೇ ಲಕ್ಷಾಧಿಪತಿಯಾದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: May 10, 2024 | 11:47 AM

Share

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಕುಟುಂಬದ ಆದಾರ ಸ್ತಂಭವಾಗಿದ್ದ ವ್ಯಕ್ತಿಗಳು ಮದ್ಯಪಾನ ಮಾಡುವುದರಿಂದ ಅನೇಕ ಕುಟುಂಬಗಳು ಬೀದಿಗೆ ಬಿದ್ದಿರುವ ಘಟನೆಗಳನ್ನು ನೀವು ಕಂಡಿರಬಹುದು. ಆದರೆ ಇಲ್ಲೊಂದು ವಿಶೇಷವಾದ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು ಇಲ್ಲೊಬ್ಬ ತಾನು ಕುಡಿದ ಬಿಸಾಕಿದ ಖಾಲಿ ಬಿಯರ್​ ಬಾಟಲಿಗಳೇ ಆತನನ್ನು ಲಕ್ಷಾಧಿಪತಿಯನ್ನಾಗಿ ಮಾಡಿದೆ. ಇದು ನಿಮಗೆ ಸ್ವಲ್ಪ ವಿಚಿತ್ರವೆನಿಸಬಹುದು, ಆದರೆ ಇದು ಸಂಪೂರ್ಣವಾಗಿ ನಿಜ.

ಬ್ರಿಟನ್ ನಿವಾಸಿ 65 ವರ್ಷದ ನಿಕ್ ವೆಸ್ಟ್ ಅವರು ಕಳೆದ 42 ವರ್ಷಗಳಿಂದ ಬಿಯರ್ ಕ್ಯಾನ್‌ಗಳನ್ನು ಸಂಗ್ರಹಿಸುತ್ತಿದ್ದರು. ಈ ಹವ್ಯಾಸದಿಂದಾಗಿ ಅವರ ಮನೆಯಲ್ಲಿ 10,300 ಡಬ್ಬಗಳು ಜಮಾವಣೆಗೊಂಡಿವೆ. 16 ವರ್ಷ ವಯಸ್ಸಿನವನಾಗಿದ್ದಾಗ ಈ ಪ್ರವೃತ್ತಿ ಪ್ರಾರಂಭವಾಯಿತು ಮತ್ತು ನಾನು ಅಂಚೆಚೀಟಿಗಳು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸುವುದನ್ನು ಪ್ರಾರಂಭಿಸಿದ್ದೆ. ಈ ಸಮಯದಲ್ಲಿ, ನಾನು ನನ್ನ ಸ್ನೇಹಿತರೊಂದಿಗೆ ಮದ್ಯದ ಚಟಕ್ಕೆ ಸಿಲುಕಿದೆ ಮತ್ತು ನಾನು ಹೆಚ್ಚು ಬಿಯರ್ ಕುಡಿಯಲು ಪ್ರಾರಂಭಿಸಿದೆ ಎಂದು ವೆಸ್ಟ್ ಹೇಳಿದ್ದಾರೆ.

ಇದನ್ನೂ ಓದಿ; ಮಹಿಳೆಯ ಮೂಗಿನೊಳಗೆ 100ಕ್ಕೂ ಹೆಚ್ಚು ಜೀವಂತ ಕೀಟಗಳು ಪತ್ತೆ, ಅಚ್ಚರಿಪಟ್ಟ ವೈದ್ಯರು

ಆದಾಗ್ಯೂ,ಮದ್ಯದ ಚಟಕ್ಕೆ ಸಿಲುಕಿದ ಆ ಸಮಯದಲ್ಲಿ ನಾನು ಬಿಯರ್ ಕ್ಯಾನ್‌ಗಳನ್ನು ಸಂಗ್ರಹಿಸುತ್ತಿದ್ದೆ. ನನ್ನ ಈ ಹವ್ಯಾಸಗಳಿಂದಾಗಿ ನನ್ನ ಕೋಣೆಯ ತುಂಬೆಲ್ಲಾ ಬಿಯರ್​​ ಬಾಟಲಿಗಳು ತುಂಬಿಕೊಂಡಿದ್ದವು. ಬಳಿಕ ಈ ಬಿಯರ್​ ಬಾಟಲಿಗಳ ಸಂಗ್ರಹಕ್ಕಾಗಿ ಹೊಸ ಮನೆ ಖರೀದಿಸಿದೆ. ಆದರೆ ನಿವೃತ್ತಿಯ ನಂತರ ನಾನು ಹಣದ ಕೊರತೆಯನ್ನು ಎದುರಿಸಲು ಪ್ರಾರಂಭಿಸಿದೆ. ಆದ್ದರಿಂದ ಈ ಬಾಟಲಿಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. ಮೊದಲ 6000 ಕ್ಯಾನ್‌ಗಳನ್ನು ಮಾರಾಟ ಮಾಡಿ, $13500 (ರೂ 14 ಲಕ್ಷ) ಗಳಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ