AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್ ನೋಡಿ ಕ್ಯಾನ್ಸರ್‌ ಗುಣಪಡಿಸಿಕೊಳ್ಳಲು ಹೋಗಿ ಎಡವಟ್ಟು ಮಾಡಿಕೊಂಡ ಮಹಿಳೆ

39 ವರ್ಷದ ಮಹಿಳೆ ದೀರ್ಘಕಾಲದಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇತ್ತೀಚಿಗಷ್ಟೇ ವೈರಲ್ ಆಗಿರುವ ವೀಡಿಯೊ ಒಂದರಲ್ಲಿ, ಕ್ಯಾರೆಟ್ ಜ್ಯೂಸ್ ಕ್ಯಾನ್ಸರ್ ಅನ್ನು ಗುಣಪಡಿಸುತ್ತದೆ ಎಂದು ಹೇಳಲಾಗಿರುವುದನ್ನು ಈ ಮಹಿಳೆ ಗಮನಿಸಿದ್ದರು. ವಿಡಿಯೋ ನೋಡಿದ ದಿನದಿಂದ ಪ್ರತೀ ದಿನ ಕ್ಯಾರೆಟ್​​ ಜ್ಯೂಸ್​ ಕುಡಿಯಲು ಪ್ರಾರಂಭಿಸಿದ್ದರು.

ಯೂಟ್ಯೂಬ್ ನೋಡಿ ಕ್ಯಾನ್ಸರ್‌ ಗುಣಪಡಿಸಿಕೊಳ್ಳಲು ಹೋಗಿ ಎಡವಟ್ಟು ಮಾಡಿಕೊಂಡ ಮಹಿಳೆ
ಅಕ್ಷತಾ ವರ್ಕಾಡಿ
|

Updated on: May 17, 2024 | 4:11 PM

Share

ಇತ್ತೀಚಿನ ದಿನಗಳಲ್ಲಿ ಡಾಕ್ಟರ್​​ ಸಲಹೆ ಪಡೆಯುವವರಿಗಿಂತ ಹೆಚ್ಚಾಗಿ ಗೂಗಲ್​​, ಯೂಟ್ಯೂಬ್​​ ಮೂಲಕ ಮನೆಮದ್ದುಗಳನ್ನು ಕಂಡುಹಿಡಿಯುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಇಲ್ಲೊಬ್ಬಳು ಮಹಿಳೆ ತನ್ನ ಕ್ಯಾನ್ಸರ್​ ರೋಗಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಪರಿಹಾರ ಕಂಡುಕೊಳ್ಳಲು ಮುಂದಾಗಿದ್ದಾಳೆ. ಸೋಶಿಯಲ್​ ಮೀಡಿಯಾ ಪ್ರಭಾವಿಯೊಬ್ಬರು ತಿಳಿಸಿರುವ ಔಷಧಿಯೊಂದನ್ನು ಕ್ಯಾನ್ಸರ್​​ ರೋಗ ಗುಣಪಡಿಸಲು ಪ್ರಯತ್ನಿಸಿದ್ದು, ಈ ಔಷಧಿ ಆಕೆಯ ಜೀವಕ್ಕೆ ಕಂಟಕವಾಗಿದೆ.

ವರದಿಗಳ ಪ್ರಕಾರ, ಯುನೈಟೆಡ್ ಕಿಂಗ್‌ಡಮ್‌ನ ಐರಿನಾ ಸ್ಟೊಯ್ನೋವಾ ಎಂಬ ಮಹಿಳೆ ದೀರ್ಘಕಾಲದಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. 39 ವರ್ಷದ ಮಹಿಳೆಗೆ 2021 ರಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಇತ್ತೀಚಿಗಷ್ಟೇ ವೈರಲ್ ಆಗಿರುವ ವೀಡಿಯೊ ಒಂದರಲ್ಲಿ, ಕ್ಯಾರೆಟ್ ಜ್ಯೂಸ್ ಕ್ಯಾನ್ಸರ್ ಅನ್ನು ಗುಣಪಡಿಸುತ್ತದೆ ಎಂದು ಹೇಳಲಾಗಿರುವುದನ್ನು ಈ ಮಹಿಳೆ ಗಮನಿಸಿದ್ದರು. ವಿಡಿಯೋ ನೋಡಿದ ದಿನದಿಂದ ಪ್ರತೀ ದಿನ ಕ್ಯಾರೆಟ್​​ ಜ್ಯೂಸ್​ ಕುಡಿಯಲು ಪ್ರಾರಂಭಿಸಿದ್ದರು.

ಇದನ್ನೂ ಓದಿ: ಚಲಿಸುತ್ತಿರುವ ರೈಲಿನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿ, ಥಳಿಸಿ ಪರಾರಿಯಾದ ಪತಿ

ವೀಡಿಯೊದಲ್ಲಿ ಉಲ್ಲೇಖಿಸಿದ್ದಂತೆ ಪ್ರತಿದಿನ ಸುಮಾರು 13 ಕಪ್‌ಗಳಷ್ಟು ಕ್ಯಾರೆಟ್ ಜ್ಯೂಸ್ ಕುಡಿಯುತ್ತಿದ್ದ ಮಹಿಳೆ. ಆದರೆ ದಿನಕಳೆದಂತೆ ಗುಣವಾಗುವ ಬದಲು ಆಕೆಯ ಆರೋಗ್ಯ ಹದಗೆಡುತ್ತಾ ಹೋಗಿದೆ. ವೈದ್ಯರ ಸಲಹೆ ಇಲ್ಲದೆ ಈ ನಿರ್ಧಾರ ತೆಗೆದುಕೊಂಡಿದ್ದರ ಪರಿಣಾಮ ಸಂಪೂರ್ಣ ಬಲಹೀನಳಾಗಿ ಆಸ್ಪತ್ರೆಗೆ ದಾಖಲಾಗಬೇಕಾಯಿತು. ಅಷ್ಟೊತ್ತಿಗಾಗಲೇ ಆಕೆಯ ಹೊಟ್ಟೆಯ ಕೆಳಭಾಗ, ಕಾಲುಗಳು ಮತ್ತು ಶ್ವಾಸಕೋಶಗಳು ದ್ರವದಿಂದ ತುಂಬಿದ್ದವು ಮತ್ತು ಆಕೆಯ ದೇಹದಾದ್ಯಂತ ಗಡ್ಡೆಗಳಿದ್ದವು. ತನ್ನ ಅನುಭವದ ಬಗ್ಗೆ ಮಾತನಾಡುತ್ತಾ ಐರೆನಾ, “ನನ್ನ ಶ್ವಾಸಕೋಶದಲ್ಲಿ ದ್ರವವಿದ್ದ ಕಾರಣ ನಾನು ಉಸಿರಾಡಲು ಸಾಧ್ಯವಾಗಲಿಲ್ಲ. ಈಗ ಚೇತರಿಸಿಕೊಳ್ಳುತ್ತಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ