AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್ ನೋಡಿ ಕ್ಯಾನ್ಸರ್‌ ಗುಣಪಡಿಸಿಕೊಳ್ಳಲು ಹೋಗಿ ಎಡವಟ್ಟು ಮಾಡಿಕೊಂಡ ಮಹಿಳೆ

39 ವರ್ಷದ ಮಹಿಳೆ ದೀರ್ಘಕಾಲದಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇತ್ತೀಚಿಗಷ್ಟೇ ವೈರಲ್ ಆಗಿರುವ ವೀಡಿಯೊ ಒಂದರಲ್ಲಿ, ಕ್ಯಾರೆಟ್ ಜ್ಯೂಸ್ ಕ್ಯಾನ್ಸರ್ ಅನ್ನು ಗುಣಪಡಿಸುತ್ತದೆ ಎಂದು ಹೇಳಲಾಗಿರುವುದನ್ನು ಈ ಮಹಿಳೆ ಗಮನಿಸಿದ್ದರು. ವಿಡಿಯೋ ನೋಡಿದ ದಿನದಿಂದ ಪ್ರತೀ ದಿನ ಕ್ಯಾರೆಟ್​​ ಜ್ಯೂಸ್​ ಕುಡಿಯಲು ಪ್ರಾರಂಭಿಸಿದ್ದರು.

ಯೂಟ್ಯೂಬ್ ನೋಡಿ ಕ್ಯಾನ್ಸರ್‌ ಗುಣಪಡಿಸಿಕೊಳ್ಳಲು ಹೋಗಿ ಎಡವಟ್ಟು ಮಾಡಿಕೊಂಡ ಮಹಿಳೆ
ಅಕ್ಷತಾ ವರ್ಕಾಡಿ
|

Updated on: May 17, 2024 | 4:11 PM

Share

ಇತ್ತೀಚಿನ ದಿನಗಳಲ್ಲಿ ಡಾಕ್ಟರ್​​ ಸಲಹೆ ಪಡೆಯುವವರಿಗಿಂತ ಹೆಚ್ಚಾಗಿ ಗೂಗಲ್​​, ಯೂಟ್ಯೂಬ್​​ ಮೂಲಕ ಮನೆಮದ್ದುಗಳನ್ನು ಕಂಡುಹಿಡಿಯುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಇಲ್ಲೊಬ್ಬಳು ಮಹಿಳೆ ತನ್ನ ಕ್ಯಾನ್ಸರ್​ ರೋಗಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಪರಿಹಾರ ಕಂಡುಕೊಳ್ಳಲು ಮುಂದಾಗಿದ್ದಾಳೆ. ಸೋಶಿಯಲ್​ ಮೀಡಿಯಾ ಪ್ರಭಾವಿಯೊಬ್ಬರು ತಿಳಿಸಿರುವ ಔಷಧಿಯೊಂದನ್ನು ಕ್ಯಾನ್ಸರ್​​ ರೋಗ ಗುಣಪಡಿಸಲು ಪ್ರಯತ್ನಿಸಿದ್ದು, ಈ ಔಷಧಿ ಆಕೆಯ ಜೀವಕ್ಕೆ ಕಂಟಕವಾಗಿದೆ.

ವರದಿಗಳ ಪ್ರಕಾರ, ಯುನೈಟೆಡ್ ಕಿಂಗ್‌ಡಮ್‌ನ ಐರಿನಾ ಸ್ಟೊಯ್ನೋವಾ ಎಂಬ ಮಹಿಳೆ ದೀರ್ಘಕಾಲದಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. 39 ವರ್ಷದ ಮಹಿಳೆಗೆ 2021 ರಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಇತ್ತೀಚಿಗಷ್ಟೇ ವೈರಲ್ ಆಗಿರುವ ವೀಡಿಯೊ ಒಂದರಲ್ಲಿ, ಕ್ಯಾರೆಟ್ ಜ್ಯೂಸ್ ಕ್ಯಾನ್ಸರ್ ಅನ್ನು ಗುಣಪಡಿಸುತ್ತದೆ ಎಂದು ಹೇಳಲಾಗಿರುವುದನ್ನು ಈ ಮಹಿಳೆ ಗಮನಿಸಿದ್ದರು. ವಿಡಿಯೋ ನೋಡಿದ ದಿನದಿಂದ ಪ್ರತೀ ದಿನ ಕ್ಯಾರೆಟ್​​ ಜ್ಯೂಸ್​ ಕುಡಿಯಲು ಪ್ರಾರಂಭಿಸಿದ್ದರು.

ಇದನ್ನೂ ಓದಿ: ಚಲಿಸುತ್ತಿರುವ ರೈಲಿನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿ, ಥಳಿಸಿ ಪರಾರಿಯಾದ ಪತಿ

ವೀಡಿಯೊದಲ್ಲಿ ಉಲ್ಲೇಖಿಸಿದ್ದಂತೆ ಪ್ರತಿದಿನ ಸುಮಾರು 13 ಕಪ್‌ಗಳಷ್ಟು ಕ್ಯಾರೆಟ್ ಜ್ಯೂಸ್ ಕುಡಿಯುತ್ತಿದ್ದ ಮಹಿಳೆ. ಆದರೆ ದಿನಕಳೆದಂತೆ ಗುಣವಾಗುವ ಬದಲು ಆಕೆಯ ಆರೋಗ್ಯ ಹದಗೆಡುತ್ತಾ ಹೋಗಿದೆ. ವೈದ್ಯರ ಸಲಹೆ ಇಲ್ಲದೆ ಈ ನಿರ್ಧಾರ ತೆಗೆದುಕೊಂಡಿದ್ದರ ಪರಿಣಾಮ ಸಂಪೂರ್ಣ ಬಲಹೀನಳಾಗಿ ಆಸ್ಪತ್ರೆಗೆ ದಾಖಲಾಗಬೇಕಾಯಿತು. ಅಷ್ಟೊತ್ತಿಗಾಗಲೇ ಆಕೆಯ ಹೊಟ್ಟೆಯ ಕೆಳಭಾಗ, ಕಾಲುಗಳು ಮತ್ತು ಶ್ವಾಸಕೋಶಗಳು ದ್ರವದಿಂದ ತುಂಬಿದ್ದವು ಮತ್ತು ಆಕೆಯ ದೇಹದಾದ್ಯಂತ ಗಡ್ಡೆಗಳಿದ್ದವು. ತನ್ನ ಅನುಭವದ ಬಗ್ಗೆ ಮಾತನಾಡುತ್ತಾ ಐರೆನಾ, “ನನ್ನ ಶ್ವಾಸಕೋಶದಲ್ಲಿ ದ್ರವವಿದ್ದ ಕಾರಣ ನಾನು ಉಸಿರಾಡಲು ಸಾಧ್ಯವಾಗಲಿಲ್ಲ. ಈಗ ಚೇತರಿಸಿಕೊಳ್ಳುತ್ತಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ