AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಟರಿ ಚೆಕ್​ಪಾಯಿಂಟ್​ನಲ್ಲಿ ಮಂಡಿಯೂರಿ ಯುವತಿಗೆ ಪ್ರಪೋಸ್​ ಮಾಡಿದ ಉಕ್ರೇನ್​ ಸೈನಿಕ: ವಿಡಿಯೋ ವೈರಲ್​

ಉಕ್ರೇನ್​ ಸೈನಿಕನೊಬ್ಬ ಮಿಲಿಟರಿ ಚೆಕ್​ ಪಾಯಿಂಟ್​ನಲ್ಲಿ ಮಂಡಿಯೂರಿ ಯುವತಿಗೆ ಪ್ರಪೋಸ್​ ಮಾಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮಿಲಿಟರಿ ಚೆಕ್​ಪಾಯಿಂಟ್​ನಲ್ಲಿ ಮಂಡಿಯೂರಿ ಯುವತಿಗೆ ಪ್ರಪೋಸ್​ ಮಾಡಿದ ಉಕ್ರೇನ್​ ಸೈನಿಕ: ವಿಡಿಯೋ ವೈರಲ್​
ಪ್ರಪೋಸ್​ ಮಾಡಿದ ಸೈನಿಕ
TV9 Web
| Edited By: |

Updated on:Mar 09, 2022 | 9:41 AM

Share

ರಷ್ಯಾ ಉಕ್ರೇನ್​ ರಣಭೀಕರ ಯುದ್ಧ (Russia Ukraine War) 14ನೇ ದಿನಕ್ಕೆ ಕಾಲಿಟ್ಟಿದೆ. ಜಗತ್ತಿನ ವಿವಿಧ ದೇಶಗಳು ರಷ್ಯಾವನ್ನು ವಿರೋಧಿಸಿದರೂ ಉಕ್ರೇನ್​ ಮೇಲಿನ ಯುದ್ಧವನ್ನು ಮುಂದುವರೆಸಿದೆ. ಈ ನಡುವೆ ಉಕ್ರೇನ್​ ನೆಲದ ಸಾಕಷ್ಟು  ವಿಡಿಯೋ ಫೋಟೋಗಳು ವೈರಲ್​ ಆಗಿವೆ. ಒಂದಷ್ಟು ಮನಕಲಕುವ ದೃಶ್ಯಗಳು ಉಕ್ರೇನ್​ನಲ್ಲಿ ಕಂಡುಬರುತ್ತಿವೆ. ಈ ನಡುವೆ ಉಕ್ರೇನ್​ ಸೈನಿಕನೊಬ್ಬ(Ukraine Soldier) ಮಿಲಿಟರಿ ಚೆಕ್​ ಪಾಯಿಂಟ್​ನಲ್ಲಿ ಮಂಡಿಯೂರಿ ಗೆಳತಿಗೆ ಪ್ರಪೋಸ್ ​(Propose) ಮಾಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಜನರ ಸಾವು, ನೋವು, ಭಯದಲ್ಲಿ ಬದುಕುತ್ತಿರುವುದರ ನಡುವೆಯೂ ಈ ರೀತಿ ಪ್ರೇಮ ನಿವೇದನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಉಕ್ರೇನ್​ ನಾಗರಿಕರನ್ನು ಮಿಲಿಟರಿ ಚೆಕ್​ ಪಾಯಿಂಟ್​ನಲ್ಲಿ ತಪಾಸಣೆ ಮಾಡಲು ನಿಲ್ಲಿಸಲಾಗಿತ್ತು. ಈ ವೇಳೆ ಸೈನಿಕರ ಗುಂಪು ಅವರನ್ನು ತಪಾಸಣೆ ಮಾಡುತ್ತಿತ್ತು. ಗಾಡಿಯೆಡೆಗೆ ಮುಖ ಮಾಡಿ ನಿಂತಿದ್ದ ಯುವತಿಯನ್ನು ತಿರುಗುಸಿ ಸೈನಿಕನೊಬ್ಬ ಮಂಡಿಯೂರಿ ಪ್ರಪೋಸ್​​ ಮಾಡಿದ್ದಾನೆ. ಇದನ್ನು ಕಂಡು ಆಕೆ ಅಚ್ಚರಿಗೊಂಡಿದ್ದಾಳೆ.  ಪುಟ್ಟ ಹೂವನ್ನು ನೀಡಿ ಸೈನಿಕ ಪ್ರೇಮ ನಿವೇದನೆ ಮಾಡಿದ್ದಾನೆ.

ಅಚ್ಚರಿಯಿಂದ ಖುಷಿಗೊಂಡ ಯುವತಿ ಸೈನಿಕನನ್ನು ಹಗ್​ ಮಾಡಿದ್ದಾಳೆ ಇದರ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. 4 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ. ಭೀಕರ ದೃಶ್ಯಗಳ ನಡುವೆ ಹೃದಯಸ್ಪರ್ಶಿ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ:

ವ್ಲಾಡಿಮಿರ್ ಪುಟಿನ್ ವಿರುದ್ಧ ವಿನೂತನ ಪ್ರತಿಭಟನೆ ಮಾಡುತ್ತಿರುವ ಬ್ರಿಟನ್ ಪಬ್; ಹೇಗೆ ಅಂತೀರಾ? ಇಲ್ಲಿದೆ ನೋಡಿ

Published On - 9:38 am, Wed, 9 March 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!