AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಟರಿ ಚೆಕ್​ಪಾಯಿಂಟ್​ನಲ್ಲಿ ಮಂಡಿಯೂರಿ ಯುವತಿಗೆ ಪ್ರಪೋಸ್​ ಮಾಡಿದ ಉಕ್ರೇನ್​ ಸೈನಿಕ: ವಿಡಿಯೋ ವೈರಲ್​

ಉಕ್ರೇನ್​ ಸೈನಿಕನೊಬ್ಬ ಮಿಲಿಟರಿ ಚೆಕ್​ ಪಾಯಿಂಟ್​ನಲ್ಲಿ ಮಂಡಿಯೂರಿ ಯುವತಿಗೆ ಪ್ರಪೋಸ್​ ಮಾಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮಿಲಿಟರಿ ಚೆಕ್​ಪಾಯಿಂಟ್​ನಲ್ಲಿ ಮಂಡಿಯೂರಿ ಯುವತಿಗೆ ಪ್ರಪೋಸ್​ ಮಾಡಿದ ಉಕ್ರೇನ್​ ಸೈನಿಕ: ವಿಡಿಯೋ ವೈರಲ್​
ಪ್ರಪೋಸ್​ ಮಾಡಿದ ಸೈನಿಕ
TV9 Web
| Edited By: |

Updated on:Mar 09, 2022 | 9:41 AM

Share

ರಷ್ಯಾ ಉಕ್ರೇನ್​ ರಣಭೀಕರ ಯುದ್ಧ (Russia Ukraine War) 14ನೇ ದಿನಕ್ಕೆ ಕಾಲಿಟ್ಟಿದೆ. ಜಗತ್ತಿನ ವಿವಿಧ ದೇಶಗಳು ರಷ್ಯಾವನ್ನು ವಿರೋಧಿಸಿದರೂ ಉಕ್ರೇನ್​ ಮೇಲಿನ ಯುದ್ಧವನ್ನು ಮುಂದುವರೆಸಿದೆ. ಈ ನಡುವೆ ಉಕ್ರೇನ್​ ನೆಲದ ಸಾಕಷ್ಟು  ವಿಡಿಯೋ ಫೋಟೋಗಳು ವೈರಲ್​ ಆಗಿವೆ. ಒಂದಷ್ಟು ಮನಕಲಕುವ ದೃಶ್ಯಗಳು ಉಕ್ರೇನ್​ನಲ್ಲಿ ಕಂಡುಬರುತ್ತಿವೆ. ಈ ನಡುವೆ ಉಕ್ರೇನ್​ ಸೈನಿಕನೊಬ್ಬ(Ukraine Soldier) ಮಿಲಿಟರಿ ಚೆಕ್​ ಪಾಯಿಂಟ್​ನಲ್ಲಿ ಮಂಡಿಯೂರಿ ಗೆಳತಿಗೆ ಪ್ರಪೋಸ್ ​(Propose) ಮಾಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಜನರ ಸಾವು, ನೋವು, ಭಯದಲ್ಲಿ ಬದುಕುತ್ತಿರುವುದರ ನಡುವೆಯೂ ಈ ರೀತಿ ಪ್ರೇಮ ನಿವೇದನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಉಕ್ರೇನ್​ ನಾಗರಿಕರನ್ನು ಮಿಲಿಟರಿ ಚೆಕ್​ ಪಾಯಿಂಟ್​ನಲ್ಲಿ ತಪಾಸಣೆ ಮಾಡಲು ನಿಲ್ಲಿಸಲಾಗಿತ್ತು. ಈ ವೇಳೆ ಸೈನಿಕರ ಗುಂಪು ಅವರನ್ನು ತಪಾಸಣೆ ಮಾಡುತ್ತಿತ್ತು. ಗಾಡಿಯೆಡೆಗೆ ಮುಖ ಮಾಡಿ ನಿಂತಿದ್ದ ಯುವತಿಯನ್ನು ತಿರುಗುಸಿ ಸೈನಿಕನೊಬ್ಬ ಮಂಡಿಯೂರಿ ಪ್ರಪೋಸ್​​ ಮಾಡಿದ್ದಾನೆ. ಇದನ್ನು ಕಂಡು ಆಕೆ ಅಚ್ಚರಿಗೊಂಡಿದ್ದಾಳೆ.  ಪುಟ್ಟ ಹೂವನ್ನು ನೀಡಿ ಸೈನಿಕ ಪ್ರೇಮ ನಿವೇದನೆ ಮಾಡಿದ್ದಾನೆ.

ಅಚ್ಚರಿಯಿಂದ ಖುಷಿಗೊಂಡ ಯುವತಿ ಸೈನಿಕನನ್ನು ಹಗ್​ ಮಾಡಿದ್ದಾಳೆ ಇದರ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. 4 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ. ಭೀಕರ ದೃಶ್ಯಗಳ ನಡುವೆ ಹೃದಯಸ್ಪರ್ಶಿ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ:

ವ್ಲಾಡಿಮಿರ್ ಪುಟಿನ್ ವಿರುದ್ಧ ವಿನೂತನ ಪ್ರತಿಭಟನೆ ಮಾಡುತ್ತಿರುವ ಬ್ರಿಟನ್ ಪಬ್; ಹೇಗೆ ಅಂತೀರಾ? ಇಲ್ಲಿದೆ ನೋಡಿ

Published On - 9:38 am, Wed, 9 March 22

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ