AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಟರಿ ಚೆಕ್​ಪಾಯಿಂಟ್​ನಲ್ಲಿ ಮಂಡಿಯೂರಿ ಯುವತಿಗೆ ಪ್ರಪೋಸ್​ ಮಾಡಿದ ಉಕ್ರೇನ್​ ಸೈನಿಕ: ವಿಡಿಯೋ ವೈರಲ್​

ಉಕ್ರೇನ್​ ಸೈನಿಕನೊಬ್ಬ ಮಿಲಿಟರಿ ಚೆಕ್​ ಪಾಯಿಂಟ್​ನಲ್ಲಿ ಮಂಡಿಯೂರಿ ಯುವತಿಗೆ ಪ್ರಪೋಸ್​ ಮಾಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮಿಲಿಟರಿ ಚೆಕ್​ಪಾಯಿಂಟ್​ನಲ್ಲಿ ಮಂಡಿಯೂರಿ ಯುವತಿಗೆ ಪ್ರಪೋಸ್​ ಮಾಡಿದ ಉಕ್ರೇನ್​ ಸೈನಿಕ: ವಿಡಿಯೋ ವೈರಲ್​
ಪ್ರಪೋಸ್​ ಮಾಡಿದ ಸೈನಿಕ
TV9 Web
| Edited By: |

Updated on:Mar 09, 2022 | 9:41 AM

Share

ರಷ್ಯಾ ಉಕ್ರೇನ್​ ರಣಭೀಕರ ಯುದ್ಧ (Russia Ukraine War) 14ನೇ ದಿನಕ್ಕೆ ಕಾಲಿಟ್ಟಿದೆ. ಜಗತ್ತಿನ ವಿವಿಧ ದೇಶಗಳು ರಷ್ಯಾವನ್ನು ವಿರೋಧಿಸಿದರೂ ಉಕ್ರೇನ್​ ಮೇಲಿನ ಯುದ್ಧವನ್ನು ಮುಂದುವರೆಸಿದೆ. ಈ ನಡುವೆ ಉಕ್ರೇನ್​ ನೆಲದ ಸಾಕಷ್ಟು  ವಿಡಿಯೋ ಫೋಟೋಗಳು ವೈರಲ್​ ಆಗಿವೆ. ಒಂದಷ್ಟು ಮನಕಲಕುವ ದೃಶ್ಯಗಳು ಉಕ್ರೇನ್​ನಲ್ಲಿ ಕಂಡುಬರುತ್ತಿವೆ. ಈ ನಡುವೆ ಉಕ್ರೇನ್​ ಸೈನಿಕನೊಬ್ಬ(Ukraine Soldier) ಮಿಲಿಟರಿ ಚೆಕ್​ ಪಾಯಿಂಟ್​ನಲ್ಲಿ ಮಂಡಿಯೂರಿ ಗೆಳತಿಗೆ ಪ್ರಪೋಸ್ ​(Propose) ಮಾಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಜನರ ಸಾವು, ನೋವು, ಭಯದಲ್ಲಿ ಬದುಕುತ್ತಿರುವುದರ ನಡುವೆಯೂ ಈ ರೀತಿ ಪ್ರೇಮ ನಿವೇದನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಉಕ್ರೇನ್​ ನಾಗರಿಕರನ್ನು ಮಿಲಿಟರಿ ಚೆಕ್​ ಪಾಯಿಂಟ್​ನಲ್ಲಿ ತಪಾಸಣೆ ಮಾಡಲು ನಿಲ್ಲಿಸಲಾಗಿತ್ತು. ಈ ವೇಳೆ ಸೈನಿಕರ ಗುಂಪು ಅವರನ್ನು ತಪಾಸಣೆ ಮಾಡುತ್ತಿತ್ತು. ಗಾಡಿಯೆಡೆಗೆ ಮುಖ ಮಾಡಿ ನಿಂತಿದ್ದ ಯುವತಿಯನ್ನು ತಿರುಗುಸಿ ಸೈನಿಕನೊಬ್ಬ ಮಂಡಿಯೂರಿ ಪ್ರಪೋಸ್​​ ಮಾಡಿದ್ದಾನೆ. ಇದನ್ನು ಕಂಡು ಆಕೆ ಅಚ್ಚರಿಗೊಂಡಿದ್ದಾಳೆ.  ಪುಟ್ಟ ಹೂವನ್ನು ನೀಡಿ ಸೈನಿಕ ಪ್ರೇಮ ನಿವೇದನೆ ಮಾಡಿದ್ದಾನೆ.

ಅಚ್ಚರಿಯಿಂದ ಖುಷಿಗೊಂಡ ಯುವತಿ ಸೈನಿಕನನ್ನು ಹಗ್​ ಮಾಡಿದ್ದಾಳೆ ಇದರ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. 4 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ. ಭೀಕರ ದೃಶ್ಯಗಳ ನಡುವೆ ಹೃದಯಸ್ಪರ್ಶಿ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ:

ವ್ಲಾಡಿಮಿರ್ ಪುಟಿನ್ ವಿರುದ್ಧ ವಿನೂತನ ಪ್ರತಿಭಟನೆ ಮಾಡುತ್ತಿರುವ ಬ್ರಿಟನ್ ಪಬ್; ಹೇಗೆ ಅಂತೀರಾ? ಇಲ್ಲಿದೆ ನೋಡಿ

Published On - 9:38 am, Wed, 9 March 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್