Independence Day 2023: ತಮಿಳುನಾಡು; ನೀರಿನಾಳದೊಳಗೆ ತ್ರಿವರ್ಣ ಧ್ವಜಾರೋಹಣ; ಹೆಮ್ಮೆಪಟ್ಟ ನೆಟ್ಟಿಗರು

Underwater: ಇಂಡಿಯನ್ ಕೋಸ್ಟ್ ಗಾರ್ಡ್​ ಮತ್ತು ನೌಕಾದಳ ಪ್ರತ್ಯೇಕವಾಗಿ ನೀರಿನಾಳದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿವೆ. ರಾಷ್ಟ್ರಧ್ವಜಕ್ಕೆ ಮಣ್ಣು ಮತ್ತು ನೀರು ತಾಕಿಸಬಾರದು ಎಂದು ಒಬ್ಬರು. ಎಲ್ಲಿ ಧ್ವಜ ಹಾರಿಸಿದರೇನು? ಮಣಿಪುರವು ಹೊತ್ತಿ ಉರಿಯುತ್ತಿದೆ, ಸಾವಿನ ಸಂಖ್ಯೆ 180ಕ್ಕೆ ಏರಿದೆ ಎಂದು ಇನ್ನೊಬ್ಬರು. ನೀವೇನು ಹೇಳುತ್ತೀರಿ?

Independence Day 2023: ತಮಿಳುನಾಡು; ನೀರಿನಾಳದೊಳಗೆ ತ್ರಿವರ್ಣ ಧ್ವಜಾರೋಹಣ; ಹೆಮ್ಮೆಪಟ್ಟ ನೆಟ್ಟಿಗರು
ತಮಿಳುನಾಡಿನ ರಾಮೇಶ್ವರಂನ ನೀರಿನಾಳದಲ್ಲಿ ಇಂಡಿಯನ್​ ಕೋಸ್ಟ್​ ಗಾರ್ಡ್​ ತ್ರಿವರ್ಣಧ್ವಜ ಹಾರಿಸುತ್ತಿರುವುದು
Follow us
|

Updated on:Aug 15, 2023 | 1:29 PM

Tamil Nadu : ನಮ್ಮ ದೇಶವು ಇಂದು 77ನೇ ಸ್ವಾತಂತ್ರ್ಯೋತ್ಸವದ (Independence Day) ಸಂಭ್ರಮದಲ್ಲಿದೆ. ಎಲ್ಲಿ ನೋಡಿದರೂ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿವೆ. ಮನೆ, ಶಾಲೆ, ಕಾಲೇಜು, ಕಚೇರಿ, ಬೆಟ್ಟ ಗುಡ್ಡಗಳ ಮೇಲೂ! ಆದರೆ ನೀರಿನೊಳಗೆ ಧ್ವಜಾರೋಹಣ ಮಾಡಿದ್ದನ್ನು ನೋಡಿದ್ದೀರೇ? ಚೆನ್ನೈನ ರಾಮೇಶ್ವರಂನಲ್ಲಿ ಇಂಡಿಯನ್​ ಕೋಸ್ಟ್​ ಗಾರ್ಡ್​ ನೀರಿನೊಳಗೆ ಧ್ವಜಾರೋಹಣ ಮಾಡಿದ ವಿಡಿಯೋ ಮಾಡಿದೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು ಅನೇಕ ನೆಟ್ಟಿಗರು ಅಚ್ಚರಿಯಿಂದ ನೋಡುತ್ತಿದ್ದಾರೆ, ಅಲ್ಲದೆ ಈ ಸಂಗತಿಯನ್ನು ಹೀಗೆ ಯಶಸ್ವಿಯಾಗಿ ಕಾರ್ಯಗತಗೊಳಿಸಿದ್ದರ ಬಗ್ಗೆ ಹೆಮ್ಮೆಯನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ : Viral Brain Teaser: ಕೆಂಪು ಪಾಂಡಾಗಳ ನಡುವೆ ಮೂರು ನರಿಗಳು ಅಡಗಿವೆ, ಹುಡುಕುವಿರಾ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ವಿಡಿಯೋ ಅನ್ನು ಎಎನ್​ಐ ಸುದ್ದಿಸಂಸ್ಥೆಯು ಟ್ವೀಟ್ ಮಾಡಿದೆ. ಇಂಡಿಯನ್ ಕೋಸ್ಟ್​ ಗಾರ್ಡ್ ಸಿಬ್ಬಂದಿಯು ನೀರಿನಾಳಕ್ಕಿಳಿದು ರಾಷ್ಟ್ರಧ್ವಜವನ್ನು ಹಾರಿಸಿ ಸೆಲ್ಯೂಟ್​ ಹೊಡೆದು ಗೌರವ ತೋರುವುದನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ. 2 ಗಂಟೆಗಳ ಹಿಂದೆಯಷ್ಟೇ ಹಂಚಿಕೊಂಡ ಈ ವಿಡಿಯೋ ಅನ್ನು ಈತನಕ 93,000 ಜನರು ನೋಡುತ್ತಿದ್ದಾರೆ. ಈ ವಿಡಿಯೋ ಶರವೇಗದಲ್ಲಿ ಜನರನ್ನು ತಲುಪುತ್ತಿದೆ. ಸುಮಾರು 6,000 ಜನರು ಲೈಕ್ ಮಾಡಿದ್ದು, 800 ಜನರು ರೀಟ್ವೀಟ್ ಮಾಡಿದ್ದಾರೆ.

ರಾಮೇಶ್ವರಂನ ನೀರಿನಾಳದಲ್ಲಿ ಧ್ವಜಾರೋಹಣ ಮಾಡಿರುವ ವಿಡಿಯೋ ನೋಡಿ

ನಿಜಕ್ಕೂ ಇದು ಅತ್ಯಂತ ಹೆಮ್ಮೆಯ ಕ್ಷಣ ಎಂದಿದ್ದಾರೆ ಕೆಲವರು. ಜೈಹಿಂದ್​, ಭಾರತಮಾತಾಕೀ ಹೈ, ಇದು 2023ರ ಸಾಧನೆ ಮತ್ತು ನಮ್ಮ ಸೇನೆ ಮತ್ತು ದೇಶದ ಬಗ್ಗೆ ಹೆಮ್ಮೆ ಮೂಡಿಸುವ ಸಂಗತಿ ಅಂತೆಲ್ಲ ಪ್ರತಿಕ್ರಿಯಿಸಿದ್ದಾರೆ ಅನೇಕರು. ಹೀಗೆ ನೀರಿನಲ್ಲಿ ಧ್ವಜವನ್ನು ಹಾರಿಸಿದ ಮಾತ್ರಕ್ಕೆ ದೇಶದ ಸಮಸ್ಯೆಗಳು ಪರಿಹಾರವಾದಂತೆಯೇ? ಮಣಿಪುರ ಹೊತ್ತಿ ಉರಿಯುತ್ತಿದೆ, ಸಾವಿನ ಸಂಖ್ಯೆ 180ಕ್ಕೆ ಏರಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ ಒಬ್ಬರು.

ಭಾರತೀಯ ನೌಕಾಪಡೆಯು ಸಮುದ್ರದಾಳದಲ್ಲಿ ಧ್ವಜಾರೋಹಣ ಮಾಡಿದ ವಿಡಿಯೋ

ಧ್ವಜವು ನೀರು ಮತ್ತು ಮಣ್ಣನ್ನು ತಾಕಬಾರದು ಎಂದು ಹೇಳಲಾಗಿದೆ ಎಂದಿದ್ದಾರೆ ಇನ್ನೊಬ್ಬರು. ನಾನು ಈ ಎರಡೂ ವಿಡಿಯೋಗಳನ್ನು ಮತ್ತೆ ಮತ್ತೆ ನೋಡುತ್ತಿದ್ದೇನೆ ದೇಶದ ಸೈನಿಕರ ಬಗ್ಗೆ ಮತ್ತು ದೇಶದ ಬಗ್ಗೆ ಅಭಿಮಾನ ಪ್ರೀತಿ ಮೂಡುತ್ತಿದೆ ಎಂದಿದ್ದಾರೆ ಮತ್ತೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 1:27 pm, Tue, 15 August 23

ತಾಜಾ ಸುದ್ದಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್