AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿನ್ನದ ಸರ ಕದಿಯಲು ಬಂದು ತಗ್ಲಾಕೊಂಡ ಕಳ್ಳನಿಗೆ ಸ್ಥಳೀಯರು ಕೊಟ್ಟ ಶಿಕ್ಷೆ ಏನ್‌ ನೋಡಿ…

ಕಳ್ಳತನ ಮಾಡಿ ಸಿಕ್ಕಿ ಬಿದ್ರೆ, ಕಳ್ಳರಿಗೆ ಸರಿಯಾಗಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸುತ್ತಾರೆ. ಆದ್ರೆ ಇಲ್ಲೊಬ್ಬ ಚಿನ್ನದ ಸರ ಕದಿಯಲು ಬಂದು ಸಿಕ್ಕಿ ಬಿದ್ದ ಕಳ್ಳನಿಗೆ ಅಲ್ಲಿನ ಸ್ಥಳೀಯರು ವಿಶಿಷ್ಟ ಶಿಕ್ಷೆಯನ್ನು ನೀಡಿದ್ದಾರೆ. ಹೌದು ಸಿಕ್ಕಿಬಿದ್ದ ಕಳ್ಳನಿಗೆ ಸರಿಯಾಗಿ ಧರ್ಮದೇಟು ನೀಡಿ ಆತನ ಕೈಯಿಂದ ಡಾನ್ಸ್‌ ಮಾಡಿಸಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral Video: ಚಿನ್ನದ ಸರ  ಕದಿಯಲು ಬಂದು ತಗ್ಲಾಕೊಂಡ ಕಳ್ಳನಿಗೆ ಸ್ಥಳೀಯರು ಕೊಟ್ಟ  ಶಿಕ್ಷೆ ಏನ್‌ ನೋಡಿ…
ಮಾಲಾಶ್ರೀ ಅಂಚನ್​
| Edited By: |

Updated on: Aug 25, 2024 | 2:43 PM

Share

ಕಳ್ಳರು ಎಷ್ಟೇ ಜಾಣತಣದಿಂದ ಕಳ್ಳತನ ಮಾಡಿದರೂ, ಅದೃಷ್ಣ ಕೆಟ್ಟು ಒಂದಲ್ಲಾ ಒಂದು ದಿನ ಸಿಕ್ಕಿ ಹಾಕಿಕೊಳ್ಳುತ್ತಾರೆ. ಹೀಗೆ ಕಳ್ಳತನ ಮಾಡಲು ಹೋಗಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದು, ವದೆ ತಿಂದ ಅದೆಷ್ಟೋ ಘಟನೆಗಳು ನಡೆದಿವೆ. ಸಾಮಾನ್ಯವಾಗಿ ಹೀಗೆ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಕಳ್ಳರಿಗೆ ಭರ್ಜರಿ ಧರ್ಮದೇಟು ಕೊಟ್ಟು ಪೊಲೀಸರಿಗೆ ಒಪ್ಪಿಸಲಾಗುತ್ತದೆ. ಆದ್ರೆ ಇಲ್ಲೊಂದು ತಮಾಷೆಯ ಘಟನೆ ನಡೆದಿದ್ದು, ಚಿನ್ನದ ಸರ ಕದಿಯಲು ಬಂದು ಸಿಕ್ಕಿ ಹಾಕಿಕೊಂಡ ಕಳ್ಳನನ್ನು ಹಿಡಿದು ಸ್ಥಳೀಯರೆಲ್ಲಾ ಸೇರಿ ಭರ್ಜರಿ ಧರ್ಮದೇಟು ನೀಡಿದ್ದು ಮಾತ್ರವಲ್ಲದೆ, ಡ್ಯಾನ್ಸ್‌ ಮಾಡುವಂತೆ ಆತನಿಗೆ ಶಿಕ್ಷೆ ಕೂಡಾ ವಿಧಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ವರದಿಗಳ ಪ್ರಕಾರ ಚಿನ್ನದ ಸರ ಕದ್ದು ಪರಾರಿಯಾಗುತ್ತಿದ್ದ ವೇಳೆ ಕಳ್ಳನೊಬ್ಬ ಸಾರ್ವಜನಿಕರ ಕೈಯಲ್ಲಿ ತಗ್ಲಾಕೊಂಡಿದ್ದು, ಆತನಿಗೆ ಹಿಗ್ಗಾಮುಗ್ಗ ಜಾಡಿಸಿ, ಡಾನ್ಸ್‌ ಮಾಡುವಂತೆ ಒತ್ತಾಯಿಸಿದ್ದಾರೆ. ಈ ಕುರಿತ ಪೋಸ್ಟ್‌ ಒಂದನ್ನು ಎಂಬ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಚಿನ್ನದ ಸರ ಕದಿಯಲು ಬಂದು ಸಿಕ್ಕಿ ಬಿದ್ದ ಕಳ್ಳನ ಕೈಯಲ್ಲಿ ಸ್ಥಳೀಯ ನಿವಾಸಿಗಳು ಡಾನ್ಸ್‌ ಮಾಡಿಸುವಂತಹ ದೃಶ್ಯವನ್ನು ಕಾಣಬಹುದು. ರಾತ್ರಿ ವೇಳೆ ಕಳ್ಳನೊಬ್ಬ ಚಿನ್ನದ ಸರ ಕದಿಯಲು ಬಂದು ತಗ್ಲಾಕೊಂಡಿದ್ದು, ಅಲ್ಲಿದ್ದ ಸ್ಥಳೀಯರು ಆತನಿಗೆ ಹಿಗ್ಗಾಮುಗ್ಗಾ ಜಾಡಿಸಿ, ಡಾನ್ಸ್‌ ಮಾಡುವ ಶಿಕ್ಷೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಆಗಸ್ಟ್‌ 23 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.7 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಹೀಗೆ ಕಿರುಕುಳ ನೀಡುವುದು ಸರಿಯಲ್ಲ, ಆತ ತಪ್ಪು ಮಾಡಿದ್ರೆ ಅವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬೇಕಿತ್ತುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈ ಶಿಕ್ಷೆಯನ್ನು ಆ ಕಳ್ಳ ಎಂದಿಗೂ ಮರೆಯಲಾರʼ ಎಂಬ ತಮಾಷೆಯ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದು ಅತ್ಯುತ್ತಮ ಶಿಕ್ಷೆʼ ಎಂದು ಹೇಳಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?
ಅದ್ಭುತ, ಅತ್ಯದ್ಭುತ; ಶುಭ್​​ಮನ್ ಡೈವ್ ಕ್ಯಾಚ್​​​ಗೆ CSK ಸೈಲೆಂಟ್
ಅದ್ಭುತ, ಅತ್ಯದ್ಭುತ; ಶುಭ್​​ಮನ್ ಡೈವ್ ಕ್ಯಾಚ್​​​ಗೆ CSK ಸೈಲೆಂಟ್
ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ
ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ
ನ್ಯೂಯಾರ್ಕ್​ನಲ್ಲಿ ಭಾರಿ ಮಳೆ, ಪ್ರವಾಹ ಸ್ಥಿತಿ, ಕೆರೆಯಂತಾದ ರಸ್ತೆಗಳು
ನ್ಯೂಯಾರ್ಕ್​ನಲ್ಲಿ ಭಾರಿ ಮಳೆ, ಪ್ರವಾಹ ಸ್ಥಿತಿ, ಕೆರೆಯಂತಾದ ರಸ್ತೆಗಳು