AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಡಿವೋರ್ಸ್‌ ಪಡೆದು ಬರೋಬ್ಬರಿ 50 ವರ್ಷಗಳ ಬಳಿಕ ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ವಿಚ್ಛೇದಿತ ದಂಪತಿ

ನಮ್ಮ ಸುತ್ತಮುತ್ತ ನಡೆಯುವ ಕೆಲವೊಂದು ಸಂಗತಿಗಳನ್ನು ನೋಡಿದಾಗ, ಅರೇ ಇದೆಲ್ಲಾ ಸಾಧ್ಯನಾ ಅಂತ ಭಾಸವಾಗುತ್ತದೆ. ಇದೀಗ ಇಲ್ಲೊಂದು ಇಂತಹದ್ದೇ ಅಚ್ಚರಿಯ ಪ್ರಕರಣ ನಡೆದಿದ್ದು, ಪರಮ ಶತ್ರುಗಳಂತೆ ಜೀವಿಸುವ ವಿಚ್ಛೇದಿತ ದಂಪತಿಗಳ ಮಧ್ಯೆ, ಇಲ್ಲಿಬ್ಬರು ಡಿವೋರ್ಸ್‌ ಪಡೆದು ದೂರ ದೂರವಾಗಿದ್ದ ದಂಪತಿ ಮತ್ತೆ ಒಂದಾಗಿದ್ದಾರೆ. ವಿಚ್ಛೇದನ ಪಡೆದು ಬರೋಬ್ಬರಿ 50 ವರ್ಷಗಳ ಬಳಿಕ ಇದೀಗ ಮತ್ತೊಮ್ಮೆ ಈ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಈ ಕುರಿತ ಸುದ್ದಿಯೊಂದು ಸಖತ್‌ ವೈರಲ್‌ ಆಗುತ್ತಿದೆ.

Viral: ಡಿವೋರ್ಸ್‌ ಪಡೆದು ಬರೋಬ್ಬರಿ 50 ವರ್ಷಗಳ ಬಳಿಕ ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ವಿಚ್ಛೇದಿತ ದಂಪತಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Dec 07, 2024 | 4:04 PM

Share

ಬಹುಶಃ ಬ್ರೇಕಪ್‌ ಆದ ಬಳಿಕ ಮತ್ತೊಮ್ಮೆ ಪ್ರೇಮಿಗಳು ಒಂದಾದಂತಹ ಘಟನೆಗಳನ್ನು ನೋಡಿರಬಹುದು ಆದ್ರೆ ಮದುವೆಯಾಗಿ ಡಿವೋರ್ಸ್‌ ಪಡೆದು ದೂರವಾದ ದಂಪತಿಗಳು ಮರು ಮದುವೆಯಾಗುವಂತಹ ಅಥವಾ ಮತ್ತೆ ಒಂದಾದಂತಹ ಪ್ರಕರಣಗಳನ್ನು ನೀವ್ಯಾವತ್ತೂ ನೋಡಿರಲಿಕ್ಕಿಲ್ಲ ಅಲ್ವಾ. ಇಲ್ಲೊಂದು ಇಂತಹ ಅಪರೂಪದ ಘಟನೆ ನಡೆದಿದ್ದು, ಪರಮ ಶತ್ರುಗಳಂತೆ ಜೀವಿಸುವ ವಿಚ್ಛೇದಿತ ದಂಪತಿಗಳ ಮಧ್ಯೆ, ಇಲ್ಲಿಬ್ಬರು ಡಿವೋರ್ಸ್‌ ಪಡೆದು ದೂರ ದೂರವಾಗಿದ್ದ ದಂಪತಿಗಳು ಮತ್ತೆ ಒಂದಾಗಿದ್ದಾರೆ. ವಿಚ್ಛೇದನ ಪಡೆದು ಬರೋಬ್ಬರಿ 50 ವರ್ಷಗಳ ಬಳಿಕ ಇದೀಗ ಮತ್ತೊಮ್ಮೆ ಈ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಕುರಿತ ಸುದ್ದಿಯೊಂದು ಸಖತ್‌ ವೈರಲ್‌ ಆಗುತ್ತಿದೆ.

ಅಮೇರಿಕಾದ ಪೆನ್ಸಿಲ್ವೇನಿಯಾದ ವಿಚ್ಛೇದಿತ ದಂಪತಿಗಳಿಬ್ಬರು ಇದೇ ಭಾನುವಾರ (ಡಿಸೆಂಬರ್‌ 8) ಅಂದರೆ ನಾಳೆ ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಡಿವೋರ್ಸ್‌ ಪಡೆದು ದೂರ ದೂರವಾಗಿದ್ದ ಈ ದಂಪತಿಗಳು ಇದೀಗ ಒಂದಾಗಿದ್ದು, ಬರೋಬ್ಬರಿ 50 ವರ್ಷಗಳ ಬಳಿಕ ಇಳಿ ವಯಸ್ಸಿನಲ್ಲಿ ತಮ್ಮ ಮಕ್ಕಳು, ಮೊಮ್ಮಕ್ಕಳ ಸಮ್ಮುಖದಲ್ಲಿ ಮರುಮದುವೆಯಾಗಲು ನಿರ್ಧರಿಸಿದ್ದಾರೆ.

ಫೇ ಗೇಬಲ್ ಮತ್ತು ರಾಬರ್ಟ್ ವೆನ್ರಿಚ್ 1951 ರಲ್ಲಿ ಪ್ರೀತಿಸಿ ಮದುವೆಯಾಗುತ್ತಾರೆ. ಈ ದಂಪತಿಗೆ 4 ಮಕ್ಕಳು ಕೂಡಾ ಜನಿಸುತ್ತಾರೆ. ಆದ್ರೆ ಕೆಲ ಕಾಲದ ಬಳಿಕ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿ, 1975 ರಲ್ಲಿ ಈ ಇಬ್ಬರೂ ಡಿವೋರ್ಸ್‌ ಪಡೆದುಕೊಳ್ಳುತ್ತಾರೆ. ನಂತರ ಈ ಇಬ್ಬರು ಬೇರೆ ಬೇರೆ ಮದುವೆಯನ್ನು ಸಹ ಆಗ್ತಾರೆ. ಕೆಲ ಕಾಲಗಳ ಬಳಿಕ ಇವರಿಬ್ಬರ ಸಂಗಾತಿಗಳು ಮರಣವನ್ನು ಮರಣ ಹೊಂದುತ್ತಾರೆ. ಆದರೆ ಡಿವೋರ್ಸ್‌ ಪಡೆದು ಬೇರೆ ಬೇರೆಯಾಗಿದ್ದ ಇವರಿಬ್ಬರ ಮಧ್ಯೆ ಮಾತ್ರ ಉತ್ತಮ ಸಂಬಂಧವಿತ್ತು. ಮತ್ತು ಆಗಾಗ್ಗೆ ಕುಟುಂಬದ ಕಾರ್ಯಕ್ರಮಗಳಲ್ಲಿ ಭೇಟಿಯಾಗುತ್ತಿದ್ದರು. ಇದೇ ಭೇಟಿ ಇವರಿಬ್ಬರ ಮಧ್ಯೆ ಒಲವಿನ ಕೊಂಡಿಯನ್ನು ಬೆಸೆದಿದ್ದು, ಅಂತಿಮವಾಗಿ ಇದೀಗ ತಮ್ಮ ಇಳಿ ವಯಸ್ಸಿನಲ್ಲಿ ಇವರಿಬ್ಬರು ಮತ್ತೊಮ್ಮೆ ಒಂದಾಗಲು ಬಯಸಿದ್ದಾರೆ. ಪ್ರಸ್ತುತ ವೆನ್ರಿಚ್‌ ಅವರಿಗೆ 94 ವರ್ಷ ಹಾಗೂ ಫೇ ಗೇಬಲ್ ಅವರಿಗೆ 89 ವರ್ಷ ವಯಸ್ಸಾಗಿದ್ದು, ಇದೇ ಭಾನುವಾರ ಈ ವಿಚ್ಛೇದಿತ ದಂಪತಿ ತಮ್ಮ ಮಕ್ಕಳು, ಮೊಮ್ಮಕ್ಕಳ ಸಮ್ಮುಖದಲ್ಲಿ ಮರುಮದುವೆಯಾಗಲಿದ್ದಾರೆ.

ಇದನ್ನೂ ಓದಿ: ಸಿಂಪತಿ ಟ್ರಿಕ್ಸ್‌ ವರ್ಕ್‌ ಆಯ್ತು; ರ‍್ಯಾಪಿಡೊ ಕ್ಯಾಬ್‌ ಚಾಲಕನ ಮೋಸದಾಟದಿಂದ ಪಾರದ ಕಥೆಯನ್ನು ಹಂಚಿಕೊಂಡ ಬೆಂಗಳೂರಿನ ಯುವಕ

“ಅವಳು ನನ್ನ ಜೀವನದ ಮೊದಲ ಪ್ರೀತಿ, ಆಕೆಯನ್ನು ನಾನು ಮರಳಿ ಪಡೆಯುತ್ತೇನೆ ಎಂದು ನಾನು ಯಾವತ್ತೂ ಯೋಚಿಸಿರಲಿಲ್ಲ. ಇದೀಗ ಮತ್ತೊಮ್ಮೆ ಅವಳು ನನಗೆ ಸಿಕ್ಕಿದ್ದು ಬಹಳ ಖುಷಿಯಾಗಿದೆ. ಜೀವನ ಪೂರ್ತಿ ನಾನು ಆಕೆಯೊಂದಿಗೆ ಸಂತೋಷದಿಂದ ಜೀವನ ಸಾಗಿಸಲು ನಿರ್ಧರಿಸಿದ್ದೇನೆ” ಎಂದು ವೆನ್ರಿಚ್ ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ