AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹೆಲ್ಮೆಟ್ ಇಲ್ಲದೆ ಕಾರು ಚಲಾಯಿಸಿದ ಚಾಲಕನಿಗೆ ದಂಡ ವಿಧಿಸಿದ ಟ್ರಾಫಿಕ್ ಪೊಲೀಸ್

ಈ ಹಿಂದೆ ಹೆಲ್ಮೆಟ್ ಧರಿಸಿಲ್ಲ ಅಂತ ಹೇಳಿ ಆಟೋ ಡ್ರೈವರ್ ಒಬ್ಬರಿಗೆ 500 ರೂ. ದಂಡ ವಿಧಿಸಿರುವ ವಿಚಿತ್ರ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿತ್ತು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದ್ದಕ್ಕಾಗಿ ಕಾರ್ ಚಾಲಕರೊಬ್ಬರಿಗೆ ಟ್ರಾಫಿಕ್ ಪೊಲೀಸರು 1,000 ರೂ. ದಂಡ ವಿಧಿಸಿದ್ದಾರೆ. ಈ ಸುದ್ದಿ ಇದೀಗ ಸಖತ್ ವೈರಲ್ ಆಗುತ್ತಿದೆ.

Viral: ಹೆಲ್ಮೆಟ್ ಇಲ್ಲದೆ ಕಾರು ಚಲಾಯಿಸಿದ ಚಾಲಕನಿಗೆ ದಂಡ ವಿಧಿಸಿದ ಟ್ರಾಫಿಕ್ ಪೊಲೀಸ್
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Aug 27, 2024 | 4:17 PM

Share

ವಾಹನ ಚಲಾಯಿಸುವ ವೇಳೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯ. ಒಂದು ವೇಳೆ ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದರೆ ದಂಡ ಬೀಳುವುದಂತೂ ಖಂಡಿತ. ಆದ್ರೆ ಇಲ್ಲೊಂದು ವಿಚಿತ್ರ ಘಟನೆಯೊಂದು ನಡೆದಿದ್ದು, ಕಾರ್ ಡ್ರೈವ್ ಮಾಡುವಾಗ ಹೆಲ್ಮೆಟ್ ಧರಿಸಿಲ್ಲ ಎಂದು ಚಾಲಕರೊಬ್ಬರಿಗೆ ಟ್ರಾಫಿಕ್ ಪೊಲೀಸ್ 1 ಸಾವಿರ ರೂ. ದಂಡ ವಿಧಿಸಿದ್ದಾರೆ. ಈ ಸುದ್ದಿ ಇದೀಗ ಸಖತ್ ವೈರಲ್ ಆಗಿದೆ.

ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಾರ್ ಚಲಾಯಿಸುವಾಗ ಹೆಲ್ಮೆಟ್ ಧರಿಸದಿದ್ದಕ್ಕೆ ಪತ್ರಕರ್ತರೊಬ್ಬರಿಗೆ 1000 ರೂ. ದಂಡ ವಿಧಿಸಲಾಗಿದೆ. NDTV ಪ್ರಕಾರ ಒಂಬತ್ತು ತಿಂಗಳ ಹಿಂದೆ (ನವೆಂಬರ್ 9, 2023) ಪತ್ರಕರ್ತ ತುಷಾರ್ ಸಕ್ಸೇನಾ ಅವರು ಕಾರು ಓಡಿಸುವಾಗ ಹೆಲ್ಮೆಟ್ ಧರಿಸಿಲ್ಲ ಎಂಬ ಆರೋಪದ ಮೇಲೆ ರಾಂಪುರದಿಂದ 188 ಕಿಮೀ ದೂರದಲ್ಲಿರುವ ಗೌತಮ್ ಬುದ್ಧ ನಗರ ಜಿಲ್ಲೆಯ ( ನೋಯ್ಡಾ ) ಪೊಲೀಸರು 1,000 ರೂ. ದಂಡದ ಚಲನ್ ವಿಧಿಸಿದ್ದರು. ಆರಂಭದಲ್ಲಿ, ತುಷಾರ್ ಇದೇನೋ ತಪ್ಪಾಗಿ ಬಂದಿರಬೇಕು ಎಂದು ಅದನ್ನು ನಿರ್ಲಕ್ಷಿಸಿದರು. ಆದ್ರೆ ನಂತರ ಮೇಲ್ ಕೂಡಾ ಬಂತು. ಅದರಲ್ಲಿ ದಂಡ ಮೊತ್ತವನ್ನು ಪಾವತಿಸಲು ವಿಫಲವಾದರೆ ನ್ಯಾಯಾಲಯಕ್ಕೆ ಹಾಜರಾಗಬೇಕಾಗುತ್ತದೆ ಎಂಬುದನ್ನು ಅದರಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದೇವೆ, ಪ್ರೀತಿಗಾಗಿ ಸಾಯುತ್ತಿದ್ದೇವೆ… ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ನವದಂಪತಿ

ಇದರಿಂದ ಶಾಕ್ ಗೆ ಒಳಗಾದ ತುಷಾರ್ ‘ನೀವು ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ, ದಂಡವನ್ನು ಪಡೆಯುವುದು ಸರಿ. ಆದ್ರೆ ನನಗ್ಯಾಕೆ ದಂಡ ವಿಧಿಸಿದ್ದು, ನಾನು ಎನ್‌ಸಿಆರ್ ಪ್ರದೇಶಕ್ಕೆ ನಾನು ಕಾರ್ ಚಲಾಯಿಸುತ್ತಾ ಹೋಗೇ ಇಲ್ಲ ಇದಲ್ಲದೆ ಕಾರಿನೊಳಗೆ ಹೆಲ್ಮೆಟ್ ಧರಿಸಬೇಕು ಎಂದು ಹೇಳುವ ಯಾವುದೇ ನಿಯಮವಿದ್ದರೆ, ಅದು ಯಾವಾಗದಿಂದ ಜಾರಿಯಾಗಿದ್ದು ಎಂದು ದಯವಿಟ್ಟು ತಿಳಿಸುವಿರಾ’ಎಂದು ಕೇಳಿದ್ದಾರೆ. ಈ ಬಗ್ಗೆ ತನಿಖೆ ನಡೆದು ಇದೀಗ ದಂಡವನ್ನು ಹಿಂಪಡೆಯುವಂತೆ ನೋಯ್ಡಾ ಸಂಚಾರ ಪೊಲೀಸರಿಗೆ ಮನವಿ ಮಾಡಲಾಗಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?
ಅದ್ಭುತ, ಅತ್ಯದ್ಭುತ; ಶುಭ್​​ಮನ್ ಡೈವ್ ಕ್ಯಾಚ್​​​ಗೆ CSK ಸೈಲೆಂಟ್
ಅದ್ಭುತ, ಅತ್ಯದ್ಭುತ; ಶುಭ್​​ಮನ್ ಡೈವ್ ಕ್ಯಾಚ್​​​ಗೆ CSK ಸೈಲೆಂಟ್
ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ
ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ