AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖದಲ್ಲಿ ಕೂದಲು ಬೆಳೆದಿದೆ ಎಂದು ಅಪಹಾಸ್ಯ ಆದರೆ ಈಕೆ ಬೋರ್ಡ್ ಪರೀಕ್ಷೆಯಲ್ಲಿ ಟಾಪರ್​

ಇದೀಗ ಈ ಬಾಲಕಿಗೆ ಅಪಹಾಸ್ಯ ಮಾಡುತ್ತಿರುವ ಟ್ರೋಲ್​ಗಳು ಹೆಚ್ಚಾಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಾಲಕಿಯ ಬೆಂಬಲಕ್ಕೆ ನಿಂತಿದ್ದಾರೆ. "ಯುಪಿ ಬೋರ್ಡ್ ಹೈಸ್ಕೂಲ್ ಪರೀಕ್ಷೆಯಲ್ಲಿ ಟಾಪರ್​ ಆದ ಪ್ರಾಚಿ ನಿಗಮ್ ಅವರನ್ನು ನಾನು ಅಭಿನಂದಿಸುತ್ತೇನೆ . ಜನರು ಅವಳನ್ನು ಟ್ರೋಲ್ ಮಾಡುತ್ತಿದ್ದಾರೆ ಎಂದು ತಿಳಿದು ಬೇಸರವಾಗಿದೆ " ಎಂದು ಆರೋಗ್ಯ ತರಬೇತುದಾರ ಪ್ರಿಯಾಂಕಾ ಮಾತನ್ಹೆಲಿಯಾ ಬರೆದಿದ್ದಾರೆ.

ಮುಖದಲ್ಲಿ ಕೂದಲು ಬೆಳೆದಿದೆ ಎಂದು ಅಪಹಾಸ್ಯ ಆದರೆ ಈಕೆ ಬೋರ್ಡ್ ಪರೀಕ್ಷೆಯಲ್ಲಿ ಟಾಪರ್​
ಪ್ರಾಚಿ ನಿಗಮ್
ಅಕ್ಷತಾ ವರ್ಕಾಡಿ
|

Updated on:Apr 22, 2024 | 5:14 PM

Share

ಉತ್ತರ ಪ್ರದೇಶದ 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಶೇಕಡಾ 98.5 ರಷ್ಟು ಅಂಕ ಗಳಿಸಿದ್ದ ಪ್ರಾಚಿ ನಿಗಮ್ ಎಂಬ ಬಾಲಕಿ ಫೋಟೋ ಎಲ್ಲೆಡೆ ವೈರಲ್​​ ಆಗಿತ್ತು. ಆದರೆ ಆಕೆಯ ಫೋಟೋ ಸಾಕಷ್ಟು ಟ್ರೋಲ್​ಗಳಿಗೆ ಕಾರಣವಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದರೂ ಕೂಡ ಈ ಬಾಲಕಿ ತನ್ನ ನೋಟದಿಂದಲೇ ಸಾಕಷ್ಟು ಟೀಕೆಗೆ ಕಾರಣಳಾಗಿದ್ದಾಳೆ. ಇದೀಗ ಈ ಬಾಲಕಿಗೆ ಅಪಹಾಸ್ಯ ಮಾಡುತ್ತಿರುವ ಟ್ರೋಲ್​ಗಳು ಹೆಚ್ಚಾಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಾಲಕಿಯ ಬೆಂಬಲಕ್ಕೆ ನಿಂತಿದ್ದಾರೆ.

ಪ್ರಾಚಿ ನಿಗಮ್ ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ (PCOS) ನಿಂದ ಬಳಲುತ್ತಿದ್ದು, ಆಕೆಯ ಮುಖದಲ್ಲಿ ಅತಿಯಾಗಿ ಕೂದಲು ಬೆಳದುಕೊಂಡಿದೆ. ಅಂಡಾಶಯಗಳು ಅಸಹಜ ಪ್ರಮಾಣದ ಆಂಡ್ರೋಜೆನ್‌ಗಳು, ಪುರುಷ ಲೈಂಗಿಕ ಹಾರ್ಮೋನುಗಳನ್ನು ಉತ್ಪಾದಿಸುವ ಸ್ಥಿತಿಯನ್ನು ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ. ಈ ಸಮಸ್ಯೆ ಹದಿಹರೆಯವರಲ್ಲಿ ಕಂಡು ಬರುತ್ತಿದ್ದು, ಇದರಿಂದಾಗಿ ಪುರುಷರಂತೆ ಮಹಿಳೆಯರ ಮುಖದಲ್ಲೂ ಕೂದಲು ಬೆಳೆಯುತ್ತದೆ.

ಇದನ್ನೂ ಓದಿ: ಹುಬ್ಬು ಸುಂದರವಾಗಿಸಲು ಬ್ಯೂಟಿ ಪಾರ್ಲರ್​​ ಹೋದ ಮಹಿಳೆಯ ಮುಖ ಹೇಗಾಯಿತು ನೋಡಿ

ಇದೀಗ ಈ ಬಾಲಕಿಗೆ ಅಪಹಾಸ್ಯ ಮಾಡುತ್ತಿರುವ ಟ್ರೋಲ್​ಗಳು ಹೆಚ್ಚಾಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಾಲಕಿಯ ಬೆಂಬಲಕ್ಕೆ ನಿಂತಿದ್ದಾರೆ. “ಯುಪಿ ಬೋರ್ಡ್ ಹೈಸ್ಕೂಲ್ ಪರೀಕ್ಷೆಗಳಲ್ಲಿ ಅಗ್ರಸ್ಥಾನ ಗಳಿಸಿದ್ದಕ್ಕಾಗಿ ಪ್ರಾಚಿ ನಿಗಮ್ ಅವರನ್ನು ನಾನು ಅಭಿನಂದಿಸುತ್ತೇನೆ . ಜನರು ಅವಳನ್ನು ಟ್ರೋಲ್ ಮಾಡುತ್ತಿದ್ದಾರೆ ಎಂದು ತಿಳಿದು ಬೇಸರವಾಗಿದೆ.PCOS ದೈಹಿಕವಾಗಿ ಮಾತ್ರವಲ್ಲದೆ ಸಾಮಾಜಿಕವಾಗಿ ಮತ್ತು ಮಾನಸಿಕವಾಗಿ ದುರ್ಬಲ ಸ್ಥಿತಿಯಾಗಿದೆ. ಅವಳ ಹೊರತಾಗಿಯೂ ಅವಳು ಈ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ತುಂಬಾ ಹೆಮ್ಮೆಪಡುತ್ತೇನೆ” ಎಂದು ಆರೋಗ್ಯ ತರಬೇತುದಾರ ಪ್ರಿಯಾಂಕಾ ಮಾತನ್ಹೆಲಿಯಾ (@SavvyPriya) ಬರೆದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:59 pm, Mon, 22 April 24

ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು