AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹಣಕ್ಕಾಗಿ ಬ್ಲಾಕ್‌ಮೇಲ್;‌ ಗೆಳತಿಯ ಕಾಟ ತಾಳಲಾರದೆ ಆತ್ಮಹತ್ಯೆಯ ದಾರಿ ಹಿಡಿದ ಉದ್ಯಮಿ

ಪ್ರೀತಿ, ಪ್ರೇಮದ ಹೆಸರಲ್ಲಿ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಂಡವರು ಹಲವರಿದ್ದಾರೆ. ಅದೇ ರೀತಿಯ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದ್ದು, ತಾನು ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಗೆಳತಿಯ ಬ್ಯಾಕ್‌ಮೇಲ್‌ ಕಾಟಕ್ಕೆ ಹೆದರಿ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ವೈರಲ್‌ ಆಗುತ್ತಿದೆ.

Viral: ಹಣಕ್ಕಾಗಿ ಬ್ಲಾಕ್‌ಮೇಲ್;‌ ಗೆಳತಿಯ ಕಾಟ ತಾಳಲಾರದೆ ಆತ್ಮಹತ್ಯೆಯ ದಾರಿ ಹಿಡಿದ ಉದ್ಯಮಿ
ವೈರಲ್​​ ಪೋಸ್ಟ್​​
TV9 Web
| Edited By: |

Updated on: Jul 17, 2024 | 6:13 PM

Share

ಪ್ರೀತಿ ಮಾಯೆ ಹುಷಾರ್‌ ಎಂದು ತಿಳಿದವರು ಹೇಳುತ್ತಾರೆ. ಈ ಪ್ರೀತಿಯೆಂಬ ಮಾಯೆಯಲ್ಲಿ ಸಿಲುಕಿ ತಮ್ಮ ಸುಂದರ ಜೀವನವನ್ನೇ ಹಾಳು ಮಾಡಿಕೊಂಡವರು ಹಲವರಿದ್ದಾರೆ. ಹೌದು ತಾನು ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸಿದ ಜೀವದ ಮೋಸದಾಟಕ್ಕೆ ಬೇಸರಗೊಂಡು ಅದೆಷ್ಟೋ ಜನರು ತಮ್ಮ ಜೀವವನ್ನೇ ಕಳೆದುಕೊಂಡಿದ್ದಾರೆ. ಅಂತಹದೇ ಘಟನೆಯೊಂದು ಇದೀಗ ನಡೆದಿದ್ದು, ದುಡ್ಡಿಗಾಗಿ ಪ್ರಿಯತಮೆ ಮಾಡುತ್ತಿದ್ದ ಬ್ಲಾಕ್‌ಮೇಲ್‌ಗೆ ಬೇಸತ್ತು ಉದ್ಯಮಿಯೊಬ್ಬರು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ.

ಈ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದ್ದು, ಇಲ್ಲಿನ ಉದ್ಯಮಿಯೊಬ್ಬರು ಗೆಳತಿಯ ಬ್ಲಾಕ್‌ಮೇಲ್‌ ಕಾಟಕ್ಕೆ ಬೇಸತ್ತು ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜುಲೈ 15 ರಂದು ಈ ಘಟನೆ ನಡೆದಿದ್ದು, ಉದ್ಯಮಿ ಮನೋಜ್‌ ಕುಮಾರ್‌ (34) ಸೈರ್‌ಪುರ ಪ್ರದೇಶದ ಹೋಟೆಲ್‌ ಒಂದರಲ್ಲಿ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹದ ಬಳಿ ಪೊಲೀಸರಿಗೆ ಪಿಸ್ತೂಲ್‌, ಕಾರ್ಟ್ರಿಡ್ಜ್‌ ಶೆಲ್‌ಗಳು ಮತ್ತು ಡೆತ್ ನೋಟ್‌ ಸಿಕ್ಕಿದ್ದು, ಆ ಲೆಟರ್‌ನಲ್ಲಿ ಉದ್ಯಮಿ ತಾನು ಪ್ರೀತಿಸಿದಾಕೆಯಿಂದ ಮೋಸ ಹೋಗಿರುವುದಾಗಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ದ್ವಾಪರ ಯುಗವನ್ನು ನೆನಪಿಸುವಂತಿದೆ ಈ ದೃಶ್ಯ, ಗೋವಿನ ಮುಂದೆ ಗರಿ ಬಿಚ್ಚಿ ಕುಣಿದ ಮಯೂರಿ

ವೈರಲ್​​​ ಪೋಸ್ಟ್​​​

ʼಆಕೆ ನನ್ನನ್ನು ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಸಿದ್ದು ಮಾತ್ರವಲ್ಲದೆ ಹಣಕ್ಕಾಗಿ ಪದೇ ಪದೇ ನನಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದಳು. ನಾನು ನನ್ನ ಫ್ಲಾಟ್‌ ಅನ್ನು 7 ಲಕ್ಷ ರೂಪಾಯಿಗಳಿಗೆ ಮಾರಿ ಆ ಹಣವನ್ನು ಕೂಡಾ ಆಕೆಗೆ ನೀಡಿದ್ದೇನೆ. ಹೀಗಿದ್ದರೂ ಆಕೆಯ ಹಣದ ದಾಹ ಕಡಿಮೆಯಾಗಿರಲಿಲ್ಲ. ನನ್ನ ಈ ಸಾವಿಗೆ ನ್ಯಾಯ ಸಿಗುವವರೆಗೂ ನನ್ನ ಆತ್ಮಕ್ಕೆ ಶಾಂತಿ ಸಿಗುವುದಿಲ್ಲʼ ಎಂದು ಡೆತ್‌ ನೋಟ್‌ನಲ್ಲಿ ಬರೆಯಲಾಗಿದೆ.

ವಾಣಿ ಮೆಹ್ರೋತ್ರಾ (vani_mehrotra) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ಕುರಿತ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ