Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಶಿವಲಿಂಗದ ಮೇಲೆ ಅರ್ಘ್ಯದಿಂದ ಕೈ ತೊಳೆದುಕೊಂಡ ಉತ್ತರಪ್ರದೇಶದ ಸಚಿವ; ಪ್ರತಿಪಕ್ಷಗಳಿಂದ ಟೀಕೆ

Shivling : ಸಚಿವ ಸತೀಶ ಶರ್ಮಾ ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ, 'ಸನಾತನ ಧರ್ಮವನ್ನು ಅವಮಾನಿಸಿದ ಶರ್ಮಾ ರಾಜೀನಾಮೆ ಕೊಡಬೇಕು' ಎಂದು ಒತ್ತಾಯಿಸುತ್ತಿವೆ. ಸಚಿವ ಉದಯನಿಧಿ ಸ್ಟಾಲಿನ್​ 'ಸನಾತನ ಧರ್ಮ'ದ ಕುರಿತಾಗಿ ನೀಡಿದ ಹೇಳಿಕೆಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ಈ ವಿಡಿಯೋ ಪ್ರತಿಪಕ್ಷಗಳಿಗೆ ಅವಕಾಶ ಮಾಡಿಕೊಟ್ಟಿದೆ.

Viral Video: ಶಿವಲಿಂಗದ ಮೇಲೆ ಅರ್ಘ್ಯದಿಂದ ಕೈ ತೊಳೆದುಕೊಂಡ ಉತ್ತರಪ್ರದೇಶದ ಸಚಿವ; ಪ್ರತಿಪಕ್ಷಗಳಿಂದ ಟೀಕೆ
ಉತ್ತರ ಪ್ರದೇಶದ ಸಚಿವ ಸತೀಶ ಶರ್ಮಾ ಶಿವಲಿಂಗದೊಳಗೆ ಕೈ ತೊಳೆಯುತ್ತಿರುವ ದೃಶ್ಯ
Follow us
ಶ್ರೀದೇವಿ ಕಳಸದ
|

Updated on: Sep 05, 2023 | 11:56 AM

Uttar Pradesh: ಉತ್ತರ ಪ್ರದೇಶದ ಸಚಿವ ಸತೀಶ್​ ಶರ್ಮಾ (Satish Sharma) ಬಾರಾಬಂಕಿಯ ಲೋಧೇಶ್ವರ ಮಹಾದೇವ ದೇವಸ್ಥಾನದಲ್ಲಿರುವ ಅರ್ಘ್ಯದಿಂದ ಶಿವಲಿಂಗದ ಮೇಲೆ ಕೈತೊಳೆದುಕೊಂಡ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಪ್ರತಿಪಕ್ಷಗಳಿಂದ ಸತೀಶ ಶರ್ಮಾ ಸಾಕಷ್ಟು ಟೀಕೆಗೆ ಒಳಗಾಗುತ್ತಿದ್ದಾರೆ. ಶರ್ಮಾ ಅವರು ಕೈತೊಳೆದುಕೊಳ್ಳಲು ಪುರೋಹಿತರು ಸಹಾಯ ಮಾಡುವುದನ್ನು ವಿಡಿಯೋದಲ್ಲಿ ಗಮನಿಸಬಹುದಾಗಿದೆ. ದ್ರಾವಿಡ ಮುನ್ನೇತ್ರ ಕಳಗಂ ಸಚಿವ ಉದಯನಿಧಿ ಸ್ಟಾಲಿನ್​ ‘ಸನಾತನ ಧರ್ಮ’ದ ಕುರಿತಾಗಿ ನೀಡಿದ ಹೇಳಿಕೆಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ಈ ವಿಡಿಯೋ ಪ್ರತಿಪಕ್ಷಗಳಿಗೆ ಅವಕಾಶ ಮಾಡಿಕೊಟ್ಟಿದೆ.

ಇದನ್ನೂ ಓದಿ : Viral Video: ಆಕ್ಲೆಂಡ್​ ವಿಮಾನ ನಿಲ್ದಾಣದಲ್ಲಿ ಪ್ರೇಮನಿವೇದನೆ ಮಾಡಿಕೊಂಡ ಆ ಕ್ಷಣಗಳು

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸತೀಶ ಶರ್ಮಾ ಅವರ ಈ ನಡೆಯ ಬಗ್ಗೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಜಯ್​ ರೈ ಅಸಮಾಧಾನ ವ್ಯಕ್ತಪಡಿಸಿ, ‘ಅರ್ಘ್ಯದಿಂದ ಶಿವಲಿಂಗದ ಮೇಲೆ ಕೈತೊಳೆದು ಸನಾತನ ಧರ್ಮವನ್ನು ಅವಮಾನಿಸಿದ್ದಾರೆ’ ಎಂದಿದ್ದಾರೆ. ಕಾಂಗ್ರೆಸ್ ನಾಯಕ ಸುರೇಂದ್ರ ರಜಪೂತ್, ‘ಈ ಮೂಲಕ ಅವರು ಶಿವನನ್ನೇ ಅವಮಾನಿಸಿದ್ದಾರೆ. ಸನಾತನ ಧರ್ಮದ ಬಗ್ಗೆ ಅಗೌರವ ತೋರುವವರು ಮಾತ್ರ ಇಂಥ ನಡೆವಳಿಕೆ ಪ್ರದರ್ಶಿಸುತ್ತಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಧರ್ಮಿಯಾದ ಇವರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾಗೊಳಿಸಬೇಕು ಇಲ್ಲವೇ ಶರ್ಮಾ ಸ್ವತಃ ರಾಜೀನಾಮೆ ಕೊಡಬೇಕು’ ಎಂದು ಒತ್ತಾಯಿಸಿದ್ದಾರೆ.

ಸತೀಶ ಶರ್ಮಾ ಶಿವಲಿಂಗದ ಮೇಲೆ ಕೈತೊಳೆಯುತ್ತಿರುವ ವಿಡಿಯೋ

ಸಮಾಜವಾದಿ ಪಕ್ಷದ ನಾಯಕ ಸುನಿಲ್ ಸಿಂಗ್ ಸಜನ್, ‘ಈ ವಿಡಿಯೋ ಬಿಜೆಪಿಯ ನಿಜವಾದ ನಡೆಯನ್ನು ಬಹಿರಂಗಗೊಳಿಸಿದೆ. ಯೋಗಿ ಆದಿತ್ಯನಾಥ್ ಇಂಥ ಅಧರ್ಮೀಯ ಸಚಿವರನ್ನು ಯಾವಾಗ ವಜಾ ಮಾಡುತ್ತದೆ?’ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ನೆಟ್ಟಿಗರನೇಕರು ಈ ವಿಡಿಯೋ ನೋಡಿ ಕಿಡಿ ಕಾರಿದ್ದಾರೆ. ಸಚಿವರು ಅಧರ್ಮಿ ಸರಿ, ಆದರೆ ಆ ಪುರೋಹಿತ? ಇಲ್ಲಿ ಇಬ್ಬರದೂ ತಪ್ಪು ಇದೆ ಎಂದು ಕೆಲವರು ಹೇಳಿದ್ದಾರೆ. ಈ ಘಟನೆಯಿಂದ ಪುರೋಹಿತನೂ ಕೆಲಸವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ ಇನ್ನೂ ಕೆಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ