AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಓಟು ಹಾಕಿದ್ದೀನಿ, ನೀವೇ ನನ್ನ ಮದುವೆ ಮಾಡಿಸ್ಬೇಕು, ಶಾಸಕರ ಬಳಿ ಬೇಡಿಕೆ ಇಟ್ಟ ವ್ಯಕ್ತಿ

ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬರು ಶಾಸಕರ ಬಳಿ ಹೋಗಿ ನಾನು ನಿಮಗೆ ಮತ ಹಾಕಿದ್ದೇನೆ ನೀವು ನನ್ನ ಮದುವೆ ಮಾಡಿಸಬೇಕು ಎಂದು ಬೇಡಿಕೆ ಇಟ್ಟಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಬಿಜೆಪಿ ಶಾಸಕರು ಮದುವೆ ಮಾಡಿಸುವುದಾಗಿ ಭರವಸೆ ಕೂಡ ಕೊಟ್ಟಿದ್ದಾರೆ.

ನಿಮಗೆ ಓಟು ಹಾಕಿದ್ದೀನಿ, ನೀವೇ ನನ್ನ ಮದುವೆ ಮಾಡಿಸ್ಬೇಕು, ಶಾಸಕರ ಬಳಿ ಬೇಡಿಕೆ ಇಟ್ಟ ವ್ಯಕ್ತಿ
ಶಾಸಕ
ನಯನಾ ರಾಜೀವ್
|

Updated on: Oct 17, 2024 | 10:54 AM

Share

‘‘ನಾನು ನಿಮಗೆ ಮತ ಹಾಕಿದ್ದೇನೆ, ನೀವು ನನ್ನ ಮದುವೆ ಮಾಡಿಸಬೇಕು’’ ಎನ್ನುವ ವ್ಯಕ್ತಿಯೊಬ್ಬರ ಮಾತು ಕೇಳಿ ಶಾಸಕರೊಬ್ಬರು ಬೆಚ್ಚಿಬಿದ್ದಿದ್ದಾರೆ. ಉತ್ತರ ಪ್ರದೇಶದ ಮಹೋಬಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಪೆಟ್ರೋಲ್ ಪಂಪ್ ಉದ್ಯೋಗಿಯೊಬ್ಬರು ಚರಖಾರಿ ಶಾಸಕ ಬ್ರಿಜ್ ಭೂಷಣ್ ರಜಪೂತ್ ಅವರ ಬಳಿ ತಮಗೆ ಮದುವೆ ಮಾಡಿಸುವಂತೆ ಮನವಿ ಮಾಡಿದ್ದಾರೆ.

ಶಾಸಕರು ತಮ್ಮ ಕಾರಿಗೆ ಪೆಟ್ರೋಲ್ ಹಾಕಿಸಲೆಂದು ಪೆಟ್ರೋಲ್ ಬಂಕ್ ಬಳಿ ಬಂದಾಗ ಅಲ್ಲಿನ ಸಿಬ್ಬಂದಿಯೊಬ್ಬರು ಶಾಸಕರ ಬಳಿ ಓಡಿ ಬಂದಿದ್ದರು. ಬಳಿಕ ನಾನು ನಿಮಗೆ ಮತ ಹಾಕಿದ್ದೇನೆ ಅದಕ್ಕೆ ಪ್ರತಿಯಾಗಿ ನೀವು ನನಗೆ ಮದುವೆ ಮಾಡಿಸಬೇಕು ಎನ್ನುವ ಬೇಡಿಕೆ ಮುಂದಿಟ್ಟರು.

ಅದಕ್ಕೆ ಶಾಂತವಾಗಿ ವರ್ತಿಸಿರುವ ಶಾಸಕರು ಹುಡುಗಿ ಹುಡುಕಿ ಮದುವೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮೊದಲು ಪೆಟ್ರೋಲ್ ಬಂಕ್ ಉದ್ಯೋಗಿ ಶಾಸಕರ ಬಳಿ ಓಡಿ ಬಂದಾಗ ಏನೋ ದೂರು ನೀಡಲು ಬಂದಿರಬಹುದು ಎಂದು ತಿಳಿದಿದ್ದರು ಬಳಿಕ, ಅವರ ಮಾತು ಕೇಳಿ ದಿಗ್ಭ್ರಮೆಗೊಂಡರು.

ಮದುವೆಯಾಗದೇ ಬೇಸರದಲ್ಲಿದ್ದೇನೆ ಎಂದು ನೌಕರ ಹೇಳಿಕೊಂಡಿದ್ದಾರೆ. ಬೇರೆ ಯಾರ ಬಳಿಯಾದರೂ ಈ ರೀತಿ ಮನವಿ ಮಾಡಿದ್ದೀರಾ ಎಂದು ಶಾಸಕರು ಕೇಳಿದಾಗ ಹೌದು ನಿಮ್ಮ ವಿರುದ್ಧ ಸ್ಪರ್ಧಿಸಿದ್ದ ಗೋಸ್ವಾಮಿ ಅವರ ಬಳಿಯೂ ಮದುವೆ ಮಾಡಿಸುವಂತೆ ಕೇಳಿಕೊಂಡಿದ್ದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ

ನಂತರ ಶಾಸಕರು ಅವರ ಸಂಬಳದ ಬಗ್ಗೆಯೂ ವಿಚಾರಿಸಿದ್ದಾರೆ, ತಿಂಗಳಿಗೆ ಆರು ಸಾವಿರ ರೂಪಾಯಿ ಸಂಬಳ, ಭೂಮಿ ಕೂಡ ಇದೆ. ಈ ವಿಡಿಯೋ ಯಾವ ಪ್ರದೇಶದ್ದು, ಯಾವಾಗ ನಡೆದಿದ್ದು ಎನ್ನುವುದರ ಬಗ್ಗೆ ಮಾಹಿತಿ ಇಲ್ಲ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್