Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಓಟು ಹಾಕಿದ್ದೀನಿ, ನೀವೇ ನನ್ನ ಮದುವೆ ಮಾಡಿಸ್ಬೇಕು, ಶಾಸಕರ ಬಳಿ ಬೇಡಿಕೆ ಇಟ್ಟ ವ್ಯಕ್ತಿ

ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬರು ಶಾಸಕರ ಬಳಿ ಹೋಗಿ ನಾನು ನಿಮಗೆ ಮತ ಹಾಕಿದ್ದೇನೆ ನೀವು ನನ್ನ ಮದುವೆ ಮಾಡಿಸಬೇಕು ಎಂದು ಬೇಡಿಕೆ ಇಟ್ಟಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಬಿಜೆಪಿ ಶಾಸಕರು ಮದುವೆ ಮಾಡಿಸುವುದಾಗಿ ಭರವಸೆ ಕೂಡ ಕೊಟ್ಟಿದ್ದಾರೆ.

ನಿಮಗೆ ಓಟು ಹಾಕಿದ್ದೀನಿ, ನೀವೇ ನನ್ನ ಮದುವೆ ಮಾಡಿಸ್ಬೇಕು, ಶಾಸಕರ ಬಳಿ ಬೇಡಿಕೆ ಇಟ್ಟ ವ್ಯಕ್ತಿ
ಶಾಸಕ
Follow us
ನಯನಾ ರಾಜೀವ್
|

Updated on: Oct 17, 2024 | 10:54 AM

‘‘ನಾನು ನಿಮಗೆ ಮತ ಹಾಕಿದ್ದೇನೆ, ನೀವು ನನ್ನ ಮದುವೆ ಮಾಡಿಸಬೇಕು’’ ಎನ್ನುವ ವ್ಯಕ್ತಿಯೊಬ್ಬರ ಮಾತು ಕೇಳಿ ಶಾಸಕರೊಬ್ಬರು ಬೆಚ್ಚಿಬಿದ್ದಿದ್ದಾರೆ. ಉತ್ತರ ಪ್ರದೇಶದ ಮಹೋಬಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಪೆಟ್ರೋಲ್ ಪಂಪ್ ಉದ್ಯೋಗಿಯೊಬ್ಬರು ಚರಖಾರಿ ಶಾಸಕ ಬ್ರಿಜ್ ಭೂಷಣ್ ರಜಪೂತ್ ಅವರ ಬಳಿ ತಮಗೆ ಮದುವೆ ಮಾಡಿಸುವಂತೆ ಮನವಿ ಮಾಡಿದ್ದಾರೆ.

ಶಾಸಕರು ತಮ್ಮ ಕಾರಿಗೆ ಪೆಟ್ರೋಲ್ ಹಾಕಿಸಲೆಂದು ಪೆಟ್ರೋಲ್ ಬಂಕ್ ಬಳಿ ಬಂದಾಗ ಅಲ್ಲಿನ ಸಿಬ್ಬಂದಿಯೊಬ್ಬರು ಶಾಸಕರ ಬಳಿ ಓಡಿ ಬಂದಿದ್ದರು. ಬಳಿಕ ನಾನು ನಿಮಗೆ ಮತ ಹಾಕಿದ್ದೇನೆ ಅದಕ್ಕೆ ಪ್ರತಿಯಾಗಿ ನೀವು ನನಗೆ ಮದುವೆ ಮಾಡಿಸಬೇಕು ಎನ್ನುವ ಬೇಡಿಕೆ ಮುಂದಿಟ್ಟರು.

ಅದಕ್ಕೆ ಶಾಂತವಾಗಿ ವರ್ತಿಸಿರುವ ಶಾಸಕರು ಹುಡುಗಿ ಹುಡುಕಿ ಮದುವೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮೊದಲು ಪೆಟ್ರೋಲ್ ಬಂಕ್ ಉದ್ಯೋಗಿ ಶಾಸಕರ ಬಳಿ ಓಡಿ ಬಂದಾಗ ಏನೋ ದೂರು ನೀಡಲು ಬಂದಿರಬಹುದು ಎಂದು ತಿಳಿದಿದ್ದರು ಬಳಿಕ, ಅವರ ಮಾತು ಕೇಳಿ ದಿಗ್ಭ್ರಮೆಗೊಂಡರು.

ಮದುವೆಯಾಗದೇ ಬೇಸರದಲ್ಲಿದ್ದೇನೆ ಎಂದು ನೌಕರ ಹೇಳಿಕೊಂಡಿದ್ದಾರೆ. ಬೇರೆ ಯಾರ ಬಳಿಯಾದರೂ ಈ ರೀತಿ ಮನವಿ ಮಾಡಿದ್ದೀರಾ ಎಂದು ಶಾಸಕರು ಕೇಳಿದಾಗ ಹೌದು ನಿಮ್ಮ ವಿರುದ್ಧ ಸ್ಪರ್ಧಿಸಿದ್ದ ಗೋಸ್ವಾಮಿ ಅವರ ಬಳಿಯೂ ಮದುವೆ ಮಾಡಿಸುವಂತೆ ಕೇಳಿಕೊಂಡಿದ್ದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ

ನಂತರ ಶಾಸಕರು ಅವರ ಸಂಬಳದ ಬಗ್ಗೆಯೂ ವಿಚಾರಿಸಿದ್ದಾರೆ, ತಿಂಗಳಿಗೆ ಆರು ಸಾವಿರ ರೂಪಾಯಿ ಸಂಬಳ, ಭೂಮಿ ಕೂಡ ಇದೆ. ಈ ವಿಡಿಯೋ ಯಾವ ಪ್ರದೇಶದ್ದು, ಯಾವಾಗ ನಡೆದಿದ್ದು ಎನ್ನುವುದರ ಬಗ್ಗೆ ಮಾಹಿತಿ ಇಲ್ಲ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ