AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಲವರ್ಸ್‌ ಎಂದು ಭಾವಿಸಿ ಸ್ವಂತ ಅಣ್ಣ-ತಂಗಿಯನ್ನೇ ಹೊಡೆದು ಜೈಲಿಗೆ ಹಾಕಿದ ಪೊಲೀಸ್‌ ಪೇದೆ

ಈ ಸಮಾಜದಲ್ಲಿ ಕೆಲವೊಮ್ಮೆ ಇಡೀ ಮನುಕುಲವೇ ತಲೆ ತಗ್ಗಿಸುವಂತಹ ಘಟನೆಗಳು ನಡೆಯುತ್ತವೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಸಿವಿಲ್‌ ಡ್ರೆಸ್‌ನಲ್ಲಿದ್ದ ಪೊಲೀಸ್‌ ಪೇದೆಯೊಬ್ಬ ಪ್ರೇಮಿಗಳೆಂಬ ಶಂಕೆಯಲ್ಲಿ ಸಹೋದರಿಯೊಂದಿಗೆ ಪೇಟೆಗೆ ಬಂದಿದ್ದ ಸಹೋದರನ ಕುತ್ತಿಗೆ ಪಟ್ಟಿ ಹಿಡಿದು ಹಿಗ್ಗಾಮುಗ್ಗ ಥಳಿಸಿ 24 ಗಂಟೆಗಳ ಕಾಲ ಪೊಲೀಸ್‌ ಠಾಣೆಯಲ್ಲಿ ಕೂಡಿ ಹಾಕಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

Video: ಲವರ್ಸ್‌ ಎಂದು ಭಾವಿಸಿ ಸ್ವಂತ ಅಣ್ಣ-ತಂಗಿಯನ್ನೇ ಹೊಡೆದು ಜೈಲಿಗೆ ಹಾಕಿದ ಪೊಲೀಸ್‌ ಪೇದೆ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Aug 28, 2024 | 5:45 PM

Share

ಕೆಲವೊಮ್ಮೆ ಪೊಲೀಸರು ತೋರುವ ಅತಿರೇಕದ ವರ್ತನೆ, ಜನ ಸಾಮಾನ್ಯರ ಮೇಲಿನ ದಬ್ಬಾಳಿಕೆಗಳು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗುತ್ತಲೇ ಇರುತ್ತವೆ. ಹೌದು ಕೆಲ ಪೊಲೀಸರು ಅಧಿಕಾರದ ದರ್ಪದಲ್ಲಿ ಅತಿರೇಕದ ವರ್ತನೆಯನ್ನು ತೋರುತ್ತಿರುತ್ತಾರೆ. ಹೀಗೆ ಬಡ ಜನರ ಮೇಲೆ ಪೊಲೀಸರ ದಬ್ಬಾಳಿಕೆ ನಡೆಸುವ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ಅಧಿಕಾರದ ದರ್ಪದಿಂದ ಇಲ್ಲೊಬ್ಬ ಪೊಲೀಸ್‌ ಪೇದೆ ಪ್ರೇಮಿಗಳೆಂಬ ಶಂಕೆಯಲ್ಲಿ ಸಹೋದರಿಯೊಂದಿಗೆ ಪೇಟೆಗೆ ಬಂದಿದ್ದ ಸಹೋದರನ ಕುತ್ತಿಗೆ ಪಟ್ಟಿ ಹಿಡಿದು ಹಿಗ್ಗಾಮುಗ್ಗ ಥಳಿಸಿ 24 ಗಂಟೆಗಳ ಕಾಲ ಪೊಲೀಸ್‌ ಠಾಣೆಯಲ್ಲಿ ಕೂಡಿ ಹಾಕಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಈ ನಾಚಿಕೆಗೇಡಿನ ಸಂಗತಿ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದಿದ್ದು, ಸಿವಿಲ್‌ ಡ್ರೆಸ್‌ನಲ್ಲಿದ್ದ ಪೊಲೀಸ್‌ ಪೇದೆಯೊಬ್ಬ ತನ್ನ ಅಧಿಕಾರದ ಮದದಿಂದ ಅಮಾಯಕ ಯುವಕನೊಬ್ಬನಿಗೆ ಹಿಗ್ಗಾಮುಗ್ಗ ಥಳಿಸಿ, ಆತ ಹಾಗೂ ಆತನ ಸ್ನೇಹಿತನನ್ನು 24 ಗಂಟೆಗಳ ಕಾಲ ಜೈಲಿನಲ್ಲಿ ಕೂಡಿ ಹಾಕಿದ್ದಾನೆ. ಈ ಯುವಕ ತನ್ನ ಸಹೋದರಿಯೊಂದಿಗೆ ಪೇಟೆಗೆ ಬಂದಿದ್ದು, ಈ ಇಬ್ಬರೂ ಪ್ರೇಮಿಗಳೆಂದು ತಪ್ಪಾಗಿ ಭಾವಿಸಿ ಪೊಲೀಸ್‌ ಪೇದೆ ಯುವಕನ ಕತ್ತಿನ ಪಟ್ಟಿ ಹಿಡಿದು ದಬಾಯಿಸಿದ್ದಾನೆ. ಯುವಕನ ಸಹೋದರಿ ಅದು ನನ್ನ ಅಣ್ಣ ದಯವಿಟ್ಟು ಬಿಟ್ಬಿಡೀ ಸ್ವಾಮಿ ಎಂದೂ ಕೇಳಿದರೂ, ಕ್ಯಾರೆ ಅನ್ನದ ಪೊಲೀಸ್‌ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿ 24 ಗಂಟೆಗಳ ಕಾಲ ಪೊಲೀಸ್‌ ಠಾಣೆಯಲ್ಲಿ ಕೂಡಿ ಹಾಕಿದ್ದಾನೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು NCMIndiaa ಎಂಬ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಉತ್ತರ ಪ್ರದೇಶ ಈಗ ಅಧೀಕೃತವಾಗಿ ಪೊಲೀಸ್‌ ರಾಜ್ಯವಾಗಿದೆ. ಸಿವಿಲ್‌ ಡ್ರೆಸ್‌ನಲ್ಲಿದ್ದ ಪೊಲೀಸ್‌ ಪೇದೆಯೊಬ್ಬ ಪ್ರೇಮಿಗಳೆಂಬ ಶಂಕೆಯಲ್ಲಿ ಸಹೋದರಿಯ ಜೊತೆ ಬಂದಿದ್ದ ಸಹೋದರನ ಮೇಲೆ ಹಲ್ಲೆ ನಡೆಸಿ, ಆತನನ್ನು ಬಂಧಿಸಿದ್ದಾನೆ. ನಿಜಕ್ಕೂ ಇದು ನಾಚಿಕೆಗೇಡಿನ ಸಂಗತಿ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಸಿವಿಲ್‌ ಡ್ರೆಸ್‌ನಲ್ಲಿದ್ದ ಪೊಲೀಸ್‌ ಪೇದೆಯೊಬ್ಬ ಪ್ರೇಮಿಗಳೆಂದು ತಪ್ಪಾಗಿ ಭಾವಿಸಿ ಸಹೋದರಿಯ ಜೊತೆ ಬಂದಿದ್ದ ಸಹೋದರನ ಕುತ್ತಿಗೆ ಪಟ್ಟಿ ಹಿಡಿದು ದಬಾಯಿಸಿ ನಂತರ ಆ ಅಮಾಯಕ ಯುವಕನ ಮೇಲೆ ಹಲ್ಲೆ ನಡೆಸುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಪ್ರಿಯಕರನಿಗಾಗಿ ಹೆತ್ತ ಕಂದಮ್ಮನನ್ನೇ ಕೊಂದು ಮೃತದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಪೊದೆಗೆ ಎಸೆದ ಪಾಪಿ ತಾಯಿ

ಆಗಸ್ಟ್‌ 27 ರಂದು ಹಂಚಿಕೊಳ್ಳಲಾದ ಈ ವಿಡಿಯೋ 41 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼನಿಜಕ್ಕೂ ನಾಚಿಕೆಗೇಡಿನ ಸಂಗತಿʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಆ ಮೂರ್ಖ ಪೊಲೀಸಪ್ಪನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ