AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಹತ್ತಲು ಪರದಾಡುತ್ತಿದ್ದ ವಿಶೇಷ ಚೇತನ ವ್ಯಕ್ತಿಗೆ ಹೆಗಲು ನೀಡಿದ ಪೊಲೀಸ್ : ಹೃದಯ ಸ್ಪರ್ಶಿ ವಿಡಿಯೋ

ಉತ್ತರಪ್ರದೇಶದಲ್ಲಿ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿಯ ವಿಡಿಯೋ ವೈರಲ್ ಆಗಿದೆ. ರೈಲು ಹತ್ತಲು ಕಷ್ಟಪಡುತ್ತಿದ್ದ ಅಂಗವಿಕಲ ವ್ಯಕ್ತಿಗೆ ಪೋಲಿಸ್ ಅಧಿಕಾರಿಯೊಬ್ಬರು ಸಹಾಯ ಮಾಡಿದ್ದಾರೆ. ಕರ್ತವ್ಯ ನಿರತರಾಗಿದ್ದ ಅಶ್ವನಿ ಕುಮಾರ್ ಎಂಬ ಪೊಲೀಸ್ ಅಧಿಕಾರಿ ವಿಶೇಷ ಚೇತನ ವ್ಯಕ್ತಿಯನ್ನು ಹೆಗಲ ಮೇಲೆ ಹಾಕಿಕೊಂಡು ರೈಲು ಹತ್ತಿಸಿದ್ದಾರೆ. ಈ ನಿಸ್ವಾರ್ಥ ಸೇವೆಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

ರೈಲು ಹತ್ತಲು ಪರದಾಡುತ್ತಿದ್ದ ವಿಶೇಷ ಚೇತನ ವ್ಯಕ್ತಿಗೆ ಹೆಗಲು ನೀಡಿದ ಪೊಲೀಸ್ : ಹೃದಯ ಸ್ಪರ್ಶಿ ವಿಡಿಯೋ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Oct 31, 2025 | 6:03 PM

Share

ಉತ್ತರಪ್ರದೇಶ, .31: ಪೊಲೀಸರ ನಿಸ್ವಾರ್ಥ ಸೇವೆಗೆ ಇದೊಂದು ವಿಡಿಯೋ ಸಾಕ್ಷಿ, ಉತ್ತರಪ್ರದೇಶದಲ್ಲಿ (UP police) ಮನುಷ್ಯತ್ವದ ಮೇಲೆ ಬೆಳಕು ಚೆಲ್ಲುವ ಘಟನೆಯೊಂದು ನಡೆದಿದೆ. ಯುಪಿಯ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕರ್ತವ್ಯದ ವೇಳೆ ಅಂಗವಿಕಲ ವ್ಯಕ್ತಿಗೆ ರೈಲು ಹತ್ತಲು ಸಹಾಯ ಮಾಡಿದ್ದಾರೆ. ಜನ ದಟ್ಟಣೆ ಇದ್ದ ರೈಲು ಹತ್ತಲು ಪರದಾಡುತ್ತಿದ್ದ ವಿಶೇಷ ಚೇತನ ವ್ಯಕ್ತಿಗೆ ಪೊಲೀಸ್​​ ಅಧಿಕಾರಿ ಸಹಾಯ ಮಾಡಿದ್ದಾರೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ಆಗಿದೆ. ಪೊಲೀಸ್​​ ಅಧಿಕಾರಿಯ ಕೆಲಸಕ್ಕೆ ಎಲ್ಲ ಕಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ. ಸ್ವಾರ್ಥ ಜಗತ್ತಿನಲ್ಲಿ ಇಂಥಹ ನಿಸ್ವಾರ್ಥ ಸೇವೆ ಧನ್ಯವಾದ ಹೇಳಲೇಬೇಕು ಎಂದು ನೆಟ್ಟಿಗರು ಹೇಳಿದ್ದಾರೆ.

ಈ ವೀಡಿಯೊದಲ್ಲಿ ಹೇಳಿರುವ ಪ್ರಕಾರ, ಪೊಲೀಸ್ ಅಧಿಕಾರಿ ಅಶ್ವನಿ ಕುಮಾರ್ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯದಲ್ಲಿದ್ದಾಗ, ವಿಶೇಷ ಚೇತನ ವ್ಯಕ್ತಿಯೊಬ್ಬರು ರೈಲ್ವೆ ನಿಲ್ದಾಣದ ಮೆಟ್ಟಿಲು ಇಳಿಯಲು ಕಷ್ಟ ಪಡುತ್ತಿದ್ದ ವೇಳೆ, ಪೊಲೀಸ್​​ ಅಧಿಕಾರಿಯೊಬ್ಬರು ವಿಶೇಷ ಚೇತನ ವ್ಯಕ್ತಿಯನ್ನು ವಿಚಾರಿಸಿ, ಹೆಗಲ ಮೇಲೆ ಹಾಕಿಕೊಂಡು ಅವರನ್ನು ರೈಲಿನ ಬಳಿ ಬಿಟ್ಟು ಬಂದಿದ್ದಾರೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆಗೆ ಕಾರಣವಾಗಿದೆ. ವಿಡಿಯೋವನ್ನು ಅವರು ತಮ್ಮ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಮೂರು ತಿಂಗಳಲ್ಲಿ 50 ಕೆಜಿ ತೂಕ ಇಳಿಸಿಕೊಂಡರೆ ಐಷಾರಾಮಿ ಪೋರ್ಷೆ ಕಾರು!

ವೈರಲ್ವಿಡಿಯೋ ಇಲ್ಲಿದೆ ನೋಡಿ:

ವಿಡಿಯೋದಲ್ಲಿ ಹೀಗೆ ಬರೆದುಕೊಂಡಿದ್ದಾರೆ. “ಹಣದಿಂದ ಮಾತ್ರವಲ್ಲ ಸಹಾಯ ಮಾಡುವುದು, ಕಾಳಜಿ ವಹಿಸುವ ಹೃದಯ ಬೇಕು, ಅದು ನಿಮ್ಮಲ್ಲಿ ಇದೆ. ಮಾನವೀಯತೆಗಿಂತ ದೊಡ್ಡದಲ್ಲಎಂದು ಬರೆದುಕೊಂಡಿದ್ದಾರೆ. ಬಳಕೆದಾರರು ಪೊಲೀಸರ ನಮ್ರತೆ ಮತ್ತು ಮಾನವೀಯತೆಯನ್ನು ಶ್ಲಾಘಿಸಿದ್ದು, ಇಂದಿನ ವೇಗದ ಜಗತ್ತಿನಲ್ಲಿ ಇಂಥಹ ದೃಶ್ಯಗಳು ಕಂಡು ಬರುವುದು ಅಪರೂಪ ಎಂದು ಹೇಳಿದ್ದಾರೆ. ಒಬ್ಬ ಬಳಕೆದಾರರು ಇದು ಶುದ್ಧ ಮಾನವೀಯತೆ, ನಿಮಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ಅಲ್ಲಿ ಅಷ್ಟು ಜನ ಇದ್ರು, ಯಾರು ಕೂಡ ಸಹಾಯಕ್ಕೆ ಬಂದಿಲ್ಲ, ಆದರೆ ನೀವು ದೇವರಂತೆ ಬಂದು ಸಹಾಯ ಮಾಡಿದನ್ನು ಯಾವತ್ತೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ನಿಮ್ಮಂತಹ ಜನರಿಂದಾಗಿ ಮಾನವೀಯತೆ ಇನ್ನೂ ಜೀವಂತವಾಗಿದೆ ಎಂದು ಹೇಳಿದ್ದಾರೆ.

ವೈರಲ್ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್