AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ನರ್ಸ್​, ವೈದ್ಯರ ಜಗಳ; ಕಪಾಳಮೋಕ್ಷ ಮಾಡಿ ನಿಂದಿಸಿದ ವಿಡಿಯೋ ವೈರಲ್​

ಆಸ್ಪತ್ರೆಯಲ್ಲಿ ವೈದ್ಯರು ಮತ್ತು ನರ್ಸ್​ ಮಧ್ಯೆ ಜಗಳ ಅತಿರೇಕಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ರಾಂಪುರ್​ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಆಸ್ಪತ್ರೆಯಲ್ಲಿ ನರ್ಸ್​, ವೈದ್ಯರ ಜಗಳ; ಕಪಾಳಮೋಕ್ಷ ಮಾಡಿ ನಿಂದಿಸಿದ ವಿಡಿಯೋ ವೈರಲ್​
ವೈದ್ಯರು ಮತ್ತು ನರ್ಸ್​ ನಡುವೆ ಜಗಳ.. ವೈದ್ವಿಯರಿಗೆ ನರ್ಸ್​ರಿಂದ ಕಪಾಳಮೋಕ್ಷ.. ವಿಡಿಯೋ ಆಯ್ತು ವೈರಲ್​
shruti hegde
|

Updated on:Apr 30, 2021 | 4:41 PM

Share

ಲಕ್ನೊ: ದೇಶದಲ್ಲಿ ಕೊವಿಡ್​ ಎರಡನೇ ಅಲೆಯ ಆರ್ಭಟ ಹೆಚ್ಚುತ್ತಿದೆ. ಆಸ್ಪತ್ರೆಯಲ್ಲಿ ವೈದ್ಯರು, ರೋಗಿಗಳು ದಣಿವಿಲ್ಲದೇ ಕೆಲಸ ಮಾಡುತ್ತಿದ್ದಾರೆ. ಪ್ರತಿನಿತ್ಯ ಆಸ್ಪತ್ರೆ ಸಿಬ್ಬಂದಿ ವಿರಾಮವಿಲ್ಲದೇ ಕೆಲಸ ಮಾಡುತ್ತಿರುವುದರಿಂದ ಮಾನಸಿಕವಾಗಿಯೂ ಒತ್ತಡಕ್ಕೆ ಸಿಲುಕಿದ್ದಾರೆ. ಇದರಿಂದಾಗಿ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ನರ್ಸ್​ ಮಧ್ಯೆ ಜಗಳ ಅತಿರೇಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಉತ್ತರಪ್ರದೇಶದ ರಾಂಪುರ್​ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಎಎನ್​ಐ ಹಂಚಿಕೊಂಡ 14 ನಿಮಿಷದ ವಿಡಿಯೋದಲ್ಲಿ, ಕಳೆದ ಸೋಮವಾರ ರಾಂಪುರ್​ ಜಿಲ್ಲಾ ಆಸ್ಪತ್ರೆಯಯಲ್ಲಿ ವೈದ್ಯರು ಮತ್ತು ನರ್ಸ್​ ಮಧ್ಯೆ ವಾದವಿವಾದ ಏರ್ಪಟ್ಟಿದೆ. ವಿಡಿಯೋದಲ್ಲಿ ಗಮನಿಸಿದಂತೆ ಇಬ್ಬರೂ ಕೂಡಾ ಒಬ್ಬರನ್ನೊಬ್ಬರು ನಿಂದಿಸಿಕೊಳ್ಳುತ್ತಾರೆ. ಆಸ್ಪತ್ರೆಯಲ್ಲಿ ಜೋರಾಗಿ ಕಿರುಚುತ್ತಾರೆ. ಇಬ್ಬರ ನಡುವಿನ ಜಗಳ ಅತಿರೇಕಕ್ಕೆ ಹೋಗಿ ಹಿಂಸಾತ್ಮಕ ತಿರುವು ಪಡೆದುಕೊಳ್ಳುತ್ತದೆ. ಜಗಳ ಪ್ರಾರಂಭವಾದಾಗ ಸ್ಥಳದಲ್ಲಿದ್ದ ಪೊಲೀಸರು​ ಹಾಜರಿದ್ದರೂ ಕೂಡಾ ಜಗಳವನ್ನು ನಿಲ್ಲಿಸದೇ ನಡೆಯುತ್ತಿರುವ ಘಟನೆಯನ್ನು ನೋಡುತ್ತಾ ಮೌನವಾಗಿದ್ದರು. ಇವರ ಜಗಳವನ್ನು ಕಂಡ ಆಸ್ಪತ್ರೆಯ ಇತರ ಸಿಬ್ಬಂದಿ ಜಗಳವನ್ನು ತಡೆಯಲು ಮುಂದಾಗಿದ್ದಾರೆ.

ವರದಿಯ ಪ್ರಕಾರ, ಆಸ್ಪತ್ರೆಯಲ್ಲಿ ದಾಖಲಾದ ರೋಗಿಯೊಬ್ಬರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದರು. ಈ ಕುರಿತಂತೆ ಪ್ರಮಾಣಪತ್ರವನ್ನು ನೀಡುವಂತೆ ಮೃತರ ಸಂಬಂಧಿಕರು ನರ್ಸ್​ ಬಳಿ ಕೇಳಿದ್ದಾರೆ. ಇದನ್ನು ವೈದ್ಯರಲ್ಲಿ ಹೇಳಿದಾಕ್ಷಣ ಲಿಖಿತ ರೂಪದಲ್ಲಿ ಕೊಡುವಂತೆ ವೈದ್ಯರು ಸಲಹೆ ನೀಡುತ್ತಾರೆ. ಇದನ್ನು ಕೇಳಿದಾಕ್ಷಣ ಕೋಪಗೊಂಡ ನರ್ಸ್​ ಕೋಪಗೊಳ್ಳುತ್ತಾರೆ. ಅಲ್ಲಿ ವೈದ್ಯರು ಮತ್ತು ನರ್ಸ್​ ನಡುವೆ ವಿವಾದ ಉಂಟಾಗುತ್ತದೆ. ವಾದ ವಿವಾದದ ಅತಿರೇಕದಲ್ಲಿ ನರ್ಸ್​, ವೈದ್ಯರಿಗೆ ಕಪಾಳಕ್ಕೆ ಹೊಡೆಯುವುದನ್ನು ವಿಡಿಯೋದಲ್ಲಿ ಹಮನಿಸಬಹುದು.

ರಾಂಪುರದ ಮ್ಯಾಜಿಸ್ಟ್ರೇಟ್​ ರಾಮ್ಜಿ ಮಿಶ್ರಾ ಮಾತನಾಡಿ, ನಾನು ಅವರಿಬ್ಬರೊಂದಿಗೂ ಮಾತನಾಡಿದ್ದೇನೆ. ಅವರಿಬ್ಬರೂ ಒತ್ತಡದಲ್ಲಿದ್ದರು. ಆಸ್ಪತ್ರೆಯಲ್ಲಿ ಇಬ್ಬರಿಗೂ ಹೆಚ್ಚಿನ ಹೊರೆಯಿತ್ತು. ಈ ಕುರಿತಂತೆ ತನಿಖೆ ನಡೆಸುತ್ತೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಐಪಿಎಸ್​ ಅಧಿಕಾರಿ ಈತನನ್ನು ಆಫ್ರಿಕಾದ ಬಾಬಾ ರಾಮ್​ದೇವ್​ ಎಂದಿದ್ದಾರೆ; ಏನಿರಬಹುದು ಈತನ ಸಾಹಸಗಾಥೆ? ವಿಡಿಯೋ ವೈರಲ್​

Published On - 4:36 pm, Fri, 30 April 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ