AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾ ಬರದಿದ್ದರೆ ಶಾಲೆಯೇನು ಮುಚ್ಚಿ ಹೋಗುವುದಿಲ್ಲ’ ಉತ್ತರ ಪ್ರದೇಶದ ಬಾಲಕನ ರಜಾಚೀಟಿ ವೈರಲ್

Uttar Pradesh : ‘ಜ್ವರ ನನ್ನನ್ನು ಸುಡುತ್ತಿದೆ, ಮೂಗು ಒಂದೇ ಸಮ ಇಳಿಯುತ್ತಿದೆ, ನಾಲ್ಕು ದಿನ ರಜೆ ಕೊಡಿ ಸಾರ್’ ಬುಂದೇಲುಖಂಡದ ಈ ಪೋರನ ನೇರವಂತಿಕೆಗೆ ನೆಟ್ಟಿಗರು ಭಲೇ ಎನ್ನುತ್ತಿದ್ದಾರೆ.

‘ನಾ ಬರದಿದ್ದರೆ ಶಾಲೆಯೇನು ಮುಚ್ಚಿ ಹೋಗುವುದಿಲ್ಲ’ ಉತ್ತರ ಪ್ರದೇಶದ ಬಾಲಕನ ರಜಾಚೀಟಿ ವೈರಲ್
UP school student’s hilarious leave application leaves
TV9 Web
| Edited By: ಶ್ರೀದೇವಿ ಕಳಸದ|

Updated on:Nov 09, 2022 | 6:32 PM

Share

Viral : ನಾವೆಲ್ಲರೂ ಚಿಕ್ಕಂದಿನಿಂದಲೂ ರಜಾಚೀಟಿಯನ್ನು ಬರೆಯುತ್ತ ಬಂದಿದ್ದೇವೆ. ನಮ್ಮ ನಮ್ಮ ತಿಳಿವಳಿಕೆಗೆ ತಕ್ಕಂತೆ ಬರೆಯುವ ಕ್ರಮ ಕೂಡ ಬದಲಾಗುತ್ತಾ ಬಂದಿದೆ. ಇದೀಗ ಉತ್ತರ ಪ್ರದೇಶದ ಶಾಲಾಬಾಲಕನೊಬ್ಬ ಬರೆದ ರಜಾಚೀಟಿ ವೈರಲ್ ಆಗುತ್ತಿದೆ. ಐಎಎಸ್ ಅಧಿಕಾರಿ ಅರ್ಪಿತ್ ವರ್ಮಾ ಈ ರಜಾ ಚೀಟಿಯನ್ನು ಟ್ವೀಟ್ ಮಾಡಿದ್ದಾರೆ. ಇದನ್ನು ಬರೆದ ವಿದ್ಯಾರ್ಥಿಯ ಹೆಸರು ಕಲುವಾ.

ತನಗೆ ಯಾಕೆ ರಜೆ ಬೇಕು ಮತ್ತು ತನ್ನ ಪರಿಸ್ಥಿತಿ ಏನು ಎಂಬುದನ್ನು ಈ ಚೀಟಿಯಲ್ಲಿ ಅವನು ವಿವರಿಸಿದ್ದಾನೆ. ಅವನು ಬರೆದ ರೀತಿ ಬಹಳ ಪ್ರಾಮಾಣಿಕ ಮತ್ತು ನೇರವಂತಿಕೆಯಿಂದ ಕೂಡಿದೆ. ‘ನಾನು ಜ್ವರ ಮತ್ತು ನೆಗಡಿಯಿಂದ ಬಳಲುತ್ತಿದ್ದೇನೆ. ಹಾಗಾಗಿ ನನಗೆ ನಾಲ್ಕು ದಿನಗಳ ರಜೆ ಬೇಕು. ನಾನು ಶಾಲೆಗೆ ಬರದಿದ್ದರೆ ಶಾಲೆ ಏನು ಮುಚ್ಚಿಹೋಗುವುದಿಲ್ಲ’ ಎನ್ನುವುದು ಈ ರಜಾಚೀಟಿಯ ಸಾರಾಂಶ.

10,000 ಜನರು ಈ ಪೋಸ್ಟ್​ ಅನ್ನು ಮೆಚ್ಚಿದ್ದಾರೆ. 1,200ಕ್ಕಿಂತಲೂ ಹೆಚ್ಚು ಜನ ರೀಟ್ವೀಟ್ ಮಾಡಿದ್ದಾರೆ. ಕಲುವಾ ಹೇಳಿದ್ದು ಸರಿ ಇದೆ, ಯಾರು ಬರದಿದ್ದರೂ ಯಾವ ಶಾಲೆಯೂ ಮುಚ್ಚುವುದಿಲ್ಲ ಎಂದಿದ್ದಾರೆ ಒಬ್ಬರು. ನೀನೇ ಬುಂದೇಲಖಂಡದ ಮಗ ಎಂದರೆ! ಎಂದಿದ್ದಾರೆ ಮಗದೊಬ್ಬರು. ಉತ್ತರಪ್ರದೇಶವರು ಯಾವಾಗಲೂ ಹೀಗೇ ನೇರ ಎಂದಿದ್ದಾರೆ ಇನ್ನೊಬ್ಬರು.

ನೀವು ಎಂದಾದರೂ ಹೀಗೆ ರಜಾಚೀಟಿ ಬರೆದಿದ್ದ ನೆನಪಿದೆಯಾ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:31 pm, Wed, 9 November 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್