AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾ ಬರದಿದ್ದರೆ ಶಾಲೆಯೇನು ಮುಚ್ಚಿ ಹೋಗುವುದಿಲ್ಲ’ ಉತ್ತರ ಪ್ರದೇಶದ ಬಾಲಕನ ರಜಾಚೀಟಿ ವೈರಲ್

Uttar Pradesh : ‘ಜ್ವರ ನನ್ನನ್ನು ಸುಡುತ್ತಿದೆ, ಮೂಗು ಒಂದೇ ಸಮ ಇಳಿಯುತ್ತಿದೆ, ನಾಲ್ಕು ದಿನ ರಜೆ ಕೊಡಿ ಸಾರ್’ ಬುಂದೇಲುಖಂಡದ ಈ ಪೋರನ ನೇರವಂತಿಕೆಗೆ ನೆಟ್ಟಿಗರು ಭಲೇ ಎನ್ನುತ್ತಿದ್ದಾರೆ.

‘ನಾ ಬರದಿದ್ದರೆ ಶಾಲೆಯೇನು ಮುಚ್ಚಿ ಹೋಗುವುದಿಲ್ಲ’ ಉತ್ತರ ಪ್ರದೇಶದ ಬಾಲಕನ ರಜಾಚೀಟಿ ವೈರಲ್
UP school student’s hilarious leave application leaves
TV9 Web
| Edited By: |

Updated on:Nov 09, 2022 | 6:32 PM

Share

Viral : ನಾವೆಲ್ಲರೂ ಚಿಕ್ಕಂದಿನಿಂದಲೂ ರಜಾಚೀಟಿಯನ್ನು ಬರೆಯುತ್ತ ಬಂದಿದ್ದೇವೆ. ನಮ್ಮ ನಮ್ಮ ತಿಳಿವಳಿಕೆಗೆ ತಕ್ಕಂತೆ ಬರೆಯುವ ಕ್ರಮ ಕೂಡ ಬದಲಾಗುತ್ತಾ ಬಂದಿದೆ. ಇದೀಗ ಉತ್ತರ ಪ್ರದೇಶದ ಶಾಲಾಬಾಲಕನೊಬ್ಬ ಬರೆದ ರಜಾಚೀಟಿ ವೈರಲ್ ಆಗುತ್ತಿದೆ. ಐಎಎಸ್ ಅಧಿಕಾರಿ ಅರ್ಪಿತ್ ವರ್ಮಾ ಈ ರಜಾ ಚೀಟಿಯನ್ನು ಟ್ವೀಟ್ ಮಾಡಿದ್ದಾರೆ. ಇದನ್ನು ಬರೆದ ವಿದ್ಯಾರ್ಥಿಯ ಹೆಸರು ಕಲುವಾ.

ತನಗೆ ಯಾಕೆ ರಜೆ ಬೇಕು ಮತ್ತು ತನ್ನ ಪರಿಸ್ಥಿತಿ ಏನು ಎಂಬುದನ್ನು ಈ ಚೀಟಿಯಲ್ಲಿ ಅವನು ವಿವರಿಸಿದ್ದಾನೆ. ಅವನು ಬರೆದ ರೀತಿ ಬಹಳ ಪ್ರಾಮಾಣಿಕ ಮತ್ತು ನೇರವಂತಿಕೆಯಿಂದ ಕೂಡಿದೆ. ‘ನಾನು ಜ್ವರ ಮತ್ತು ನೆಗಡಿಯಿಂದ ಬಳಲುತ್ತಿದ್ದೇನೆ. ಹಾಗಾಗಿ ನನಗೆ ನಾಲ್ಕು ದಿನಗಳ ರಜೆ ಬೇಕು. ನಾನು ಶಾಲೆಗೆ ಬರದಿದ್ದರೆ ಶಾಲೆ ಏನು ಮುಚ್ಚಿಹೋಗುವುದಿಲ್ಲ’ ಎನ್ನುವುದು ಈ ರಜಾಚೀಟಿಯ ಸಾರಾಂಶ.

10,000 ಜನರು ಈ ಪೋಸ್ಟ್​ ಅನ್ನು ಮೆಚ್ಚಿದ್ದಾರೆ. 1,200ಕ್ಕಿಂತಲೂ ಹೆಚ್ಚು ಜನ ರೀಟ್ವೀಟ್ ಮಾಡಿದ್ದಾರೆ. ಕಲುವಾ ಹೇಳಿದ್ದು ಸರಿ ಇದೆ, ಯಾರು ಬರದಿದ್ದರೂ ಯಾವ ಶಾಲೆಯೂ ಮುಚ್ಚುವುದಿಲ್ಲ ಎಂದಿದ್ದಾರೆ ಒಬ್ಬರು. ನೀನೇ ಬುಂದೇಲಖಂಡದ ಮಗ ಎಂದರೆ! ಎಂದಿದ್ದಾರೆ ಮಗದೊಬ್ಬರು. ಉತ್ತರಪ್ರದೇಶವರು ಯಾವಾಗಲೂ ಹೀಗೇ ನೇರ ಎಂದಿದ್ದಾರೆ ಇನ್ನೊಬ್ಬರು.

ನೀವು ಎಂದಾದರೂ ಹೀಗೆ ರಜಾಚೀಟಿ ಬರೆದಿದ್ದ ನೆನಪಿದೆಯಾ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:31 pm, Wed, 9 November 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್