AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : 20 ಸೆಕೆಂಡುಗಳಲ್ಲಿ 40 ಬಾರಿ ಮಹಿಳೆಯಿಂದ ಚಪ್ಪಲಿಸೇವೆ ಪಡೆದ ವ್ಯಕ್ತಿ

Molesting : ಕಿರುಕುಳ ನೀಡಿದ ವ್ಯಕ್ತಿಯನ್ನು ಹೀಗೆ ಸಾರ್ವಜನಿಕವಾಗಿ ಈ ಮಹಿಳೆ ಥಳಿಸಿದ್ದಕ್ಕೆ ನೆಟ್ಟಿಗರು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನೀವೇನಂತೀರಿ?

Viral Video : 20 ಸೆಕೆಂಡುಗಳಲ್ಲಿ 40 ಬಾರಿ ಮಹಿಳೆಯಿಂದ ಚಪ್ಪಲಿಸೇವೆ ಪಡೆದ ವ್ಯಕ್ತಿ
ಕಿರುಕುಳ ನೀಡಿದ ವ್ಯಕ್ತಿಯನ್ನು ಚಪ್ಪಲಿಯಿಂದ ಥಳಿಸುತ್ತಿರುವ ಮಹಿಳೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Sep 20, 2022 | 1:29 PM

Viral Video : ಪುರುಷನೊಬ್ಬ ತನಗೆ ಕಿರುಕುಳ ನೀಡಿದನೆಂದು ಆರೋಪಿಸಿದ ಮಹಿಳೆಯೊಬ್ಬಳು 20 ಸೆಕೆಂಡುಗಳ ಕಾಲ ಆತನನ್ನು 40 ಬಾರಿ ಚಪ್ಪಲಿಯಿಂದ ಥಳಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ದೃಶ್ಯವನ್ನು ಒಳಗೊಂಡ ವಿಡಿಯೋ ಈಗ ವೈರಲ್ ಆಗಿದೆ. ಕಿರುಕುಳ ನೀಡಿದ ವ್ಯಕ್ತಿ ನೆಲದ ಮೇಲೆ ತಲೆ ತಗ್ಗಿಸಿಕೊಂಡು ಕುಳಿತಿದ್ದಾನೆ. ಕೋಪಗೊಂಡ ಮಹಿಳೆ ತನ್ನೆರಡೂ ಚಪ್ಪಲಿಗಳಿಂದ ಆಕ್ರೋಶಭರಿತಳಾಗಿ ಸತತವಾಗಿ ಹೊಡೆಯುತ್ತಿದ್ದಾಳೆ. ನ್ಯೂಸ್​ 18 ವರದಿ ಪ್ರಕಾರ, ಉತ್ತರ ಪ್ರದೇಶದ ಜಾಲೌನ್ ಜಿಲ್ಲೆಯ ಉರಯೀ ನಗರಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಮಹಿಳೆಯನ್ನು ಚುಡಾಯಿಸಿದ್ದಾನೆ ಎನ್ನುವುದು ತಿಳಿದು ಬಂದಿದೆ.

ಹೀಗೆ ಸರಿಯಾಗಿ ಥಳಿಸಿದ ನಂತರ ಈ ವ್ಯಕ್ತಿಯನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ವಿಡಿಯೋ ಈತನಕ 50,000 ಕ್ಕೂ ಹೆಚ್ಚು ಜನರಿಂದ ವೀಕ್ಷಿಸಲ್ಪಟ್ಟಿದೆ. 530 ಕ್ಕೂ ಹೆಚ್ಚು ಮರುಟ್ವೀಟ್​ ಹೊಂದಿದೆ. ಅನೇಕ ನೆಟ್ಟಿಗರು, ಚುಡಾಯಿಸಿದ್ದಕ್ಕೆ ಸರಿಯಾದ ಶಿಕ್ಷೆಯಾಗಿದೆ ಈ ವ್ಯಕ್ತಿಗೆ. ಮಹಿಳೆ ಹೀಗೆ ಅವನಿಗೆ ಚಪ್ಪಲಿಯಿಂದ ಹೊಡೆದಿರುವುದು ಸರಿ ಇದೆ ಎಂದಿದ್ದಾರೆ. ಜನ್ಮದಲ್ಲಿ ಇನ್ನು ಯಾವತ್ತೂ ಈ ವ್ಯಕ್ತಿ ಇಂಥ ಕೆಲಸ ಮಾಡಲಾರ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಪ್ರತಿಯೊಬ್ಬ ಮಹಿಳೆಯೂ ಇಂಥ ಧೈರ್ಯ ತೋರಬೇಕು. ಆಗ ಮಾತ್ರ ಅತ್ಯಾಚಾರ, ಕಿರುಕುಳ ಸಮಸ್ಯೆಗಳಿಗೆ ಉತ್ತರ ದೊರೆಯುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ.

ಏನೇ ಆದರೂ ಈ ಮಹಿಳೆ ಹೀಗೆ ಮಾಡಬಾರದಿತ್ತು. ಕಾನೂನಿಗೆ ಈ ವಿಷಯ ಬಿಡಬೇಕು ಎಂದು ಮಗದೊಬ್ಬರು ಹೇಳಿದ್ಧಾರೆ.

ಅನುಭವಿಸಿದವರಿಗೇ ಗೊತ್ತು ಆ ಪರಿಸ್ಥಿತಿ!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:29 pm, Tue, 20 September 22

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ