AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : 20 ಸೆಕೆಂಡುಗಳಲ್ಲಿ 40 ಬಾರಿ ಮಹಿಳೆಯಿಂದ ಚಪ್ಪಲಿಸೇವೆ ಪಡೆದ ವ್ಯಕ್ತಿ

Molesting : ಕಿರುಕುಳ ನೀಡಿದ ವ್ಯಕ್ತಿಯನ್ನು ಹೀಗೆ ಸಾರ್ವಜನಿಕವಾಗಿ ಈ ಮಹಿಳೆ ಥಳಿಸಿದ್ದಕ್ಕೆ ನೆಟ್ಟಿಗರು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನೀವೇನಂತೀರಿ?

Viral Video : 20 ಸೆಕೆಂಡುಗಳಲ್ಲಿ 40 ಬಾರಿ ಮಹಿಳೆಯಿಂದ ಚಪ್ಪಲಿಸೇವೆ ಪಡೆದ ವ್ಯಕ್ತಿ
ಕಿರುಕುಳ ನೀಡಿದ ವ್ಯಕ್ತಿಯನ್ನು ಚಪ್ಪಲಿಯಿಂದ ಥಳಿಸುತ್ತಿರುವ ಮಹಿಳೆ
TV9 Web
| Updated By: ಶ್ರೀದೇವಿ ಕಳಸದ|

Updated on:Sep 20, 2022 | 1:29 PM

Share

Viral Video : ಪುರುಷನೊಬ್ಬ ತನಗೆ ಕಿರುಕುಳ ನೀಡಿದನೆಂದು ಆರೋಪಿಸಿದ ಮಹಿಳೆಯೊಬ್ಬಳು 20 ಸೆಕೆಂಡುಗಳ ಕಾಲ ಆತನನ್ನು 40 ಬಾರಿ ಚಪ್ಪಲಿಯಿಂದ ಥಳಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ದೃಶ್ಯವನ್ನು ಒಳಗೊಂಡ ವಿಡಿಯೋ ಈಗ ವೈರಲ್ ಆಗಿದೆ. ಕಿರುಕುಳ ನೀಡಿದ ವ್ಯಕ್ತಿ ನೆಲದ ಮೇಲೆ ತಲೆ ತಗ್ಗಿಸಿಕೊಂಡು ಕುಳಿತಿದ್ದಾನೆ. ಕೋಪಗೊಂಡ ಮಹಿಳೆ ತನ್ನೆರಡೂ ಚಪ್ಪಲಿಗಳಿಂದ ಆಕ್ರೋಶಭರಿತಳಾಗಿ ಸತತವಾಗಿ ಹೊಡೆಯುತ್ತಿದ್ದಾಳೆ. ನ್ಯೂಸ್​ 18 ವರದಿ ಪ್ರಕಾರ, ಉತ್ತರ ಪ್ರದೇಶದ ಜಾಲೌನ್ ಜಿಲ್ಲೆಯ ಉರಯೀ ನಗರಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಮಹಿಳೆಯನ್ನು ಚುಡಾಯಿಸಿದ್ದಾನೆ ಎನ್ನುವುದು ತಿಳಿದು ಬಂದಿದೆ.

ಹೀಗೆ ಸರಿಯಾಗಿ ಥಳಿಸಿದ ನಂತರ ಈ ವ್ಯಕ್ತಿಯನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ವಿಡಿಯೋ ಈತನಕ 50,000 ಕ್ಕೂ ಹೆಚ್ಚು ಜನರಿಂದ ವೀಕ್ಷಿಸಲ್ಪಟ್ಟಿದೆ. 530 ಕ್ಕೂ ಹೆಚ್ಚು ಮರುಟ್ವೀಟ್​ ಹೊಂದಿದೆ. ಅನೇಕ ನೆಟ್ಟಿಗರು, ಚುಡಾಯಿಸಿದ್ದಕ್ಕೆ ಸರಿಯಾದ ಶಿಕ್ಷೆಯಾಗಿದೆ ಈ ವ್ಯಕ್ತಿಗೆ. ಮಹಿಳೆ ಹೀಗೆ ಅವನಿಗೆ ಚಪ್ಪಲಿಯಿಂದ ಹೊಡೆದಿರುವುದು ಸರಿ ಇದೆ ಎಂದಿದ್ದಾರೆ. ಜನ್ಮದಲ್ಲಿ ಇನ್ನು ಯಾವತ್ತೂ ಈ ವ್ಯಕ್ತಿ ಇಂಥ ಕೆಲಸ ಮಾಡಲಾರ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಪ್ರತಿಯೊಬ್ಬ ಮಹಿಳೆಯೂ ಇಂಥ ಧೈರ್ಯ ತೋರಬೇಕು. ಆಗ ಮಾತ್ರ ಅತ್ಯಾಚಾರ, ಕಿರುಕುಳ ಸಮಸ್ಯೆಗಳಿಗೆ ಉತ್ತರ ದೊರೆಯುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ.

ಏನೇ ಆದರೂ ಈ ಮಹಿಳೆ ಹೀಗೆ ಮಾಡಬಾರದಿತ್ತು. ಕಾನೂನಿಗೆ ಈ ವಿಷಯ ಬಿಡಬೇಕು ಎಂದು ಮಗದೊಬ್ಬರು ಹೇಳಿದ್ಧಾರೆ.

ಅನುಭವಿಸಿದವರಿಗೇ ಗೊತ್ತು ಆ ಪರಿಸ್ಥಿತಿ!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:29 pm, Tue, 20 September 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ