AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : 20 ಸೆಕೆಂಡುಗಳಲ್ಲಿ 40 ಬಾರಿ ಮಹಿಳೆಯಿಂದ ಚಪ್ಪಲಿಸೇವೆ ಪಡೆದ ವ್ಯಕ್ತಿ

Molesting : ಕಿರುಕುಳ ನೀಡಿದ ವ್ಯಕ್ತಿಯನ್ನು ಹೀಗೆ ಸಾರ್ವಜನಿಕವಾಗಿ ಈ ಮಹಿಳೆ ಥಳಿಸಿದ್ದಕ್ಕೆ ನೆಟ್ಟಿಗರು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನೀವೇನಂತೀರಿ?

Viral Video : 20 ಸೆಕೆಂಡುಗಳಲ್ಲಿ 40 ಬಾರಿ ಮಹಿಳೆಯಿಂದ ಚಪ್ಪಲಿಸೇವೆ ಪಡೆದ ವ್ಯಕ್ತಿ
ಕಿರುಕುಳ ನೀಡಿದ ವ್ಯಕ್ತಿಯನ್ನು ಚಪ್ಪಲಿಯಿಂದ ಥಳಿಸುತ್ತಿರುವ ಮಹಿಳೆ
TV9 Web
| Edited By: ಶ್ರೀದೇವಿ ಕಳಸದ|

Updated on:Sep 20, 2022 | 1:29 PM

Share

Viral Video : ಪುರುಷನೊಬ್ಬ ತನಗೆ ಕಿರುಕುಳ ನೀಡಿದನೆಂದು ಆರೋಪಿಸಿದ ಮಹಿಳೆಯೊಬ್ಬಳು 20 ಸೆಕೆಂಡುಗಳ ಕಾಲ ಆತನನ್ನು 40 ಬಾರಿ ಚಪ್ಪಲಿಯಿಂದ ಥಳಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ದೃಶ್ಯವನ್ನು ಒಳಗೊಂಡ ವಿಡಿಯೋ ಈಗ ವೈರಲ್ ಆಗಿದೆ. ಕಿರುಕುಳ ನೀಡಿದ ವ್ಯಕ್ತಿ ನೆಲದ ಮೇಲೆ ತಲೆ ತಗ್ಗಿಸಿಕೊಂಡು ಕುಳಿತಿದ್ದಾನೆ. ಕೋಪಗೊಂಡ ಮಹಿಳೆ ತನ್ನೆರಡೂ ಚಪ್ಪಲಿಗಳಿಂದ ಆಕ್ರೋಶಭರಿತಳಾಗಿ ಸತತವಾಗಿ ಹೊಡೆಯುತ್ತಿದ್ದಾಳೆ. ನ್ಯೂಸ್​ 18 ವರದಿ ಪ್ರಕಾರ, ಉತ್ತರ ಪ್ರದೇಶದ ಜಾಲೌನ್ ಜಿಲ್ಲೆಯ ಉರಯೀ ನಗರಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಮಹಿಳೆಯನ್ನು ಚುಡಾಯಿಸಿದ್ದಾನೆ ಎನ್ನುವುದು ತಿಳಿದು ಬಂದಿದೆ.

ಹೀಗೆ ಸರಿಯಾಗಿ ಥಳಿಸಿದ ನಂತರ ಈ ವ್ಯಕ್ತಿಯನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ವಿಡಿಯೋ ಈತನಕ 50,000 ಕ್ಕೂ ಹೆಚ್ಚು ಜನರಿಂದ ವೀಕ್ಷಿಸಲ್ಪಟ್ಟಿದೆ. 530 ಕ್ಕೂ ಹೆಚ್ಚು ಮರುಟ್ವೀಟ್​ ಹೊಂದಿದೆ. ಅನೇಕ ನೆಟ್ಟಿಗರು, ಚುಡಾಯಿಸಿದ್ದಕ್ಕೆ ಸರಿಯಾದ ಶಿಕ್ಷೆಯಾಗಿದೆ ಈ ವ್ಯಕ್ತಿಗೆ. ಮಹಿಳೆ ಹೀಗೆ ಅವನಿಗೆ ಚಪ್ಪಲಿಯಿಂದ ಹೊಡೆದಿರುವುದು ಸರಿ ಇದೆ ಎಂದಿದ್ದಾರೆ. ಜನ್ಮದಲ್ಲಿ ಇನ್ನು ಯಾವತ್ತೂ ಈ ವ್ಯಕ್ತಿ ಇಂಥ ಕೆಲಸ ಮಾಡಲಾರ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಪ್ರತಿಯೊಬ್ಬ ಮಹಿಳೆಯೂ ಇಂಥ ಧೈರ್ಯ ತೋರಬೇಕು. ಆಗ ಮಾತ್ರ ಅತ್ಯಾಚಾರ, ಕಿರುಕುಳ ಸಮಸ್ಯೆಗಳಿಗೆ ಉತ್ತರ ದೊರೆಯುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ.

ಏನೇ ಆದರೂ ಈ ಮಹಿಳೆ ಹೀಗೆ ಮಾಡಬಾರದಿತ್ತು. ಕಾನೂನಿಗೆ ಈ ವಿಷಯ ಬಿಡಬೇಕು ಎಂದು ಮಗದೊಬ್ಬರು ಹೇಳಿದ್ಧಾರೆ.

ಅನುಭವಿಸಿದವರಿಗೇ ಗೊತ್ತು ಆ ಪರಿಸ್ಥಿತಿ!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:29 pm, Tue, 20 September 22

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್