AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಭಾರೀ ಮಳೆಗೆ ತೋಟ ಮುಳುಗಿದರೂ ತಿಳಿಯಾಗಿ ಸ್ವಚ್ಛಂದವಾಗಿರುವ ಬಾವಿ ನೀರು; ಪ್ರಕೃತಿಯ ವಿಶೇಷತೆಯೇ ಇದಲ್ಲವೇ….

ಪ್ರಕೃತಿಯ ಮಡಿಲಲ್ಲಿ ನಡೆಯುವ ಕೆಲವೊಂದು ವಿಸ್ಮಯ ಸಂಗತಿಗಳು ನಮ್ಮನ್ನು ರೋಮಾಂಚನಗೊಳಿಸುತ್ತದೆ. ಇದೀಗ ಅಂತಹದೊಂದು ರೋಮಾಂಚನಕಾರಿ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ಭಾರೀ ಮಳೆಯಿಂದ ನದಿ ತುಂಬಿ ಹರಿದು ಆ ಪ್ರವಾಹದ ನೀರಿನಿಂದ ತೋಟ ಮುಳುಗಿದರೂ, ಆ ತೋಟದಲ್ಲಿ ಇರುವಂತಹ ಬಾವಿಯ ನೀರು ಮಾತ್ರ ತಿಳಿಯಾಗಿಯೇ ಇದೆ. ಈ ಅದ್ಭುತ ದೃಶ್ಯ ನೋಡುಗರಲ್ಲಿ ಅಚ್ಚರಿಯನ್ನು ಉಂಟು ಮಾಡಿದೆ.

Viral Video: ಭಾರೀ ಮಳೆಗೆ ತೋಟ ಮುಳುಗಿದರೂ ತಿಳಿಯಾಗಿ ಸ್ವಚ್ಛಂದವಾಗಿರುವ ಬಾವಿ ನೀರು;  ಪ್ರಕೃತಿಯ ವಿಶೇಷತೆಯೇ ಇದಲ್ಲವೇ….
ಮಾಲಾಶ್ರೀ ಅಂಚನ್​
| Edited By: |

Updated on: Jul 21, 2024 | 2:59 PM

Share

ಈ ಬಾರೀ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮುಂಗಾರು ಆರ್ಭಟಕ್ಕೆ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಹಲವಾರು ಸಾವು ನೋವುಗಳು ಕೂಡಾ ಸಂಭವಿಸಿದೆ. ಇನ್ನೂ ಮಳೆಗಾಲದಲ್ಲಿ ನದಿ-ಹೊಳೆ ನೀರು ಕೆಸರು ಬಣ್ಣಕ್ಕೆ ತಿರುಗುವುದು ಸರ್ವೆಸಾಮಾನ್ಯ. ಅಷ್ಟೇ ಅಲ್ಲದೆ ಬಾವಿ ನೀರು ಕೂಡಾ ಕೊಂಚ ಕೆಸರು ಬಣ್ಣಕ್ಕೆ ತಿರುಗುತ್ತವೆ. ಅಂತದ್ರಲ್ಲಿ ಇಲ್ಲೊಂದು ವಿಸ್ಮಯ ನಡೆದಿದ್ದು, ಭಾರೀ ಮಳೆಗೆ ನದಿ ಹೊಳೆ ತುಂಬಿ ಹರಿದು ತೋಟ ಮುಳುಗಿದರೂ, ಆ ತೋಟದಲ್ಲಿರುವ ಬಾವಿ ನೀರಿಗೆ ಕೆಸರು ನೀರು ಸೋಕದೆ, ಆ ನೀರು ಸ್ವಚ್ಛಂದವಾಗಿ, ತಿಳಿಯಾಗಿಯೇ ಇತ್ತು. ಈ ಅದ್ಭುತ ದೃಶ್ಯ ನೋಡುಗರಲ್ಲಿ ಅಚ್ಚರಿಯನ್ನು ಉಂಟು ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬೆಳ್ಳಿಪ್ಪಾಡಿ ಎಂಬಲ್ಲಿನ ಕೂಟೇಲು ಬಳಿ ಈ ಅಪರೂಪದ ದೃಶ್ಯ ನೋಡ ಸಿಕ್ಕಿದ್ದು, ಪ್ರಕೃತಿಯ ಅದ್ಭುತವನ್ನು ಮನ್ಮಥ ಶೆಟ್ಟಿ ಎಂಬವರು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಈ ಕುರಿತ ಪೋಸ್ಟ್‌ ಒಂದನ್ನು nammabillaver ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಆಗುಂಬೆಯಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪ; ಮೈ ಜುಮ್ಮೆನಿಸುವಂತಿದೆ ರಕ್ಷಣಾ ಕಾರ್ಯ

ವೈರಲ್‌ ವಿಡಿಯೋದಲ್ಲಿ ಭಾರೀ ಮಳೆಯಿಂದ ನದಿ ಹೊಳೆ ತುಂಬಿ ಹರಿದು ಅಡಿಕೆ ತೋಟ ಮುಳುಗಿದರೂ, ಅಲ್ಲಿದ್ದ ಬಾವಿಗೆ ತುಂಬಿದ ಬಾವಿಗೆ ಒಂದು ಚೂರು ಕೆಸರು ನೀರು ತಾಕದೆ, ಬಾವಿ ನೀರು ತಿಳಿಯಾಗಿ ಸ್ವಚ್ಛಂದವಾಗಿರುವ ಅದ್ಭುತ ದೃಶ್ಯವನ್ನು ಕಾಣಬಹುದು. ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 19 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಪ್ರಕೃತಿಯ ವಿಸ್ಮಯ ನೋಡುಗರನ್ನು ಅಚ್ಚರಿಗೊಳಿಸಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್