AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಮೇಲಿನ ಕೋಪಕ್ಕೆ ರಸ್ತೆಬದಿ ನಿಲ್ಲಿಸಿದ್ದ 20 ಕಾರುಗಳ ಗಾಜು ಹೊಡೆದು ಕೋಪ ತೀರಿಸಿಕೊಂಡ ಪತಿರಾಯ

ಪತ್ನಿಯೊಂದಿಗೆ ಜಗಳವಾಡಿ ಮನೆಯಿಂದ ಹೊರಬಂದ ಪತಿರಾಯ, ರಸ್ತೆಬದಿ ನಿಲ್ಲಿಸಿದ್ದ ಸುಮಾರು 20 ಕಾರುಗಳ ಗಾಜು ಹೊಡೆಯುವ ಮೂಲಕ ತನ್ನ ಪತ್ನಿ ಮೇಲಿರುವ ಕೋಪವನ್ನು ತೀರಿಸಿಕೊಂಡಿದ್ದಾನೆ. ವರದಿಯ ಪ್ರಕಾರ, ಈ ಎಲ್ಲಾ ವಾಹನಗಳನ್ನು ಚೆನ್ನೈನ ಕೊಳತ್ತೂರ್‌ನಲ್ಲಿರುವ ಸೆಕೆಂಡ್ ಹ್ಯಾಂಡ್ ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿತ್ತು ಎಂದು ತಿಳಿದುಬಂದಿದೆ.

ಪತ್ನಿಯ ಮೇಲಿನ ಕೋಪಕ್ಕೆ ರಸ್ತೆಬದಿ ನಿಲ್ಲಿಸಿದ್ದ 20 ಕಾರುಗಳ ಗಾಜು ಹೊಡೆದು ಕೋಪ ತೀರಿಸಿಕೊಂಡ ಪತಿರಾಯ
Viral News
ಅಕ್ಷತಾ ವರ್ಕಾಡಿ
|

Updated on: Dec 22, 2023 | 11:56 AM

Share

ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಎಂಬ ಮಾತಿಗೆ. ಇದೀಗಾ ಅಂತದ್ದೇ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಆದರೆ ಇಲ್ಲಿ ಬಡವಾಗಿದ್ದು ಕೂಸಲ್ಲ, ಬದಲಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮಾಲೀಕರು.  ಪತ್ನಿಯೊಂದಿಗೆ ಜಗಳವಾಡಿ ಮನೆಯಿಂದ ಹೊರಬಂದ ಪತಿರಾಯ, ರಸ್ತೆಬದಿ ನಿಲ್ಲಿಸಿದ್ದ ಸುಮಾರು 20 ಕಾರುಗಳ ಗಾಜು ಹೊಡೆಯುವ ಮೂಲಕ ತನ್ನ ಪತ್ನಿ ಮೇಲಿರುವ ಕೋಪವನ್ನು ಈ ರೀತಿಯಾಗಿ ತೀರಿಸಿಕೊಂಡಿದ್ದಾನೆ. ವರದಿಯ ಪ್ರಕಾರ, ಈ ಎಲ್ಲಾ ವಾಹನಗಳನ್ನು ಚೆನ್ನೈನ ಕೊಳತ್ತೂರ್‌ನಲ್ಲಿರುವ ಸೆಕೆಂಡ್ ಹ್ಯಾಂಡ್ ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿತ್ತು ಮತ್ತು ಆ ವ್ಯಕ್ತಿಯ ಮನೆ ಆ ಶೋರೂಮ್ ಬಳಿ ಇತ್ತು. ಸೋಮವಾರ ಬೆಳಗ್ಗೆ ವಾಹನಗಳ ಇಂತಹ ಸ್ಥಿತಿ ಕಂಡು ಶೋರೂಂ ಮಾಲೀಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಾಗುತ್ತಿದ್ದಂತೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಪ್ರದೇಶದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದು ತನಿಖೆ ಆರಂಭಿಸಿದ್ದು, ವ್ಯಕ್ತಿಯ ವಿಕೃತಿ ಮೆರೆದಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬುಬಾಲನ್ ಎಂದು ಗುರುತಿಸಲಾಗಿದ್ದು, ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದಲ್ಲದೇ ಈ ವ್ಯಕ್ತಿ ನಗರದ ಡಿ ಅಡಿಕ್ಷನ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆ ನಡೆಯುವ ಎರಡು ದಿನಗಳ ಹಿಂದಷ್ಟೇ ಅಲ್ಲಿಂದ ಬಿಡುಗಡೆಗೊಂಡಿರುವುದು ಪೊಲೀಸರಿಗೆ ತನಿಖೆಯ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ:  3000 ವರ್ಷಗಳಷ್ಟು ಹಳೆಯದಾದ ವಿಗ್ರಹದಲ್ಲಿ QR ಕೋಡ್ ಪತ್ತೆ; ಫೋಟೋ ವೈರಲ್​​

ಪೊಲೀಸರು ಬುಬಾಲನ್‌ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ, ನನ್ನ ಹೆಂಡತಿ ನನಗೆ ಮೋಸ ಮಾಡುತ್ತಿದ್ದಾಳೆ ಎಂಬ ಅನುಮಾನದಿಂದ ಆ ದಿನ ಹೆಂಡತಿಯೊಂದಿಗೆ ಜಗಳವಾಡಿದ್ದನು. ಈ ವಿಚಾರವಾಗಿ ಆಕೆಯನ್ನು ಪ್ರಶ್ನಿಸಿದಾಗ ಆಕೆ ನನ್ನೊಂದಿಗೆ ಜಗಳವಾಡಿದಳು. ಇದರಿಂದ ಕೋಪಗೊಂಡು ಹೊರಗೆ ನಿಲ್ಲಿಸಿದ್ದ ಎಲ್ಲಾ ವಾಹನಗಳನ್ನು ಒಡೆದು ಹಾಕಿದೆ ಎಂದು ಹೇಳಿಕೊಂಡಿದ್ದಾನೆ. ಸದ್ಯ ಈ ವ್ಯಕ್ತಿ ಪೊಲೀಸರ ವಶದಲ್ಲಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ತೀರ್ಪು ಇನ್ನಷ್ಟೇ ಬರಬೇಕಿದೆ.

ಮತ್ತಷ್ಟು ವೈರಲ್ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ