AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಮೇಲಿನ ಕೋಪಕ್ಕೆ ರಸ್ತೆಬದಿ ನಿಲ್ಲಿಸಿದ್ದ 20 ಕಾರುಗಳ ಗಾಜು ಹೊಡೆದು ಕೋಪ ತೀರಿಸಿಕೊಂಡ ಪತಿರಾಯ

ಪತ್ನಿಯೊಂದಿಗೆ ಜಗಳವಾಡಿ ಮನೆಯಿಂದ ಹೊರಬಂದ ಪತಿರಾಯ, ರಸ್ತೆಬದಿ ನಿಲ್ಲಿಸಿದ್ದ ಸುಮಾರು 20 ಕಾರುಗಳ ಗಾಜು ಹೊಡೆಯುವ ಮೂಲಕ ತನ್ನ ಪತ್ನಿ ಮೇಲಿರುವ ಕೋಪವನ್ನು ತೀರಿಸಿಕೊಂಡಿದ್ದಾನೆ. ವರದಿಯ ಪ್ರಕಾರ, ಈ ಎಲ್ಲಾ ವಾಹನಗಳನ್ನು ಚೆನ್ನೈನ ಕೊಳತ್ತೂರ್‌ನಲ್ಲಿರುವ ಸೆಕೆಂಡ್ ಹ್ಯಾಂಡ್ ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿತ್ತು ಎಂದು ತಿಳಿದುಬಂದಿದೆ.

ಪತ್ನಿಯ ಮೇಲಿನ ಕೋಪಕ್ಕೆ ರಸ್ತೆಬದಿ ನಿಲ್ಲಿಸಿದ್ದ 20 ಕಾರುಗಳ ಗಾಜು ಹೊಡೆದು ಕೋಪ ತೀರಿಸಿಕೊಂಡ ಪತಿರಾಯ
Viral News
ಅಕ್ಷತಾ ವರ್ಕಾಡಿ
|

Updated on: Dec 22, 2023 | 11:56 AM

Share

ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಎಂಬ ಮಾತಿಗೆ. ಇದೀಗಾ ಅಂತದ್ದೇ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಆದರೆ ಇಲ್ಲಿ ಬಡವಾಗಿದ್ದು ಕೂಸಲ್ಲ, ಬದಲಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮಾಲೀಕರು.  ಪತ್ನಿಯೊಂದಿಗೆ ಜಗಳವಾಡಿ ಮನೆಯಿಂದ ಹೊರಬಂದ ಪತಿರಾಯ, ರಸ್ತೆಬದಿ ನಿಲ್ಲಿಸಿದ್ದ ಸುಮಾರು 20 ಕಾರುಗಳ ಗಾಜು ಹೊಡೆಯುವ ಮೂಲಕ ತನ್ನ ಪತ್ನಿ ಮೇಲಿರುವ ಕೋಪವನ್ನು ಈ ರೀತಿಯಾಗಿ ತೀರಿಸಿಕೊಂಡಿದ್ದಾನೆ. ವರದಿಯ ಪ್ರಕಾರ, ಈ ಎಲ್ಲಾ ವಾಹನಗಳನ್ನು ಚೆನ್ನೈನ ಕೊಳತ್ತೂರ್‌ನಲ್ಲಿರುವ ಸೆಕೆಂಡ್ ಹ್ಯಾಂಡ್ ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿತ್ತು ಮತ್ತು ಆ ವ್ಯಕ್ತಿಯ ಮನೆ ಆ ಶೋರೂಮ್ ಬಳಿ ಇತ್ತು. ಸೋಮವಾರ ಬೆಳಗ್ಗೆ ವಾಹನಗಳ ಇಂತಹ ಸ್ಥಿತಿ ಕಂಡು ಶೋರೂಂ ಮಾಲೀಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಾಗುತ್ತಿದ್ದಂತೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಪ್ರದೇಶದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದು ತನಿಖೆ ಆರಂಭಿಸಿದ್ದು, ವ್ಯಕ್ತಿಯ ವಿಕೃತಿ ಮೆರೆದಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬುಬಾಲನ್ ಎಂದು ಗುರುತಿಸಲಾಗಿದ್ದು, ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದಲ್ಲದೇ ಈ ವ್ಯಕ್ತಿ ನಗರದ ಡಿ ಅಡಿಕ್ಷನ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆ ನಡೆಯುವ ಎರಡು ದಿನಗಳ ಹಿಂದಷ್ಟೇ ಅಲ್ಲಿಂದ ಬಿಡುಗಡೆಗೊಂಡಿರುವುದು ಪೊಲೀಸರಿಗೆ ತನಿಖೆಯ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ:  3000 ವರ್ಷಗಳಷ್ಟು ಹಳೆಯದಾದ ವಿಗ್ರಹದಲ್ಲಿ QR ಕೋಡ್ ಪತ್ತೆ; ಫೋಟೋ ವೈರಲ್​​

ಪೊಲೀಸರು ಬುಬಾಲನ್‌ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ, ನನ್ನ ಹೆಂಡತಿ ನನಗೆ ಮೋಸ ಮಾಡುತ್ತಿದ್ದಾಳೆ ಎಂಬ ಅನುಮಾನದಿಂದ ಆ ದಿನ ಹೆಂಡತಿಯೊಂದಿಗೆ ಜಗಳವಾಡಿದ್ದನು. ಈ ವಿಚಾರವಾಗಿ ಆಕೆಯನ್ನು ಪ್ರಶ್ನಿಸಿದಾಗ ಆಕೆ ನನ್ನೊಂದಿಗೆ ಜಗಳವಾಡಿದಳು. ಇದರಿಂದ ಕೋಪಗೊಂಡು ಹೊರಗೆ ನಿಲ್ಲಿಸಿದ್ದ ಎಲ್ಲಾ ವಾಹನಗಳನ್ನು ಒಡೆದು ಹಾಕಿದೆ ಎಂದು ಹೇಳಿಕೊಂಡಿದ್ದಾನೆ. ಸದ್ಯ ಈ ವ್ಯಕ್ತಿ ಪೊಲೀಸರ ವಶದಲ್ಲಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ತೀರ್ಪು ಇನ್ನಷ್ಟೇ ಬರಬೇಕಿದೆ.

ಮತ್ತಷ್ಟು ವೈರಲ್ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ