ಪತ್ನಿಯ ಮೇಲಿನ ಕೋಪಕ್ಕೆ ರಸ್ತೆಬದಿ ನಿಲ್ಲಿಸಿದ್ದ 20 ಕಾರುಗಳ ಗಾಜು ಹೊಡೆದು ಕೋಪ ತೀರಿಸಿಕೊಂಡ ಪತಿರಾಯ

ಪತ್ನಿಯೊಂದಿಗೆ ಜಗಳವಾಡಿ ಮನೆಯಿಂದ ಹೊರಬಂದ ಪತಿರಾಯ, ರಸ್ತೆಬದಿ ನಿಲ್ಲಿಸಿದ್ದ ಸುಮಾರು 20 ಕಾರುಗಳ ಗಾಜು ಹೊಡೆಯುವ ಮೂಲಕ ತನ್ನ ಪತ್ನಿ ಮೇಲಿರುವ ಕೋಪವನ್ನು ತೀರಿಸಿಕೊಂಡಿದ್ದಾನೆ. ವರದಿಯ ಪ್ರಕಾರ, ಈ ಎಲ್ಲಾ ವಾಹನಗಳನ್ನು ಚೆನ್ನೈನ ಕೊಳತ್ತೂರ್‌ನಲ್ಲಿರುವ ಸೆಕೆಂಡ್ ಹ್ಯಾಂಡ್ ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿತ್ತು ಎಂದು ತಿಳಿದುಬಂದಿದೆ.

ಪತ್ನಿಯ ಮೇಲಿನ ಕೋಪಕ್ಕೆ ರಸ್ತೆಬದಿ ನಿಲ್ಲಿಸಿದ್ದ 20 ಕಾರುಗಳ ಗಾಜು ಹೊಡೆದು ಕೋಪ ತೀರಿಸಿಕೊಂಡ ಪತಿರಾಯ
Viral News

Updated on: Dec 22, 2023 | 11:56 AM

ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಎಂಬ ಮಾತಿಗೆ. ಇದೀಗಾ ಅಂತದ್ದೇ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಆದರೆ ಇಲ್ಲಿ ಬಡವಾಗಿದ್ದು ಕೂಸಲ್ಲ, ಬದಲಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮಾಲೀಕರು.  ಪತ್ನಿಯೊಂದಿಗೆ ಜಗಳವಾಡಿ ಮನೆಯಿಂದ ಹೊರಬಂದ ಪತಿರಾಯ, ರಸ್ತೆಬದಿ ನಿಲ್ಲಿಸಿದ್ದ ಸುಮಾರು 20 ಕಾರುಗಳ ಗಾಜು ಹೊಡೆಯುವ ಮೂಲಕ ತನ್ನ ಪತ್ನಿ ಮೇಲಿರುವ ಕೋಪವನ್ನು ಈ ರೀತಿಯಾಗಿ ತೀರಿಸಿಕೊಂಡಿದ್ದಾನೆ. ವರದಿಯ ಪ್ರಕಾರ, ಈ ಎಲ್ಲಾ ವಾಹನಗಳನ್ನು ಚೆನ್ನೈನ ಕೊಳತ್ತೂರ್‌ನಲ್ಲಿರುವ ಸೆಕೆಂಡ್ ಹ್ಯಾಂಡ್ ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿತ್ತು ಮತ್ತು ಆ ವ್ಯಕ್ತಿಯ ಮನೆ ಆ ಶೋರೂಮ್ ಬಳಿ ಇತ್ತು. ಸೋಮವಾರ ಬೆಳಗ್ಗೆ ವಾಹನಗಳ ಇಂತಹ ಸ್ಥಿತಿ ಕಂಡು ಶೋರೂಂ ಮಾಲೀಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಾಗುತ್ತಿದ್ದಂತೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಪ್ರದೇಶದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದು ತನಿಖೆ ಆರಂಭಿಸಿದ್ದು, ವ್ಯಕ್ತಿಯ ವಿಕೃತಿ ಮೆರೆದಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬುಬಾಲನ್ ಎಂದು ಗುರುತಿಸಲಾಗಿದ್ದು, ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದಲ್ಲದೇ ಈ ವ್ಯಕ್ತಿ ನಗರದ ಡಿ ಅಡಿಕ್ಷನ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆ ನಡೆಯುವ ಎರಡು ದಿನಗಳ ಹಿಂದಷ್ಟೇ ಅಲ್ಲಿಂದ ಬಿಡುಗಡೆಗೊಂಡಿರುವುದು ಪೊಲೀಸರಿಗೆ ತನಿಖೆಯ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ:  3000 ವರ್ಷಗಳಷ್ಟು ಹಳೆಯದಾದ ವಿಗ್ರಹದಲ್ಲಿ QR ಕೋಡ್ ಪತ್ತೆ; ಫೋಟೋ ವೈರಲ್​​

ಪೊಲೀಸರು ಬುಬಾಲನ್‌ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ, ನನ್ನ ಹೆಂಡತಿ ನನಗೆ ಮೋಸ ಮಾಡುತ್ತಿದ್ದಾಳೆ ಎಂಬ ಅನುಮಾನದಿಂದ ಆ ದಿನ ಹೆಂಡತಿಯೊಂದಿಗೆ ಜಗಳವಾಡಿದ್ದನು. ಈ ವಿಚಾರವಾಗಿ ಆಕೆಯನ್ನು ಪ್ರಶ್ನಿಸಿದಾಗ ಆಕೆ ನನ್ನೊಂದಿಗೆ ಜಗಳವಾಡಿದಳು. ಇದರಿಂದ ಕೋಪಗೊಂಡು ಹೊರಗೆ ನಿಲ್ಲಿಸಿದ್ದ ಎಲ್ಲಾ ವಾಹನಗಳನ್ನು ಒಡೆದು ಹಾಕಿದೆ ಎಂದು ಹೇಳಿಕೊಂಡಿದ್ದಾನೆ. ಸದ್ಯ ಈ ವ್ಯಕ್ತಿ ಪೊಲೀಸರ ವಶದಲ್ಲಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ತೀರ್ಪು ಇನ್ನಷ್ಟೇ ಬರಬೇಕಿದೆ.

ಮತ್ತಷ್ಟು ವೈರಲ್ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us