AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಬೇಗ ಅಪಘಾತ ಮಾಡಿ; ಸಿಕ್ಕಾಪಟ್ಟೆ ಟ್ರೋಲ್ ಆಯ್ತು ಮಂಗಳೂರು- ಮಡಿಕೇರಿ ಹೆದ್ದಾರಿಯ ಬೋರ್ಡ್ 

ಕೆಲವೊಮ್ಮೆ ಅನುವಾದ ಭಾರೀ ಅವಘಡಕ್ಕೆ ಕಾರಣವಾಗುತ್ತದೆ. ಗೂಗಲ್ ಟ್ರಾನ್ಸ್​ಲೇಟ್ ಮಾಡುವುದರಿಂದ ಆ ವಾಕ್ಯ ಅಭಾಸವಾಗಿರುವ ಅದೆಷ್ಟೋ ಉದಾಹರಣೆಗಳು ಇವೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಕರ್ನಾಟಕದ ಮಂಗಳೂರು ಹೆದ್ದಾರಿಯ ಪಕ್ಕದಲ್ಲಿರುವ ಸೈನ್​ಬೋರ್ಡ್​ ಒಂದು ಭಾರೀ ವೈರಲ್ ಆಗಿದೆ. ಇದನ್ನು ಎಕ್ಸ್​ನಲ್ಲಿ ಟ್ರೋಲ್ ಮಾಡಲಾಗುತ್ತಿದೆ.

Viral News: ಬೇಗ ಅಪಘಾತ ಮಾಡಿ; ಸಿಕ್ಕಾಪಟ್ಟೆ ಟ್ರೋಲ್ ಆಯ್ತು ಮಂಗಳೂರು- ಮಡಿಕೇರಿ ಹೆದ್ದಾರಿಯ ಬೋರ್ಡ್ 
ಮಂಗಳೂರಿನ ರಸ್ತೆಯ ಬೋರ್ಡ್
ಸುಷ್ಮಾ ಚಕ್ರೆ
|

Updated on:Jul 03, 2024 | 9:00 PM

Share

ಮಂಗಳೂರು: ಕರ್ನಾಟಕ ರಾಜ್ಯದ ಮಂಗಳೂರು ಹೆದ್ದಾರಿಯಲ್ಲಿ ಅವಸರವೇ ಅಪಘಾತಕ್ಕೆ ಕಾರಣ ಎಂಬ ಎಚ್ಚರಿಕೆಯ ಬೋರ್ಡ್​ ಹಾಕಲಾಗಿದೆ. ಅದರ ಕೆಳಗೆ ಇಂಗ್ಲಿಷ್​ನಲ್ಲಿ ಅನುವಾದ ಮಾಡಿರುವ ಸಾಲುಗಳನ್ನು ಕೂಡ ಹಾಕಲಾಗಿದ್ದು, ಗೂಗಲ್ ಟ್ರಾನ್ಸಲೇಟ್ ಮಾಡಿರುವ ಭೂಪರು ಈ ಕನ್ನಡದ ವಾಕ್ಯವನ್ನು Urgent make an Accident (ತುರ್ತಾಗಿ ಅಪಘಾತ ಮಾಡಿ) ಎಂದು ಅನುವಾದಿಸಿದ್ದಾರೆ. ಈ ಬೋರ್ಡ್​ನ ಫೋಟೋ ಸಾಮಾಜಿಕ ಜಾಲತಾಣವಾದ ಎಕ್ಸ್​ನಲ್ಲಿ ಭಾರೀ ಟ್ರೋಲ್ ಆಗುತ್ತಿದೆ.

ಮಂಗಳೂರು ಹೆದ್ದಾರಿಯಲ್ಲಿನ ಈ ಬೋರ್ಡ್​ನ ಫೋಟೋವನ್ನು ಎಕ್ಸ್​ನಲ್ಲಿ ಕೊಡಗು ಕನೆಕ್ಟ್​ ಪೇಜ್ ಪೋಸ್ಟ್ ಮಾಡಿದೆ. ಈ ಪೋಸ್ಟನ್ನು ನೂರಾರು ಜನರು ರೀಟ್ವೀಟ್ ಮಾಡಿದ್ದು, ವೈರಲ್ ಆಗಿದೆ.

‘ಕೊಡಗು ಕನೆಕ್ಟ್’ ಹೆಸರಿನ ಸಾಮಾಜಿಕ ಮಾಧ್ಯಮ ಬಳಕೆದಾರರು ಸೈನ್‌ಬೋರ್ಡ್‌ನ ಚಿತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಸೈನ್‌ಬೋರ್ಡ್‌ನ ಕನ್ನಡ ಬರಹದ ಇಂಗ್ಲಿಷ್ ಅನುವಾದವನ್ನು “ತುರ್ತಾಗಿ ಅಪಘಾತ ಮಾಡಿ” ಎಂದು ಬರೆಯಲಾಗಿದೆ. ಇದನ್ನು ಇಂಗ್ಲಿಷ್​ನಲ್ಲಿ Overspeeding is the reason for Accidents ಎಂದು ಬರೆಯುವ ಬದಲು Urgent make an Accident ಎಂದು ಅನುವಾದಿಸಲಾಗಿದೆ.

ಇದನ್ನೂ ಓದಿ: Viral Video: ಕೇದಾರನಾಥ ದೇಗುಲದ ಬಳಿ ಭಾರೀ ಹಿಮಪಾತ; ಭಯಾನಕ ವಿಡಿಯೋ ವೈರಲ್

ಕರ್ನಾಟಕ ಹೆದ್ದಾರಿಯಲ್ಲಿನ ಎಚ್ಚರಿಕೆ ಫಲಕ ಅಂತರ್ಜಾಲದಲ್ಲಿ ಟ್ರೋಲ್ ಆಗಿದ್ದು, ‘ತಪ್ಪಾಗಿ ಅನುವಾದಿಸಲಾದ ಈ ಬೋರ್ಡನ್ನು ಇನ್ನೂ ಸರಿ ಮಾಡಿಲ್ಲವೇ?’ ಎಂದು ನೆಟ್ಟಿಗರು ಲೇವಡಿ ಮಾಡಿದ್ದಾರೆ.

ಕರ್ನಾಟಕದ ಮಂಗಳೂರು-ಕೊಡಗು ಸಮೀಪದ ಹೆದ್ದಾರಿಯಲ್ಲಿ ಅಳವಡಿಸಲಾಗಿರುವ ಈ ತುರ್ತು ಸೂಚನಾ ಫಲಕ ಅಂತರ್ಜಾಲದ ಗಮನ ಸೆಳೆದಿದೆ.

ಇಂಗ್ಲಿಷ್‌ನಲ್ಲಿ ಸೈನ್ ಬೋರ್ಡ್‌ಗಳನ್ನು ಭಾಷಾಂತರಿಸುವ ಸರ್ಕಾರದ ಪ್ರಯತ್ನವನ್ನು ಕೆಲವರು ಪ್ರಶ್ನಿಸಿದರೆ, ಇನ್ನು ಕೆಲವರು ತಮಾಷೆಯಾಗಿ ಕಮೆಂಟ್ ಮಾಡುತ್ತಿದ್ದಾರೆ.

ಈ ಬೋರ್ಡನ್ನು ವಿಮಾ ಏಜೆಂಟ್‌ಗಳಿಗೆ ಟ್ಯಾಗ್ ಮಾಡಿ. ಅವರು ಈ ಬೋರ್ಡನ್ನು ಬೇಗನೆ ಸರಿಪಡಿಸುತ್ತಾರೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Shocking Video: ಪಿಕ್ನಿಕ್ ಹೋದ ಒಂದೇ ಕುಟುಂಬದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್

ಈ ಬೋರ್ಡ್​ ನೋಡಿದ ಚಾಲಕರು ಕನ್ನಡದ ವಾಕ್ಯವನ್ನು ಫಾಲೋ ಮಾಡಬೇಕೋ ಅಥವಾ ಇಂಗ್ಲಿಷ್ ವಾಕ್ಯವನ್ನು ಫಾಲೋ ಮಾಡಬೇಕೋ ಎಂದು ಗೊಂದಲಕ್ಕೆ ಒಳಗಾಗುವುದು ಗ್ಯಾರಂಟಿ ಎಂದು ಇನ್ನು ಕೆಲವರು ಪೋಸ್ಟ್ ಮಾಡಿದ್ದಾರೆ.

ಈ ಬೋರ್ಡ್​ ಮಂಗಳೂರು- ಕೊಡಗು ಹೆದ್ದಾರಿಯಲ್ಲಿ ಕಂಡುಬಂದಿದೆ. ಸುಳ್ಯದ ಬಳಿಯ ಸಂಪಾಜೆ ಹತ್ತಿರ ಮಡಿಕೇರಿ ಘಾಟ್ ಆರಂಭವಾಗುವುದಕ್ಕೂ ಮುನ್ನ ಈ ಬೋರ್ಡ್ ಹಾಕಲಾಗಿದೆ. ಮಡಿಕೇರಿಯಿಂದ ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಬೋರ್ಡ್ ಇದೆ. ಕೊಡಗು ಕನೆಕ್ಟ್​ ಪೋಸ್ಟ್ ಮಾಡಿರುವ ಈ ಫೋಟೋಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಅಧಿಕೃತ ಪೇಜನ್ನು ಸಹ ಟ್ಯಾಗ್ ಮಾಡಲಾಗಿದೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:00 pm, Wed, 3 July 24

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ