AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ್ಯಂತರ ಹಣವನ್ನು ರಸ್ತೆಗೆ ಎಸೆದ ವ್ಯಕ್ತಿ, ಕುಟುಂಬ ಬೀದಿಗೆ ಬಿತ್ತು ಎಂದು ಗೋಳಾಡಿದ ಸಂಬಂಧಿಕರು

ಅಮೆರಿಕದ ಒರೆಗಾನ್​​ನಲ್ಲಿ ವ್ಯಕ್ತಿಯೊಬ್ಬ ತನ್ನ ಕಾರಿನಿಂದ 2 ಲಕ್ಷ ಡಾಲರ್ ಮೌಲ್ಯದ ನೋಟುಗಳನ್ನು ಎಸೆದಿದ್ದಾನೆ. ಅಂದರೆ ಭಾರತೀಯ ಕರೆನ್ಸಿ ಪ್ರಕಾರ ಸುಮಾರು 1.6 ಕೋಟಿ ರೂಪಾಯಿ.

ಕೋಟ್ಯಂತರ ಹಣವನ್ನು  ರಸ್ತೆಗೆ ಎಸೆದ ವ್ಯಕ್ತಿ, ಕುಟುಂಬ ಬೀದಿಗೆ ಬಿತ್ತು ಎಂದು ಗೋಳಾಡಿದ ಸಂಬಂಧಿಕರು
ಕೋಟ್ಯಂತರ ರೂಪಾಯಿಯನ್ನು ರಸ್ತೆಗೆ ಎಸೆದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Apr 17, 2023 | 2:21 PM

Share

ಅಮೆರಿಕದ ಒರೆಗಾನ್​​ನಲ್ಲಿ ವ್ಯಕ್ತಿಯೊಬ್ಬ ತನ್ನ ಕಾರಿನಿಂದ 2 ಲಕ್ಷ ಡಾಲರ್ ಮೌಲ್ಯದ ನೋಟುಗಳನ್ನು ಎಸೆದಿದ್ದಾನೆ. ಅಂದರೆ ಭಾರತೀಯ ಕರೆನ್ಸಿ ಪ್ರಕಾರ ಸುಮಾರು 1.6 ಕೋಟಿ ರೂಪಾಯಿ. ಈತ ತಾನು ಇತರರಿಗೆ ನೆರವಾಗುತ್ತೇನೆ ಎಂದು ಹೇಳಿಕೊಂಡಿದ್ದಾನೆ. ಆದರೆ ಈ ಘಟನೆಯ ಬಳಿಕ ಆತನ ಕುಟುಂಬ ಆಘಾತಕ್ಕೊಳಗಾಗಿದೆ. ಹೌದು ಆತ ಕೋಟ್ಯಾಂತರ ರೂಪಾಯಿಗಳನ್ನು ರಸ್ತೆ ಎಸೆದಿದ್ದರಿಂದ ತಮ್ಮ ಕುಟುಂಬ ಅಪಾರ ನಷ್ಟವನ್ನು ಅನುಭವಿಸಿದೆ ಎಂದು ಆತನ ವಿರುದ್ಧ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.

ಕೋಟ್ಯಾಂತರ ಮೊತ್ತದ ಹಣವನ್ನು ರಸ್ತೆಗಳ ಮೇಲೆ ಎಸೆದ ವ್ಯಕ್ತಿಯನ್ನು ಕಾಲಿನ್ ಡೇವಿಸ್ ಮೆಕಾರ್ಥಿ (38) ಎಂದು ಗುರುತಿಸಲಾಗಿದೆ. ಕಾಲಿನ್​​ ಬ್ಯಾಂಕ್​​​ನಿಂದ 100 ಡಾಲರ್ ಕರೆನ್ಸಿ ನೋಟುಗಳನ್ನು ಡ್ರಾ ಮಾಡಿಕೊಂಡಿದ್ದಾನೆ. ಈ ಹಣಗಳನ್ನು ಅಮೆರಿಕದ ಜನನಿಬಿಡ ಹೆದ್ದಾರಿಯಲ್ಲಿ ಎಸೆದಿದ್ದಾನೆ. ಹಣವನ್ನು ಉಡುಗೊರೆಯಾಗಿ ನೀಡುವ ಮೂಲಕ ಇತರರಿಗೆ ನೆರವಾಗುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ನೋಟುಗಳ ಸುರಿಮಳೆ ಸುರಿಯುತ್ತಿದ್ದಂತೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಹಣದ ಸುರಿಮಳೆಯನ್ನು ಕಂಡು ಜನರು ಮುಗಿಬಿದ್ದಿದ್ದಾರೆ. ಇದು ಏ. 11ರಂದು ರಾತ್ರಿ 7:20 ರ ಸುಮಾರಿಗೆ ನಡೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: 6 ಪತ್ನಿಯರ ಮುದ್ದಿನ ಗಂಡನಿಗೆ ಮೊದಲ ಮಗು ಯಾರಿಂದ ಪಡೆಯುವುದು ಎಂಬ ಚಿಂತೆಯಂತೆ..!

ಈತನ ಈ ಕೆಲಸ ಎಲ್ಲೆಡೆ ಸುದ್ದಿಯಾಗುತ್ತಿದ್ದಂತೆ ಆತನ ಕುಟುಂಬ ಆಘಾತಕ್ಕೊಳಗಾಗಿದೆ. ಕಾಲಿನ್ ತಮ್ಮ ಜಂಟಿ ಬ್ಯಾಂಕ್(joint account)ಖಾತೆಯನ್ನು ಖಾಲಿ ಮಾಡಿದ್ದಾನೆ. ಇದರಿಂದಾಗಿ ನಮ್ಮ ಕುಟುಂಬ ಬೀದಿಗೆ ಬೀಳುವ ಪರಿಸ್ಥಿತಿಗೆ ಬಂದು ತುಲುಪಿದೆ ಎಂದು ಗೋಳಾಡಿದ್ದಾರೆ. ಜೊತೆಗೆ ಆತನ ವಿರುದ್ಧ ಕೇಸು ದಾಖಲಿಸಲಾಗಿದೆ. ದೂರು ದಾಖಲಾಗಿದ್ದರೂ ಪೊಲೀಸರು ಕಾಲಿನ್‌ನನ್ನು ಬಂಧಿಸಲಿಲ್ಲ ಮತ್ತು ಯಾವುದೇ ಅಪರಾಧದ ಆರೋಪ ಹೊರಿಸಲಿಲ್ಲ. ಏಕೆಂದರೆ ಅವನು ಶ್ರೀಮಂತನೆಂದು ಹೇಳಿಕೊಂಡು ,ಇತರರ ಜೀವನವನ್ನು ಸುಧಾರಿಸಲು ಕೋಟ್ಯಾಂತರ ಮೌಲ್ಯದ ಹಣವನ್ನು ಉಡುಗೊರೆಯಾಗಿ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಇದರಲ್ಲಿ ತಪ್ಪು ಕಾಣದ ಪೊಲೀಸರು ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಜೊತೆಗೆ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು, ಕುಟುಂಬ ಸದಸ್ಯರು ತಮಗಾಗಿ ವಿಶೇಷ ಬ್ಯಾಂಕ್ ಖಾತೆಯನ್ನು ತೆರೆದು ತಮ್ಮ ಹಣವನ್ನು ಅದರಲ್ಲಿ ಇರಿಸಿಕೊಳ್ಳಲು ಪೋಲಿಸರು ಸಲಹೆ ನೀಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:18 pm, Mon, 17 April 23

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ