Viral: ಅಯ್ಯಯ್ಯೋ… ತಾಜ್‌ ಮಹಲ್‌ ಆವರಣದಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ ಪ್ರವಾಸಿಗರು; ವಿಡಿಯೋ ವೈರಲ್‌

ಸಾರ್ವಜನಿಕ ಸ್ಥಳಗಳಲ್ಲಿ, ಪ್ರವಾಸಿ ಸ್ಥಳಗಳಲ್ಲಿ ಹೀಗೆ ಕಂಡ ಕಂಡಲ್ಲಿ ಮೂತ್ರ ವಿಸರ್ಜನೆ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ರೂ ಕೆಲವೊಬ್ರು ಇದಕ್ಕೆಲ್ಲಾ ಕ್ಯಾರೇ ಅನ್ನದೇ ಎಲ್ಲೆಂದರಲ್ಲಿ ಮೂತ್ರ ವಿಸರ್ಜಿಸುತ್ತಾರೆ. ಅದೇ ರೀತಿ ಇಲ್ಲಿಬ್ಬರು ಪ್ರವಾಸಿಗರು ವಿಶ್ವ ಪ್ರಸಿದ್ಧ ತಾಜ್‌ ಮಹಲ್‌ನ ಆವರಣದಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಪ್ರವಾಸಿಗರ ಈ ವರ್ತನೆಗೆ ನೆಟ್ಟಿಗರು ಗರಂ ಆಗಿದ್ದಾರೆ.

Viral: ಅಯ್ಯಯ್ಯೋ… ತಾಜ್‌ ಮಹಲ್‌ ಆವರಣದಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ ಪ್ರವಾಸಿಗರು; ವಿಡಿಯೋ ವೈರಲ್‌
Edited By:

Updated on: Sep 15, 2024 | 12:58 PM

ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳ, ಪ್ರವಾಸಿ ಸ್ಥಳಗಳು ಸೇರಿದಂತೆ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವಂತಿಲ್ಲ, ಉಗುಳುವಂತಿಲ್ಲ, ಮಲ ವಿಸರ್ಜನೆ ಮಾಡುವಂತಿಲ್ಲ, ಕಂಡ ಕಂಡಲ್ಲಿ ಕಸ ಕಡ್ಡಿಗಳನ್ನು ಎಸೆಯುವಂತಿಲ್ಲ ಎಂದು ಸರ್ಕಾರಗಳು ಕಠಿಣ ಕ್ರಮಗಳನ್ನು ಜಾರಿಗೆ ತರುತ್ತಲೇ ಇರುತ್ತವೆ. ಆದ್ರೆ ಈ ಕೆಲವೊಬ್ರು ಇದಕ್ಕೆಲ್ಲ ಕ್ಯಾರೇ ಅನ್ನದೇ ಎಲ್ಲೆಂದರಲ್ಲಿ ಮೂತ್ರ ವಿಸರ್ಜಿಸುತ್ತಾರೆ. ಅದೇ ರೀತಿ ಇಲ್ಲಿಬ್ಬರು ಪ್ರವಾಸಿಗರು ವಿಶ್ವ ಪ್ರಸಿದ್ಧ ತಾಜ್‌ ಮಹಲ್‌ನ ಆವರಣದಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಪ್ರವಾಸಿಗರ ಈ ವರ್ತನೆಗೆ ನೆಟ್ಟಿಗರು ಗರಂ ಆಗಿದ್ದಾರೆ.

ಹಲವಾರು ಪ್ರವಾಸಿಗರು ಪ್ರತಿನಿತ್ಯ ವಿಶ್ವ ಪ್ರಸಿದ್ಧ ತಾಜ್‌ ಮಹಲ್‌ಗೆ ಭೇಟಿ ನೀಡುತ್ತಿರುತ್ತಾರೆ. ಈ ಸಂದರ್ಭದಲ್ಲಿ ಇಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಇಲ್ಲಿ ಪ್ರತಿ ಮೂಲೆಯಲ್ಲೂ ಸಿಐಎಸ್‌ಎಫ್‌ ಮತ್ತು ಎಎಸ್‌ಐ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇಷ್ಟು ಬಿಗಿ ಭದ್ರತೆಯ ನಡುವೆಯೂ ಪ್ರವಾಸಿಗರಿಬ್ಬರು ಶೌಚಾಲಯದ ವ್ಯವಸ್ಥೆಗಳಿದ್ದರೂ ಕೂಡಾ ತಾಜ್‌ ಮಹಲ್‌ ಆವರಣದಲ್ಲಿರುವ ಉದ್ಯಾನವನದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾರೆ. ಇದನ್ಯಾರೋ ವಿಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ವಿಡಿಯೋ ಆಧರಿಸಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್​​ ಕೆಲಸ ಬಿಟ್ಟು, ಹುಡುಗಿಯರನ್ನು ಹೇಗೆ ಪಟಾಯಿಸುವುದು ಎಂದು ಹೇಳಿ ಕೊಡ್ತಾರೆ ಈ ಅಧಿಕಾರಿ

ಈ ಕುರಿತ ವಿಡಿಯೋವನ್ನು News1Indiatweet ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಸೊಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಶೌಚಾಲಯದ ವ್ಯವಸ್ಥೆ ಇದ್ದರೂ ಪುರುಷರಿಬ್ಬರು ತಾಜ್‌ ಮಹಲ್‌ ಆವರಣದಲ್ಲಿನ ಉದ್ಯಾನವನದಲ್ಲಿ ಮೂತ್ರ ವಿಸರ್ಜಿಸುತ್ತಿರುವ ದೃಶ್ಯವನ್ನು ಕಾಣಬಹುದು. ವಿಡಿಯೋವನ್ನು ಕಂಡು ಗರಂ ಆದ ನೆಟ್ಟಿಗರು ಇವರುಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us