AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಬೈಕ್‌ನಲ್ಲಿ 5 ಜನ ಸವಾರಿ! 31 ಸಾವಿರ ರೂ. ದಂಡ ಹಾಕಿದ ಪೊಲೀಸರು

ಉತ್ತರ ಪ್ರದೇಶದ ಹಾಪುರದಲ್ಲಿ ಒಂದೇ ಬೈಕ್‌ನಲ್ಲಿ ಐದು ಜನರು ಅಪಾಯಕಾರಿಯಾಗಿ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಈ ಸಾಹಸ ಮಾಡಿದ್ದು, ಪೊಲೀಸರು ₹31,000 ದಂಡ ವಿಧಿಸಿದ್ದಾರೆ. ಇಂತಹ ಸವಾರಿಗಳು ಸಾರ್ವಜನಿಕರ ಜೀವಕ್ಕೆ ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ರಸ್ತೆ ಸುರಕ್ಷತೆ ಹಾಗೂ ನಿಯಮ ಪಾಲನೆ ಅತ್ಯಗತ್ಯ.

ಒಂದೇ ಬೈಕ್‌ನಲ್ಲಿ 5 ಜನ ಸವಾರಿ! 31 ಸಾವಿರ ರೂ. ದಂಡ ಹಾಕಿದ ಪೊಲೀಸರು
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Dec 26, 2025 | 4:38 PM

Share

ಉತ್ತರ ಪ್ರದೇಶ, ಡಿ.26: ಉತ್ತರ ಪ್ರದೇಶದ (UP bike stunt) ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದೇ ಬೈಕ್​​ನಲ್ಲಿ 5 ಜನ ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ರಸ್ತೆ ಸಂಚಾರ ನಿಯಮವನ್ನು ಉಲ್ಲಂಘಿಸಿ, ಐದು ಹುಡುಗರು ಒಂದೇ ಬೈಕ್​​ನಲ್ಲಿ ಹೋಗಿದ್ದಾರೆ. ಇದೀಗ ಈ ರೀತಿಯ ಸಂಚಾರ ಸಾರ್ವಜನಿಕರಲ್ಲಿ ಹಾಗೂ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದೆ. ಹಾಪುರದ ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋದಲ್ಲಿ 5 ಜನ ಯುವಕರು ಅಪಾಯಕಾರಿ ಸವಾರಿ ನಡೆಸಿದ್ದಾರೆ. ಇನ್ನು ಈ ಬೈಕ್​​ನ ಕೊನೆಯಲ್ಲಿ ನೇತಾಡಿಕೊಂಡು ಕೂತಿರುವುದನ್ನು ಕಾಣಬಹುದು. ಇದೀಗ ಈ ವಿಡಿಯೋ ಪೊಲೀಸರ ಕೈ ಸೇರಿದೆ.

ವಿಡಿಯೋದಲ್ಲಿ ಏನಿದೆ ?

ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಐದು ಹುಡುಗರು ಒಂದೇ ಬೈಕ್​​ನಲ್ಲಿ ಸವಾರಿ ಮಾಡುವುದನ್ನು ಕಾಣಬಹುದು. ಐದು ಹುಡುಗರಲ್ಲಿ ಒಬ್ಬ ಹುಡುಗ ಬೈಕ್‌ನಿಂದ ನೇತಾಡುತ್ತಿರುವುದು ಮತ್ತು ಇನ್ನೊಬ್ಬ ಹುಡುಗ ಅವನ ಬೆನ್ನಿಗೆ ನಿಂತಿರುವುದನ್ನು ಕಾಣಬಹುದು. ಮತ್ತೊಂದೆಡೆ, ಬೈಕ್​​​ನ ಹಿಂದೆ ಕೂತಿದ್ದ ಯುವಕ ವಿಡಿಯೋ ಮಾಡಿದ್ದಾನೆ. ಇನ್ನು ಬೈಕ್​​ ಹಿಂದೆ ಒಬ್ಬರು ವಿಡಿಯೋ ದೃಶ್ಯವನ್ನು ಸೆರೆಹಿಡಿದು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

ಪೊಲೀಸರ ಕ್ರಮ ಏನು?

ಈ ವಿಡಿಯೋ ವೈರಲ್ ಆದ ನಂತರ, ಪಿಲ್ಖುವಾ ಕೊಟ್ವಾಲಿಯ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆಯನ್ನು ನಡೆಸಿ, ಪೊಲೀಸರು ಸಂಚಾರ ಉಲ್ಲಂಘನೆ ಪ್ರಕರಣವನ್ನು ದಾಖಲಿಸಿಕೊಂಡು ಅಜಾಗರೂಕ ಮತ್ತು ಅಪಾಯಕಾರಿ ಸವಾರಿಗಾಗಿ 31,000 ರೂ. ದಂಡ ಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬುಲೆಟ್​​​ಗೆ ಗುದ್ದಿ ಅರ್ಧ ಕಿಮೀ ಎಳೆದೊಯ್ದ ಕಾರು, ರಸ್ತೆಯುದ್ದಕ್ಕೂ ಬೆಂಕಿಯ ಕಿಡಿ

ಎಚ್ಚರಿಕೆ ವಹಿಸಲು ಸಾರ್ವಜನಿಕರಲ್ಲಿ ಮನವಿ:

ಈ ವಿಡಿಯೋ ಇದೊಂದೇ ಅಲ್ಲ. ಜನರು ಸಾರ್ವಜನಿಕ ರಸ್ತೆಗಳಲ್ಲಿ ಇಂತಹ ಅಪಾಯಕಾರಿ ಸಾಹಸಗಳನ್ನು ಮಾಡುತ್ತಲೇ ಇರುತ್ತಾರೆ, ಇದು ಅವರ ಜೀವಕ್ಕೆ ಮತ್ತು ರಸ್ತೆಗಳಲ್ಲಿ ಇತರರ ಸವಾರಿಗೂ ಜೀವಕ್ಕೆ ದೊಡ್ಡ ಅಪಾಯವನ್ನುಂಟುಮಾಡುತ್ತದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Fri, 26 December 25

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?