AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಬೈಕ್‌ನಲ್ಲಿ 5 ಜನ ಸವಾರಿ! 31 ಸಾವಿರ ರೂ. ದಂಡ ಹಾಕಿದ ಪೊಲೀಸರು

ಉತ್ತರ ಪ್ರದೇಶದ ಹಾಪುರದಲ್ಲಿ ಒಂದೇ ಬೈಕ್‌ನಲ್ಲಿ ಐದು ಜನರು ಅಪಾಯಕಾರಿಯಾಗಿ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಈ ಸಾಹಸ ಮಾಡಿದ್ದು, ಪೊಲೀಸರು ₹31,000 ದಂಡ ವಿಧಿಸಿದ್ದಾರೆ. ಇಂತಹ ಸವಾರಿಗಳು ಸಾರ್ವಜನಿಕರ ಜೀವಕ್ಕೆ ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ರಸ್ತೆ ಸುರಕ್ಷತೆ ಹಾಗೂ ನಿಯಮ ಪಾಲನೆ ಅತ್ಯಗತ್ಯ.

ಒಂದೇ ಬೈಕ್‌ನಲ್ಲಿ 5 ಜನ ಸವಾರಿ! 31 ಸಾವಿರ ರೂ. ದಂಡ ಹಾಕಿದ ಪೊಲೀಸರು
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Dec 26, 2025 | 4:38 PM

Share

ಉತ್ತರ ಪ್ರದೇಶ, ಡಿ.26: ಉತ್ತರ ಪ್ರದೇಶದ (UP bike stunt) ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದೇ ಬೈಕ್​​ನಲ್ಲಿ 5 ಜನ ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ರಸ್ತೆ ಸಂಚಾರ ನಿಯಮವನ್ನು ಉಲ್ಲಂಘಿಸಿ, ಐದು ಹುಡುಗರು ಒಂದೇ ಬೈಕ್​​ನಲ್ಲಿ ಹೋಗಿದ್ದಾರೆ. ಇದೀಗ ಈ ರೀತಿಯ ಸಂಚಾರ ಸಾರ್ವಜನಿಕರಲ್ಲಿ ಹಾಗೂ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದೆ. ಹಾಪುರದ ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋದಲ್ಲಿ 5 ಜನ ಯುವಕರು ಅಪಾಯಕಾರಿ ಸವಾರಿ ನಡೆಸಿದ್ದಾರೆ. ಇನ್ನು ಈ ಬೈಕ್​​ನ ಕೊನೆಯಲ್ಲಿ ನೇತಾಡಿಕೊಂಡು ಕೂತಿರುವುದನ್ನು ಕಾಣಬಹುದು. ಇದೀಗ ಈ ವಿಡಿಯೋ ಪೊಲೀಸರ ಕೈ ಸೇರಿದೆ.

ವಿಡಿಯೋದಲ್ಲಿ ಏನಿದೆ ?

ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಐದು ಹುಡುಗರು ಒಂದೇ ಬೈಕ್​​ನಲ್ಲಿ ಸವಾರಿ ಮಾಡುವುದನ್ನು ಕಾಣಬಹುದು. ಐದು ಹುಡುಗರಲ್ಲಿ ಒಬ್ಬ ಹುಡುಗ ಬೈಕ್‌ನಿಂದ ನೇತಾಡುತ್ತಿರುವುದು ಮತ್ತು ಇನ್ನೊಬ್ಬ ಹುಡುಗ ಅವನ ಬೆನ್ನಿಗೆ ನಿಂತಿರುವುದನ್ನು ಕಾಣಬಹುದು. ಮತ್ತೊಂದೆಡೆ, ಬೈಕ್​​​ನ ಹಿಂದೆ ಕೂತಿದ್ದ ಯುವಕ ವಿಡಿಯೋ ಮಾಡಿದ್ದಾನೆ. ಇನ್ನು ಬೈಕ್​​ ಹಿಂದೆ ಒಬ್ಬರು ವಿಡಿಯೋ ದೃಶ್ಯವನ್ನು ಸೆರೆಹಿಡಿದು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

ಪೊಲೀಸರ ಕ್ರಮ ಏನು?

ಈ ವಿಡಿಯೋ ವೈರಲ್ ಆದ ನಂತರ, ಪಿಲ್ಖುವಾ ಕೊಟ್ವಾಲಿಯ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆಯನ್ನು ನಡೆಸಿ, ಪೊಲೀಸರು ಸಂಚಾರ ಉಲ್ಲಂಘನೆ ಪ್ರಕರಣವನ್ನು ದಾಖಲಿಸಿಕೊಂಡು ಅಜಾಗರೂಕ ಮತ್ತು ಅಪಾಯಕಾರಿ ಸವಾರಿಗಾಗಿ 31,000 ರೂ. ದಂಡ ಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬುಲೆಟ್​​​ಗೆ ಗುದ್ದಿ ಅರ್ಧ ಕಿಮೀ ಎಳೆದೊಯ್ದ ಕಾರು, ರಸ್ತೆಯುದ್ದಕ್ಕೂ ಬೆಂಕಿಯ ಕಿಡಿ

ಎಚ್ಚರಿಕೆ ವಹಿಸಲು ಸಾರ್ವಜನಿಕರಲ್ಲಿ ಮನವಿ:

ಈ ವಿಡಿಯೋ ಇದೊಂದೇ ಅಲ್ಲ. ಜನರು ಸಾರ್ವಜನಿಕ ರಸ್ತೆಗಳಲ್ಲಿ ಇಂತಹ ಅಪಾಯಕಾರಿ ಸಾಹಸಗಳನ್ನು ಮಾಡುತ್ತಲೇ ಇರುತ್ತಾರೆ, ಇದು ಅವರ ಜೀವಕ್ಕೆ ಮತ್ತು ರಸ್ತೆಗಳಲ್ಲಿ ಇತರರ ಸವಾರಿಗೂ ಜೀವಕ್ಕೆ ದೊಡ್ಡ ಅಪಾಯವನ್ನುಂಟುಮಾಡುತ್ತದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Fri, 26 December 25

Follow Us
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ