AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಬೈಕ್‌ನಲ್ಲಿ 5 ಜನ ಸವಾರಿ! 31 ಸಾವಿರ ರೂ. ದಂಡ ಹಾಕಿದ ಪೊಲೀಸರು

ಉತ್ತರ ಪ್ರದೇಶದ ಹಾಪುರದಲ್ಲಿ ಒಂದೇ ಬೈಕ್‌ನಲ್ಲಿ ಐದು ಜನರು ಅಪಾಯಕಾರಿಯಾಗಿ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಈ ಸಾಹಸ ಮಾಡಿದ್ದು, ಪೊಲೀಸರು ₹31,000 ದಂಡ ವಿಧಿಸಿದ್ದಾರೆ. ಇಂತಹ ಸವಾರಿಗಳು ಸಾರ್ವಜನಿಕರ ಜೀವಕ್ಕೆ ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ರಸ್ತೆ ಸುರಕ್ಷತೆ ಹಾಗೂ ನಿಯಮ ಪಾಲನೆ ಅತ್ಯಗತ್ಯ.

ಒಂದೇ ಬೈಕ್‌ನಲ್ಲಿ 5 ಜನ ಸವಾರಿ! 31 ಸಾವಿರ ರೂ. ದಂಡ ಹಾಕಿದ ಪೊಲೀಸರು
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Dec 26, 2025 | 4:38 PM

Share

ಉತ್ತರ ಪ್ರದೇಶ, ಡಿ.26: ಉತ್ತರ ಪ್ರದೇಶದ (UP bike stunt) ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದೇ ಬೈಕ್​​ನಲ್ಲಿ 5 ಜನ ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ರಸ್ತೆ ಸಂಚಾರ ನಿಯಮವನ್ನು ಉಲ್ಲಂಘಿಸಿ, ಐದು ಹುಡುಗರು ಒಂದೇ ಬೈಕ್​​ನಲ್ಲಿ ಹೋಗಿದ್ದಾರೆ. ಇದೀಗ ಈ ರೀತಿಯ ಸಂಚಾರ ಸಾರ್ವಜನಿಕರಲ್ಲಿ ಹಾಗೂ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದೆ. ಹಾಪುರದ ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋದಲ್ಲಿ 5 ಜನ ಯುವಕರು ಅಪಾಯಕಾರಿ ಸವಾರಿ ನಡೆಸಿದ್ದಾರೆ. ಇನ್ನು ಈ ಬೈಕ್​​ನ ಕೊನೆಯಲ್ಲಿ ನೇತಾಡಿಕೊಂಡು ಕೂತಿರುವುದನ್ನು ಕಾಣಬಹುದು. ಇದೀಗ ಈ ವಿಡಿಯೋ ಪೊಲೀಸರ ಕೈ ಸೇರಿದೆ.

ವಿಡಿಯೋದಲ್ಲಿ ಏನಿದೆ ?

ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಐದು ಹುಡುಗರು ಒಂದೇ ಬೈಕ್​​ನಲ್ಲಿ ಸವಾರಿ ಮಾಡುವುದನ್ನು ಕಾಣಬಹುದು. ಐದು ಹುಡುಗರಲ್ಲಿ ಒಬ್ಬ ಹುಡುಗ ಬೈಕ್‌ನಿಂದ ನೇತಾಡುತ್ತಿರುವುದು ಮತ್ತು ಇನ್ನೊಬ್ಬ ಹುಡುಗ ಅವನ ಬೆನ್ನಿಗೆ ನಿಂತಿರುವುದನ್ನು ಕಾಣಬಹುದು. ಮತ್ತೊಂದೆಡೆ, ಬೈಕ್​​​ನ ಹಿಂದೆ ಕೂತಿದ್ದ ಯುವಕ ವಿಡಿಯೋ ಮಾಡಿದ್ದಾನೆ. ಇನ್ನು ಬೈಕ್​​ ಹಿಂದೆ ಒಬ್ಬರು ವಿಡಿಯೋ ದೃಶ್ಯವನ್ನು ಸೆರೆಹಿಡಿದು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

ಪೊಲೀಸರ ಕ್ರಮ ಏನು?

ಈ ವಿಡಿಯೋ ವೈರಲ್ ಆದ ನಂತರ, ಪಿಲ್ಖುವಾ ಕೊಟ್ವಾಲಿಯ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆಯನ್ನು ನಡೆಸಿ, ಪೊಲೀಸರು ಸಂಚಾರ ಉಲ್ಲಂಘನೆ ಪ್ರಕರಣವನ್ನು ದಾಖಲಿಸಿಕೊಂಡು ಅಜಾಗರೂಕ ಮತ್ತು ಅಪಾಯಕಾರಿ ಸವಾರಿಗಾಗಿ 31,000 ರೂ. ದಂಡ ಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬುಲೆಟ್​​​ಗೆ ಗುದ್ದಿ ಅರ್ಧ ಕಿಮೀ ಎಳೆದೊಯ್ದ ಕಾರು, ರಸ್ತೆಯುದ್ದಕ್ಕೂ ಬೆಂಕಿಯ ಕಿಡಿ

ಎಚ್ಚರಿಕೆ ವಹಿಸಲು ಸಾರ್ವಜನಿಕರಲ್ಲಿ ಮನವಿ:

ಈ ವಿಡಿಯೋ ಇದೊಂದೇ ಅಲ್ಲ. ಜನರು ಸಾರ್ವಜನಿಕ ರಸ್ತೆಗಳಲ್ಲಿ ಇಂತಹ ಅಪಾಯಕಾರಿ ಸಾಹಸಗಳನ್ನು ಮಾಡುತ್ತಲೇ ಇರುತ್ತಾರೆ, ಇದು ಅವರ ಜೀವಕ್ಕೆ ಮತ್ತು ರಸ್ತೆಗಳಲ್ಲಿ ಇತರರ ಸವಾರಿಗೂ ಜೀವಕ್ಕೆ ದೊಡ್ಡ ಅಪಾಯವನ್ನುಂಟುಮಾಡುತ್ತದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Fri, 26 December 25

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ