AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಬಾತ್ ರೂಮ್ ಗೆ ಹೋಗುವ ನೆಪದಲ್ಲಿ ಚಿನ್ನಾಭರಣ ನಗದು ಜೊತೆ ಪರಾರಿ ಆದ ವಧು, ಕಂಗಾಲಾದ ವರ

ಇತ್ತೀಚೆಗಿನ ದಿನಗಳಲ್ಲಿ ಮದುವೆ ಹೆಸರಿನಲ್ಲಿ ವಂಚಿಸುತ್ತಿರುವ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಇದೀಗ ಇಂತಹದೊಂದು ಘಟನೆ ನಡೆದಿದ್ದು, ಮದುವೆಯ ದಿನವೇ ವಧುವು ಬಾತ್ ರೂಮ್ ಗೆ ಹೋಗುವ ನೆಪದಲ್ಲಿ ಚಿನ್ನಾಭರಣ ಹಾಗೂ ನಗದು ಜೊತೆಗೆ ಮದುವೆ ಮಂಟಪದಿಂದ ಪರಾರಿಯಾಗಿದ್ದಾಳೆ. ಈ ಘಟನೆಯು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ.

Viral : ಬಾತ್ ರೂಮ್ ಗೆ ಹೋಗುವ ನೆಪದಲ್ಲಿ ಚಿನ್ನಾಭರಣ  ನಗದು ಜೊತೆ ಪರಾರಿ ಆದ ವಧು, ಕಂಗಾಲಾದ ವರ
Bride Runs Away With Cash, JewelleryImage Credit source: Pinterest
ಸಾಯಿನಂದಾ
| Edited By: |

Updated on: Jan 05, 2025 | 1:19 PM

Share

ಹಣ ಕಂಡ್ರೆ ಹೆಣವೂ ಬಾಯಿ ಬಿಡುತ್ತೆ ಎಂಬ ಮಾತು ಕೆಲವು ಘಟನೆಗಳ ಬಗ್ಗೆ ಕೇಳಿದಾಗ ಸತ್ಯವೆನಿಸುತ್ತದೆ. ಮದುವೆಯ ಹೆಸರಿನಲ್ಲಿ ವಂಚನೆಗಳು ನಡೆಯುತ್ತಿರುವ ಸುದ್ದಿಗಳನ್ನು ಆಗಾಗ ಕೇಳುತ್ತೀರಾ. ಈಗಾಗಲೇ ಅನೇಕ ಕಾರಣಗಳಿಗೆ ಮದುವೆ ಮಂಟಮದಲ್ಲಿಯೇ ಅದೆಷ್ಟೋ ಮದುವೆಗಳು ಮುರಿದು ಬಿದ್ದಿದೆ. ಇಲ್ಲೊಂದು ಅಂತಹದ್ದೇ ವಿಚಿತ್ರ ಘಟನೆ ನಡೆದಿದ್ದು, ಮದುವೆ ದಿನವೇ ವಧುವು ಬಾತ್ ರೂಮ್ ಗೆ ಹೋಗುವ ನೆಪದಲ್ಲಿ ಚಿನ್ನಾಭರಣ ಹಾಗೂ ಹಣದೊಂದಿಗೆ ಮದುವೆ ಮಂಟಪದಿಂದ ಎಸ್ಕೇಪ್ ಆಗಿದ್ದಾಳೆ. ಈ ಘಟನೆಯು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ.

ಸೀತಾಪುರ ಜಿಲ್ಲೆಯ ಗೋವಿಂದ್ ಪುರ ಗ್ರಾಮದ ರೈತ ಕಮಲೇಶ್ ವಂಚನೆಗೆ ಒಳಗಾದ ವ್ಯಕ್ತಿಯಾಗಿದ್ದು, ಮೊದಲ ಪತ್ನಿಯ ಮರಣದ ನಂತರ 40 ವರ್ಷದ ಕಮಲೇಶ್ ಎರಡನೇ ಮದುವೆಗೆ ಸಿದ್ಧನಾಗಿದ್ದರು. ಹುಡುಗಿಯನ್ನು ಹುಡುಕಲು ಸ್ಥಳೀಯ ದಲ್ಲಾಳಿಗೆ 30 ಸಾವಿರ ರೂಪಾಯಿ ನೀಡಿದ್ದರು. ದಲ್ಲಾಳಿ ಮೂಲಕವೇ ಒಂದು ಹೆಣ್ಣನ್ನು ನೋಡಲಾಗಿತ್ತು. ಕೊನೆಗೆ ಎರಡೂ ಮನೆಯವರು ಈ ಮದುವೆಗೆ ಒಪ್ಪಿಗೆ ಸೂಚಿಸಿದ್ದರು.

ಶುಕ್ರವಾರದಂದು ಗೋರಖ್‌ಪುರದ ಖಜ್ನಿ ಪ್ರದೇಶದ ಭರೋಹಿಯಾದಲ್ಲಿರುವ ಶಿವ ದೇವಾಲಯದಲ್ಲಿ ಮದುವೆ ಆಯೋಜಿಸಲಾಗಿತ್ತು. ಈ ಹಿನ್ನಲೆಯಲ್ಲಿ ಶುಕ್ರವಾರದಂದು ವಧು, ತನ್ನ ತಾಯಿಯೊಂದಿಗೆ ದೇವಸ್ಥಾನಕ್ಕೆ ಬಂದಿದ್ದರು. ಇತ್ತ ಕಮಲೇಶ್ ಅವರ ಕುಟುಂಬದೊಂದಿಗೆ ಮದುವೆ ಮಂಟಪಕ್ಕೆ ಬಂದಿದ್ದರು. ಮದುವೆ ಶಾಸ್ತ್ರಗಳು ನಡೆಯುತ್ತಿರುವಾಗಲೇ ವಧುವು ಬಾತ್ ರೂಮ್ ಗೆ ಹೋಗಬೇಕೆಂದು ಕೇಳಿಕೊಂಡಿದ್ದು, ಆ ವೇಳೆ ವಧುವಿನ ಜೊತೆಗೆ ಆಕೆಯ ತಾಯಿಯನ್ನು ಕಳುಹಿಸಲಾಗಿದೆ. ಬಾತ್ ರೂಮ್ ಗೆ ತೆರಳಿ ತುಂಬಾನೇ ಹೊತ್ತಾದರೂ ಮರಳದ ಕಾರಣ ಅನುಮಾನ ಬಂದಿದೆ. ಈ ವೇಳೆ ಕುಟುಂಬಸ್ಥರು ಹೋಗಿ ನೋಡಿದಾಗ ಈ ಪ್ರಕರಣವು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಚಪಾತಿ ಮಾಡುವುದರಿಂದ ಹಿಡಿದು ಪಾತ್ರೆ ತೊಳೆಯುವವರೆಗೆ ಹೆಣ್ಮಕ್ಕಳಿಗಿಂತ ಸೂಪರ್ ಆಗಿ ಮನೆ ಕೆಲಸ ಮಾಡುವ ಕೋತಿಯಿದು

ವಂಚನೆಗೊಳಗಾದ ಕಮಲೇಶ್, ಮದುವೆ ನಿಶ್ಚಯವಾದ ಬಳಿಕ ತನ್ನನ್ನು ಮದುವೆಯಾಗುವ ಹುಡುಗಿಗೆ ಸೀರೆ, ಒಡವೆ ಹಾಗೂ ಬ್ಯೂಟಿ ಪ್ರಾಡೆಕ್ಟ್ಸ್ ಕೊಡಿಸಿದ್ದೆ. ಮಾತನಾಡಲು ಒಳ್ಳೆಯ ಫೋನ್ ಅವಳಿಗೆ ಕೊಡಿಸಿದ್ದೆ. ಮದುವೆಯ ವೆಚ್ಚವನ್ನು ಭರಿಸಿದ್ದೆ. ನಾನು ನನ್ನ ಕುಟುಂಬವನ್ನು ಪುನರ್ನಿರ್ಮಿಸಲು ಬಯಸಿದ್ದೆ ಆದರೆ ಎಲ್ಲವನ್ನೂ ಕಳೆದುಕೊಂಡೆ. ಎರಡನೇ ಮದುವೆಯಾಗಲು ಹೊರಟದ್ದು ನಾನು ಮಾಡಿದ ತಪ್ಪು ಎಂದಿದ್ದಾರೆ. ಆದರೆ, ಈ ಘಟನೆಗೆ ಸಂಬಂಧ ಪಟ್ಟಂತೆ ಯಾವುದೇ ದೂರು ದಾಖಲಾಗಿಲ್ಲ. ದೂರು ದಾಖಲಿಸಿದರೆ ತನಿಖೆ ನಡೆಸಲಾಗುವುದು ಎಂದು ದಕ್ಷಿಣ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ತಿಳಿಸಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್