AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದಿನ ಗಿಳಿ ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ಮಾಲೀಕ!

ಉತ್ತರಪ್ರದೇಶದ ಬುಲಂದ್‌ಶಹರ್​ನಲ್ಲಿ ವ್ಯಕ್ತಿಯೊಬ್ಬರು ತಮ್ಮ ಮನೆಯಿಂದ ಕಾಣೆಯಾದ ಗಿಳಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಡಿಸೆಂಬರ್ 10ರಂದು ಪಾಠಕ್ ಎಂಬುವವರ ಮನೆಯಿಂದ ಗಿಳಿ ನಾಪತ್ತೆಯಾಗಿತ್ತು. ಆ ಗಿಳಿ ಅವರ ಮನೆಯಲ್ಲಿ ಎಲ್ಲರಿಗೂ ಬಹಳ ಆತ್ಮೀಯವಾಗಿತ್ತು. ಮಗುವಂತೆ ನೋಡಿಕೊಳ್ಳುತ್ತಿದ್ದ ಗಿಳಿ ಮನೆಯಿಂದ ತಪ್ಪಿಸಿಕೊಂಡ ನಂತರ ಆ ಮನೆಯಲ್ಲಿರುವ ಮಕ್ಕಳು ಸರಿಯಾಗಿ ಊಟವನ್ನೇ ಮಾಡಿಲ್ಲವಂತೆ.

ಮುದ್ದಿನ ಗಿಳಿ ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ಮಾಲೀಕ!
Parrot
Follow us
ಸುಷ್ಮಾ ಚಕ್ರೆ
|

Updated on:Dec 17, 2024 | 9:24 PM

ಬುಲಂದ್​ಶಹರ್: ಉತ್ತರ ಪ್ರದೇಶದ ಬುಲಂದ್‌ಶಹರ್ ನಿವಾಸಿಯಾದ ನವೀನ್ ಪಾಠಕ್ ಎಂಬ ವ್ಯಕ್ತಿ ತನ್ನ ಮುದ್ದಿನ ಗಿಳಿ ವಿಷ್ಣುವನ್ನು ಕಳೆದುಕೊಂಡಿರುವುದಾಗಿ ಜನರಿಗೆ ಮಾಹಿತಿ ನೀಡಿದ್ದಾನೆ. ಗಿಳಿ ಪತ್ತೆಯಾಗದ ಹಿನ್ನೆಲೆಯಲ್ಲಿ ತಮ್ಮ ಕುಟುಂಬ ದುಃಖದಲ್ಲಿದೆ ಎಂದು ಅವರು ಹೇಳಿದ್ದಾರೆ. ಹೀಗಾಗಿ, ತಮ್ಮ ಗಿಳಿಯ ವಿಡಿಯೋ, ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದು, ಆ ಗಿಳಿಯನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.

ಡಿಸೆಂಬರ್ 10ರಂದು ಪಾಠಕ್ ತಮ್ಮ ಮನೆಯಿಂದ ಗಿಳಿ ನಾಪತ್ತೆಯಾಗಿರುವುದನ್ನು ಕಂಡುಕೊಂಡರು. ಸುತ್ತಮುತ್ತ ಎಲ್ಲಿ ಹುಡುಕಿದರೂ ಗಿಳಿಯ ಸುಳಿವು ಸಿಗಲಿಲ್ಲ. ಗಿಳಿ ತಮ್ಮ ಮನೆಯಿಂದ ನಾಪತ್ತೆಯಾದ ನಂತರ ಆ ಕುಟುಂಬದ ಚಿಕ್ಕ ಮಕ್ಕಳು ಸರಿಯಾಗಿ ಊಟ-ತಿಂಡಿ ಮಾಡುವುದನ್ನೇ ನಿಲ್ಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಐಲೈನರ್ ವಿಡಿಯೋದಿಂದ ವೈರಲ್ ಆಗಿದ್ದ ಕೇರಳದ ಹುಡುಗಿಯ ಲಿಪ್​ಸ್ಟಿಕ್​ ರೀಲ್ಸ್​ ನೋಡಿ

ಗಿಳಿಯ ಹಿಂದಿದೆ ಮನಮಿಡಿಯುವ ಕತೆ:

ಸುಮಾರು ಎರಡು ವರ್ಷಗಳ ಹಿಂದೆ ಗಾಯಗೊಂಡಿದ್ದ ಗಿಳಿಯನ್ನು ರಕ್ಷಿಸಿ ಚಿಕಿತ್ಸೆ ನೀಡಿದ್ದ ಪಾಠಕ್ ಆ ಗಿಳಿಯನ್ನು ಮನೆಯಲ್ಲೇ ಸಾಕಿಕೊಂಡಿದ್ದರು. ಪಾಠಕ್ ಕುಟುಂಬವು ಗಿಳಿಯ ಆರೋಗ್ಯವನ್ನು ನೋಡಿಕೊಂಡಿತು. ಬಳಿಕ ಅದು ಸಂಪೂರ್ಣವಾಗಿ ಚೇತರಿಸಿಕೊಂಡಿತು. ಆ ಗಿಳಿಗೆ ವಿಷ್ಣು ಎಂದು ಹೆಸರಿಟ್ಟರು. ಆ ಗಿಳಿ ಮನುಷ್ಯನ ಧ್ವನಿಯನ್ನು ಅನುಕರಿಸುತ್ತಿತ್ತು. ಪಾಠಕ್ ಅವರನ್ನು ಗಿಳಿ “ಪಾಪಾ” ಎಂದು ಕರೆಯುತ್ತಿತ್ತು ಮತ್ತು ಅವರ ಹೆಂಡತಿಯನ್ನು “ಮಮ್ಮಿ” ಎಂದು ಕರೆಯುತ್ತಿತ್ತು. ಮನೆಯವರು ಏನೇ ಮಾತನಾಡಿದರೂ ಗಿಳಿ ಅದನ್ನು ಪುನರುಚ್ಛರಿಸುತ್ತಿತ್ತು. ಅವರ ಮಕ್ಕಳಿಗಿಂತೂ ಗಿಳಿ ಅಚ್ಚುಮೆಚ್ಚಿನದಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Tue, 17 December 24

‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್